Homeಕರ್ನಾಟಕ'ಮುಕ್ತ' ವಿಚಾರದ ನೆಪದಲ್ಲಿ ವಿಶ್ವವಿದ್ಯಾನಿಲಯಗಳು 'ಮತೀಯ'ವಾಗಬಾರದು: ಬರಗೂರು ರಾಮಚಂದ್ರಪ್ಪ

‘ಮುಕ್ತ’ ವಿಚಾರದ ನೆಪದಲ್ಲಿ ವಿಶ್ವವಿದ್ಯಾನಿಲಯಗಳು ‘ಮತೀಯ’ವಾಗಬಾರದು: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯಾವುದೇ ವಿಶ್ವವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಖ್ಯಾತ ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಪ್ರತಿಪಾದಿಸಿದರು.

ನಿನ್ನೆಯಷ್ಟೇ ಭಗವದ್ಗೀತೆ ಕುರಿತ ವಿಚಾರ ಸಂಕಿರಣಕ್ಕಾಗಿ ವಿವಾದ ಉಂಟಾಗಿದ್ದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯಾವುದೇ ವಿಶ್ವವಿದ್ಯಾನಿಲಯ ಮುಕ್ತವಾಗಿ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪ ಮಾಡಿದರೂ ವಿನಃ, ಅಂತಿಮವಾಗಿ ಅದು ಮತೀಯವಾಗದೆ ಇರುವಂತಹ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ” ಎಂದು ತಿಳಿದುಕೊಂಡಿದ್ದೇನೆ ಎಂದರು.

“ವಿಶ್ವವಿದ್ಯಾನಿಲಯಗಳು ಅದು ಕೇಳಬೇಕು, ಇದು ಕೇಳಬೇಕು ನಿಜ. ಆದರೆ, ಯಾರು ಸುಂದರವಾದ ಸುಳ್ಳನ್ನು ಹೇಳುತ್ತಾರೋ ಅದನ್ನು ನಂಬಿ ಬಿಡುತ್ತಾರೆ ನಮ್ಮ ಜನ; ಸುಳ್ಳು ಸುಂದರವಾಗಿರುತ್ತೆ. ಸತ್ಯ ಕಠೋರವಾಗಿರುತ್ತದೆ, ಸುಳ್ಳಿಗೆ ಸಾಕ್ಷಿ ಬೇಕಿಲ್ಲ. ಸತ್ಯಕ್ಕೆ ಸಾಕ್ಷಿ ಕೇಳುವ ಕಾಲ ಇದಾಗಿದೆ. ಹಾಗಾಗಿ ವಿಚಾರಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ ಮುಕ್ತವಾಗಿರೋಣ, ಆದರೆ ಅದನ್ನು ಪ್ರತಿಪಾದಿಸುವಲ್ಲಿ ನಮಗೊಂದು ನಿರ್ದಿಷ್ಠತೆ ಇರಬೇಕು. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಿಚಾರಗಳಲ್ಲಿ ಮುಕ್ತವಾಗಿರೋಣ. ಆದರೆ ಇಡೀ ಸಮಾಜ ಮತೀಯವಾಗಿರದಂತೆ ನೋಡಿಕೊಳ್ಳೋಣ” ಎಂದು ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣದ ಕುರಿತು ವಿವಿ ಕುಲಪತಿಗಳು ಪರೋಕ್ಷವಾಗಿ ಕಿವಿಮಾತು ಹೇಳಿದರು.

“ಯಾವುದೇ ವಿಚಾರಗಳ ಬಗ್ಗೆ ನಮಗೆ ನಿರ್ಧಿಷ್ಟವಾದ ನಿಲುವು ಇರಬೇಕಾಗುತ್ತದೆ. ಅನಂತಮೂರ್ತಿ ಅವರೂ ಇದನ್ನೆ ಹೇಳಿದ್ದು, ಬೇರೆಯವರ ವಿಚಾರ ಕೇಳಬಾರದು ಎಂದಲ್ಲ. ಕೇಳುವಾಗ ಸಹ ಮಕ್ಕಳಲ್ಲಿ ಏನು ಪರಿಣಾಮ ಆಗಬಹುದು ಎಂಬುದನ್ನು ಯೋಚಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಶರತ್ ಅನಂತಮೂರ್ತಿ ಅವರನ್ನು ಆಗ್ರಹಿಸಿದರು.

ಸಮಾರಂಭದ ಮುಖ್ಯಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟೀ ನಿರ್ದೇಶಕರಾದ ಅಶೋಕ್ ಎನ್. ಚಲವಾದಿ ಭಾಗವಹಿಸಿದ್ದರು. ಕನ್ನಡ ಭಾರತಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕುಲಸಚಿವ ಎ. ಎಲ್ ಮಂಜುನಾಥ್, ಪ್ರೋ. ಶ್ರೀಕಂಠಕೂಡಿಗೆ, ಪ್ರೊ. ಸಣ್ಣರಾಮ, ಪ್ರೊ. ಕೇಶವಶರ್ಮ, ಪ್ರೊ. ಕುಮಾರಚಲ್ಯ ಅವರುಗಳನ್ನು ಗೌರವಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...