Homeಮುಖಪುಟದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

ದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಬುಧವಾರ (ನವೆಂಬರ್ 19) ದೆಹಲಿಗೆ ಬಂದಿಳಿದಿದ್ದು, ಕೂಡಲೇ ಬಂಧಿಸಲಾಗಿದೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಬಿಷ್ಣೋಯ್‌ನನ್ನು ಗಡಿಪಾರು ಮಾಡಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವರ್ಷ ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದೀಕ್ ಅವರ ಕುಟುಂಬಕ್ಕೆ ಅನ್ಮೋಲ್ ಅನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ತಿಳಿಸಿತ್ತು ಎಂದು ವರದಿಯಾಗಿದೆ.

“ಫೆಡರಲ್ ಸರ್ಕಾರವು ಅನ್ಮೋಲ್ ಬಿಷ್ಣೋಯಿಯನ್ನು ಯುನೈಟೆಡ್ ಸ್ಟೇಟ್ಸ್‌ನಿಂದ ಗಡಿಪಾರು ಮಾಡಿದೆ ಎಂದು ನಿಮಗೆ ತಿಳಿಸಲು ಈ ಇ-ಮೇಲ್ ಕಳುಹಿಸಲಾಗಿದೆ. ಅಪರಾಧಿಯನ್ನು ನವೆಂಬರ್ 18, 2025 ರಂದು ಗಡಿಪಾರು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು 1-844-442-2553 ಗೆ ಕರೆ ಮಾಡಿ. ಈ ಅಧಿಸೂಚನೆಯನ್ನು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಕಳುಹಿಸಲಾಗಿದೆ. ಈ ಮಾಹಿತಿಯು ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಸಿದ್ದೀಕ್ ಕುಟುಂಬಕ್ಕೆ ಕಳುಹಿಸಲಾದ ಇ-ಮೇಲ್‌ನಲ್ಲಿ ಬರೆಯಲಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರನಾಗಿರುವ ಅನ್ಮೋಲ್, ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಮತ್ತು ಅಕ್ಟೋಬರ್ 2024ರಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ.

ಈ ವರ್ಷದ ಏಪ್ರಿಲ್ 14ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಅನ್ಮೋಲ್ ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನಕಲಿ ಪಾಸ್‌ಪೋರ್ಟ್ ಬಳಸಿ ಅನ್ಮೋಲ್ ದೇಶ ಬಿಟ್ಟು ಪಲಾಯನ ಮಾಡಿ, ನೇಪಾಳಕ್ಕೆ, ನಂತರ ದುಬೈ, ಕೀನ್ಯಾಕ್ಕೆ ಪ್ರಯಾಣ ಬೆಳೆಸಿ ಕೊನೆಗೆ ಅಮೆರಿಕ ತಲುಪಿದ್ದ ಎಂದು ವರದಿಗಳು ಹೇಳಿವೆ. ಕಳೆದ ನವೆಂಬರ್‌ನಲ್ಲಿ ಆತನನ್ನು ಬಂಧಿಸಿದ್ದ ಅಮೆರಿಕದ ಅಧಿಕಾರಿಗಳು, ನಂತರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಿದ್ದರು.

ಪಂಜಾಬ್‌ನ ಫಜಿಲ್ಕಾ ಮೂಲದ ಅನ್ಮೋಲ್, ಸಹೋದರ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕರಾಗಿದ್ದ. ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ. ಬೆದರಿಕೆಯೊಡ್ಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಏಪ್ರಿಲ್ 2023ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಪಂಜಾಬಿ ಮದುವೆಯಲ್ಲಿ ಆತ ಕಾಣಿಸಿಕೊಂಡಿದ್ದ ಎನ್ನಲಾಗಿದೆ.

ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಅನ್ಮೋಲ್ ಪಾತ್ರ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ವಿದೇಶದಿಂದ ಕಾರ್ಯಾಚರಣೆ ನಡೆಸುವಾಗ ಸಂಚು ರೂಪಿಸಿದ ಮತ್ತು ದಾಳಿಕೋರರಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ವ್ಯವಸ್ಥೆ ಮಾಡಿದ ಆರೋಪ ಆತನ ಮೇಲಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆಯೂ ಆತನ ಬೇಕಾಗಿದ್ದ. ಫೇಸ್‌ಬುಕ್‌ ಪೋಸ್ಟ್ ಮೂಲಕ ಆತ ಈ ದಾಳಿಯ ಹೊಣೆ ಹೊತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...