Homeಮುಖಪುಟಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

ಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

- Advertisement -
- Advertisement -

ಮುನಂಬಂ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮುನಂಬಮ್‌ನಲ್ಲಿರುವ ಆಸ್ತಿಯನ್ನು ವಕ್ಫ್ ಎಂದು ಘೋಷಿಸಿದ ನಂತರ ತೆರವು ಎದುರಿಸುತ್ತಿರುವ ಸುಮಾರು 600 ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್‌ನ ತೀರ್ಪನ್ನು ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಪ್ರಶ್ನಿಸಿದೆ.

ವಿವಾದಕ್ಕೆ ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ತನಿಖಾ ಆಯೋಗವನ್ನು ರಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಅಕ್ಟೋಬರ್ 10ರಂದು, ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಈ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜಾ ಅವಧಿಯ ಅರ್ಜಿಯಲ್ಲಿ ಕೇರಳ ವಕ್ಫ್ ಸಂರಕ್ಷಣಾ ವೇದಿಕೆಯು, ವಕ್ಫ್ ನ್ಯಾಯಮಂಡಳಿಯ ಮುಂದೆ ವಿಚಾರಣೆಗಳು ಬಾಕಿ ಇವೆ ಎಂಬ ಅಂಶವನ್ನು ನಿರ್ಲಕ್ಷಿಸುವ ಮೂಲಕ ವಿಭಾಗೀಯ ಪೀಠವು ತನ್ನ ಅಧಿಕಾರ ವ್ಯಾಪ್ತಿಯನ್ನು ಉಲ್ಲಂಘಿಸಿದೆ ಎಂದು ವಾದಿಸಿದೆ. ತನಿಖಾ ಆಯೋಗದ ಪರ ಆದೇಶ ನೀಡುವ ಮೂಲಕ ಸರ್ಕಾರದ ಅತಿಕ್ರಮಣವನ್ನು ಕಾನೂನುಬದ್ಧಗೊಳಿಸಿದೆ ಮತ್ತು ವಿಚಾರಣೆಯ ವಿಷಯವೇ ಆಗಿರದ ವಿವಾದಿತ ಆಸ್ತಿಯ ಸ್ವರೂಪದ ಬಗ್ಗೆ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅನಗತ್ಯವಾಗಿ ತನ್ನ ಅಭಿಪ್ರಾಯವನ್ನು ಅಥವಾ ಸ್ಥಿರೀಕರಣಗಳನ್ನು ನೀಡಿದೆ ಎಂದಿದೆ.

ಈ ವಿವಾದವು ಮುನಂಬಮ್‌ನಲ್ಲಿರುವ ವಕ್ಫ್‌ ಭೂಮಿಗೆ ಸಂಬಂಧಿಸಿದೆ. ಮೂಲತಃ 404.76 ಎಕರೆಗಳಷ್ಟು ವಿಸ್ತೀರ್ಣ ಹೊಂದಿದ್ದ ವಿವಾದಿತ ಭೂಮಿ, ಸಮುದ್ರ ಕೊರೆತದಿಂದಾಗಿ ಈಗ ಸುಮಾರು 135.11 ಎಕರೆಗಳಿಗೆ ಇಳಿದಿದೆ.

1950ರಲ್ಲಿ, ಸಿದ್ದಿಕ್ ಸೇಠ್ ಎಂಬುವವರು ಈ ಭೂಮಿಯನ್ನು ಫಾರೂಕ್ ಕಾಲೇಜಿಗೆ ದಾನವಾಗಿ ನೀಡಿದ್ದರು. ಆದರೆ, ಈಗ ಆ ಭೂಮಿ ಹಲವಾರು ಜನರಿಗೆ ನೆಲೆಯಾಗಿದ್ದು, ಈ ಜನರು ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಲೇಜು ಮತ್ತು ದೀರ್ಘಕಾಲದಿಂದ ಅಲ್ಲಿ ವಾಸಿಸುತ್ತಿದ್ದವರ ನಡುವೆ ಕಾನೂನು ಹೋರಾಟಕ್ಕೆ ಕಾರಣವಾಗಿದೆ.

ಈ ನಡುವೆ, ಕಾಲೇಜು ಭೂಮಿಯ ಕೆಲವು ಭಾಗಗಳನ್ನು ಅಲ್ಲಿನ ನಿವಾಸಿಗಳಿಗೆ ಮಾರಾಟ ಮಾಡಲಾಗಿದೆ. ಮಾರಾಟದ ವೇಳೆ ಆಸ್ತಿ ವಕ್ಫ್ ಭೂಮಿ ಎಂದು ನಮೂದಿಸಲು ವಿಫಲವಾಗಿದೆ ಎಂದು ಹೇಳಲಾಗ್ತಿದೆ.

