Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...