Homeಮುಖಪುಟದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

ದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಬುಧವಾರ (ನವೆಂಬರ್ 19) ದೆಹಲಿಗೆ ಬಂದಿಳಿದಿದ್ದು, ಕೂಡಲೇ ಬಂಧಿಸಲಾಗಿದೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಬಿಷ್ಣೋಯ್‌ನನ್ನು ಗಡಿಪಾರು ಮಾಡಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವರ್ಷ ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದೀಕ್ ಅವರ ಕುಟುಂಬಕ್ಕೆ ಅನ್ಮೋಲ್ ಅನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ತಿಳಿಸಿತ್ತು ಎಂದು ವರದಿಯಾಗಿದೆ.

“ಫೆಡರಲ್ ಸರ್ಕಾರವು ಅನ್ಮೋಲ್ ಬಿಷ್ಣೋಯಿಯನ್ನು ಯುನೈಟೆಡ್ ಸ್ಟೇಟ್ಸ್‌ನಿಂದ ಗಡಿಪಾರು ಮಾಡಿದೆ ಎಂದು ನಿಮಗೆ ತಿಳಿಸಲು ಈ ಇ-ಮೇಲ್ ಕಳುಹಿಸಲಾಗಿದೆ. ಅಪರಾಧಿಯನ್ನು ನವೆಂಬರ್ 18, 2025 ರಂದು ಗಡಿಪಾರು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು 1-844-442-2553 ಗೆ ಕರೆ ಮಾಡಿ. ಈ ಅಧಿಸೂಚನೆಯನ್ನು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಕಳುಹಿಸಲಾಗಿದೆ. ಈ ಮಾಹಿತಿಯು ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಸಿದ್ದೀಕ್ ಕುಟುಂಬಕ್ಕೆ ಕಳುಹಿಸಲಾದ ಇ-ಮೇಲ್‌ನಲ್ಲಿ ಬರೆಯಲಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರನಾಗಿರುವ ಅನ್ಮೋಲ್, ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಮತ್ತು ಅಕ್ಟೋಬರ್ 2024ರಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ.

ಈ ವರ್ಷದ ಏಪ್ರಿಲ್ 14ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಅನ್ಮೋಲ್ ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನಕಲಿ ಪಾಸ್‌ಪೋರ್ಟ್ ಬಳಸಿ ಅನ್ಮೋಲ್ ದೇಶ ಬಿಟ್ಟು ಪಲಾಯನ ಮಾಡಿ, ನೇಪಾಳಕ್ಕೆ, ನಂತರ ದುಬೈ, ಕೀನ್ಯಾಕ್ಕೆ ಪ್ರಯಾಣ ಬೆಳೆಸಿ ಕೊನೆಗೆ ಅಮೆರಿಕ ತಲುಪಿದ್ದ ಎಂದು ವರದಿಗಳು ಹೇಳಿವೆ. ಕಳೆದ ನವೆಂಬರ್‌ನಲ್ಲಿ ಆತನನ್ನು ಬಂಧಿಸಿದ್ದ ಅಮೆರಿಕದ ಅಧಿಕಾರಿಗಳು, ನಂತರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಿದ್ದರು.

ಪಂಜಾಬ್‌ನ ಫಜಿಲ್ಕಾ ಮೂಲದ ಅನ್ಮೋಲ್, ಸಹೋದರ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕರಾಗಿದ್ದ. ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ. ಬೆದರಿಕೆಯೊಡ್ಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಏಪ್ರಿಲ್ 2023ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಪಂಜಾಬಿ ಮದುವೆಯಲ್ಲಿ ಆತ ಕಾಣಿಸಿಕೊಂಡಿದ್ದ ಎನ್ನಲಾಗಿದೆ.

ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಅನ್ಮೋಲ್ ಪಾತ್ರ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ವಿದೇಶದಿಂದ ಕಾರ್ಯಾಚರಣೆ ನಡೆಸುವಾಗ ಸಂಚು ರೂಪಿಸಿದ ಮತ್ತು ದಾಳಿಕೋರರಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ವ್ಯವಸ್ಥೆ ಮಾಡಿದ ಆರೋಪ ಆತನ ಮೇಲಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆಯೂ ಆತನ ಬೇಕಾಗಿದ್ದ. ಫೇಸ್‌ಬುಕ್‌ ಪೋಸ್ಟ್ ಮೂಲಕ ಆತ ಈ ದಾಳಿಯ ಹೊಣೆ ಹೊತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...