Homeಮುಖಪುಟಪಶ್ಚಿಮ ಬಂಗಾಳ| ಎಸ್‌ಐಆರ್ ಕೆಲಸದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ಬಿಎಲ್‌ಒ

ಪಶ್ಚಿಮ ಬಂಗಾಳ| ಎಸ್‌ಐಆರ್ ಕೆಲಸದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ಬಿಎಲ್‌ಒ

- Advertisement -
- Advertisement -

ನವೆಂಬರ್ 16 ರಂದು ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯೊಬ್ಬರು ಎಸ್‌ಐಆರ್‌ ಕೆಲಸದ ಒತ್ತಡ ತಾಳರಾದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ, ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಸಮಯದಲ್ಲಿ ಬೂತ್ ಮಟ್ಟದ ಮಹಿಳಾ ಅಧಿಕಾರಿ (ಬಿಎಲ್‌ಒ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿಯ ಮಾಲ್ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಬುಧವಾರ ಬೆಳಿಗ್ಗೆ ಮಹಿಳಾ ಬಿಎಲ್‌ಒ ಅವರ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಎಸ್‌ಐಆರ್ ಕೆಲಸದ ಒತ್ತಡವನ್ನು ತಾಳಲಾರದೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ಪೊಲೀಸರ ಪ್ರಕಾರ, ಮೃತರನ್ನು ಶಾಂತಿಮಣಿ ಎಕ್ಕಾ ಎಂದು ಗುರುತಿಸಲಾಗಿದೆ. ಅವರು ಮಾಲ್ ಬಜಾರ್‌ನ ರಂಗಮತಿ ಪಂಚಾಯತ್ ನಿವಾಸಿ. ಅವರಿಗೆ ಇತ್ತೀಚೆಗೆ ಎಸ್‌ಐಆರ್ ಕೆಲಸದ ಜವಾಬ್ದಾರಿಯನ್ನು ನೀಡಲಾಯಿತು.

ಬಿಎಲ್‌ಒ ಆಗಿ, ಅವರು ಮನೆ ಮನೆಗೆ ತೆರಳಿ ಎಣಿಕೆ ನಮೂನೆಗಳನ್ನು ವಿತರಿಸಿದರು, ಭರ್ತಿ ಮಾಡಿದ ನಮೂನೆಗಳನ್ನು ವಾಪಸ್‌ ಪಡೆದಿದ್ದರು.

ಕುಟುಂಬ ಸದಸ್ಯರು ಶವ ನೋಡಿದ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಹೋಗಿ ಶವವನ್ನು ಹೊರತೆಗೆದು ಶವ ಪರೀಕ್ಷೆಗೆ ಕಳುಹಿಸಿದರು.

ಸುದ್ದಿ ತಿಳಿದ ಕೂಡಲೇ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಬುಡಕಟ್ಟು ಅಭಿವೃದ್ಧಿ ರಾಜ್ಯ ಸಚಿವ ಬುಲು ಚಿಕ್ ಬರೈಕ್ ಮೃತ ಬಿಎಲ್‌ಒ ಅವರ ಮನೆಗೆ ಭೇಟಿ ನೀಡಿದರು. ಅವರು ಮೃತರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ತಮ್ಮ ಬೆಂಬಲವನ್ನು ಭರವಸೆ ನೀಡಿದರು.

“ಇದು ದುರದೃಷ್ಟಕರ ಘಟನೆ. ಬಿಎಲ್‌ಒಗಳ ಮೇಲೆ ಹೆಚ್ಚಿನ ಕೆಲಸದ ಒತ್ತಡವಿದೆ. ಚುನಾವಣಾ ಆಯೋಗ ಇದನ್ನು ಪರಿಶೀಲಿಸಬೇಕು. ನಾವು ಬಿಎಲ್‌ಒ ಅವರ ಕುಟುಂಬದ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಸಚಿವರು ಹೇಳಿದರು.

ಮೃತರ ಕುಟುಂಬ ಸದಸ್ಯರು ಮಹಿಳೆಗೆ ಎಸ್‌ಐಆರ್ ಪ್ರಕ್ರಿಯೆಯ ‘”‘ಭಾರೀ ಕೆಲಸದ ಹೊರೆ'”‘ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅವರು ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

ಈ ತಿಂಗಳ ಆರಂಭದಲ್ಲಿ, ಕೆಲಸದ ಒತ್ತಡದಿಂದಾಗಿ ಮಹಿಳಾ ಬಿಎಲ್‌ಒ ಒಬ್ಬರು ಮೆದುಳು ಪಾರ್ಶ್ವವಾಯುವಿಗೆ ತುತ್ತಾಗಿ ಸಾವನ್ನಪ್ಪಿದರು. ಪೂರ್ವ ಬುರ್ದ್ವಾನ್ ಜಿಲ್ಲೆಯ ಮೆಮರಿಯಲ್ಲಿ ಈ ಘಟನೆ ಸಂಭವಿಸಿದೆ.

ಮೃತರನ್ನು ನಮಿತಾ ಹನ್ಸ್ಡಾ ಎಂದು ಗುರುತಿಸಲಾಗಿದೆ. ಅವರು ವೃತ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು. ಮೆಮರಿಯ ಚೌಕ್ ಬಲರಾಂಪುರ್‌ನ ಬೂತ್ ಸಂಖ್ಯೆ 278 ರ ಬಿಎಲ್‌ಒ ಆಗಿ ಕೆಲಸ ಮಾಡುತ್ತಿದ್ದರು.

ಮೃತರ ಪತಿ ಮಾಧವ್ ಹನ್ಸ್ದಾ ಅವರು ಗಣತಿ ನಮೂನೆಗಳನ್ನು ವಿತರಿಸಲು ತಮ್ಮ ಮೇಲೆ ನಿರಂತರವಾಗಿ ಒತ್ತಡವಿತ್ತು ಎಂದು ಹೇಳಿಕೊಂಡಿದ್ದರು. “””ಕೆಲಸದ ಒತ್ತಡದಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದರು” ಎಂದು ಹನ್ಸ್ದಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...