2019ರಲ್ಲಿ, ಕೇರಳ ವಕ್ಫ್ ಮಂಡಳಿ (ಕೆಡಬ್ಲ್ಯುಬಿ) ಭೂಮಿಯನ್ನು ವಕ್ಫ್ ಆಸ್ತಿಯಾಗಿ ಔಪಚಾರಿಕವಾಗಿ ನೋಂದಾಯಿಸಿದೆ. ಇದರಿಂದಾಗಿ ಹಿಂದಿನ ಮಾರಾಟಗಳು ಅನೂರ್ಜಿತಗೊಂಡಿವೆ. ಆ ಬಳಿಕ ವಕ್ಫ್‌ ಭೂಮಿಯಿಂದ ತೆರವುಗೊಳಿಸುವ ಆತಂಕ ಎದುರಿಸುತ್ತಿರುವ ಜನರು ಕಾನೂನು ಮತ್ತು ಕಾನೂನೇತರ ಹೋರಾಟಗಳನ್ನು ನಡೆಸುತ್ತಿದ್ದಾರೆ.

ಮುನಂಬಂ ಭೂಮಿಯನ್ನು ವಕ್ಫ್ ಎಂದು ವರ್ಗೀಕರಿಸುವ ಕೆಡಬ್ಲ್ಯೂಬಿ ನಿರ್ಧಾರವನ್ನು ಪ್ರಶ್ನಿಸಿ ಕೋಝಿಕ್ಕೋಡ್‌ನಲ್ಲಿರುವ ವಕ್ಫ್ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ನಡುವೆ, ಸುಮಾರು 600 ಕುಟುಂಬಗಳಿಂದ ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ, ಕೇರಳ ಸರ್ಕಾರವು ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ 2024ರ ನವೆಂಬರ್‌ನಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ.

ಇದನ್ನು ಕೇರಳ ವಕ್ಫ್ ಸಂರಕ್ಷಣಾ ಸಮಿತಿಯ ಸದಸ್ಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರು ಕಾನೂನಿನ ಹೊರಗಿನ ವಕ್ಫ್ ಆಸ್ತಿಗಳನ್ನು ತನಿಖೆ ಮಾಡಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವಾದಿಸಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಏಕ ಸದಸ್ಯ ನ್ಯಾಯಾಧೀಶರು ಆಯೋಗದ ನೇಮಕ ಆದೇಶವನ್ನು ರದ್ದುಗೊಳಿಸಿ, ಅಂತಹ ಆಯೋಗವು 1995 ರ ವಕ್ಫ್ ಕಾಯ್ದೆಯಡಿಯಲ್ಲಿ ಈಗಾಗಲೇ ನಿರ್ಣಯಿಸಲಾದ ಅಥವಾ ಬಾಕಿ ಇರುವ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಕಾನೂನು ಅಧಿಕಾರವನ್ನು ಹೊಂದಿಲ್ಲ ಎಂದು ತೀರ್ಪು ನೀಡಿದ್ದರು.

ಆದರೆ, ಅಕ್ಟೋಬರ್‌ನಲ್ಲಿ ವಿಭಾಗೀಯ ಪೀಠವು ಏಕ ಸದಸ್ಯ ನ್ಯಾಯಾಧೀಶರ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದೆ. ಮುನಂಬಮ್‌ನಲ್ಲಿರುವ ವಿವಾದಿತ ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ಕೆಡಬ್ಲ್ಯೂಬಿಯ 2019 ರ ನಿರ್ಧಾರವು ಕಾನೂನುಬಾಹಿರವಾಗಿದೆ ಎಂದು ಹೇಳಿದೆ.

ವಿಭಾಗೀಯ ಪೀಠವು ಕೆಡಬ್ಲ್ಯೂಬಿಯ ನಿರ್ಧಾರವನ್ನು ರದ್ದುಗೊಳಿಸಿಲ್ಲ. ಆದರೆ, ಆಸ್ತಿಯನ್ನು ಫಾರೂಕ್ ಕಾಲೇಜಿಗೆ ನೀಡಿದ 1950ರ ಪತ್ರವು ವಕ್ಫ್ ಪತ್ರವಲ್ಲ, ಉಡುಗೊರೆ ಪತ್ರವಾಗಿದೆ ಎಂದು ತೀರ್ಪು ನೀಡಿದೆ. ಭೂಮಿಯನ್ನು ವಕ್ಫ್ ಎಂದು ಅಧಿಸೂಚನೆ ಮಾಡುವುದು ಕೆಡಬ್ಲ್ಯೂಬಿಯ ಭೂಕಬಳಿಕೆ ತಂತ್ರವಲ್ಲದೆ ಬೇರೇನೂ ಅಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...