Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...