Homeಮುಖಪುಟದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ (ನವೆಂಬರ್ 20) ತಮ್ಮ ವಾದ ಮಂಡನೆ ಮುಂದುವರೆಸಿದರು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ವಾದ ಆಲಿಸಿತು.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಶಾರ್ಜೀಲ್ ಇಮಾಮ್ ಮಾಡಿದ ಪ್ರಚೋದನಕಾರಿ ಎನ್ನಲಾದ ಭಾಷಣಗಳ ಕೆಲವು ವಿಡಿಯೋ ತುಣುಕುಗಳನ್ನು ನ್ಯಾಯಾಲಯದಲ್ಲಿ ತೋರಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.
ವಿಡಿಯೋದಲ್ಲಿ, "ಭಾರತದ ಎಲ್ಲಾ ನಗರಗಳಲ್ಲಿ ಚಕ್ಕಾ-ಜಾಮ್ (ರಸ್ತೆ ತಡೆ) ಮಾಡಬೇಕು. ಮುಸ್ಲಿಮರು ಒಗ್ಗೂಡಿ, ಅಸ್ಸಾಂ ಮತ್ತು ಉತ್ತರ-ಈಶಾನ್ಯ ಭಾರತವನ್ನು ಮುಖ್ಯ ಭೂಭಾಗದಿಂದ ಬೇರ್ಪಡಿಸುವ 'ಚಿಕನ್ ನೆಕ್' (ಸಿಲಿಗುರಿ ಕಾರಿಡಾರ್) ಪ್ರದೇಶವನ್ನು ಬೇರ್ಪಡಿಸಬೇಕು. ದೆಹಲಿಗೆ ಅಗತ್ಯ ವಸ್ತುಗಳ ಸರಬರಾಜನ್ನು ತಡೆಯಬೇಕು. ಸರ್ಕಾರವನ್ನು ಸಂಪೂರ್ಣವಾಗಿ ಪ್ಯಾರಲೈಸ್ (ಕೆಲಸ ಮಾಡಲು ಬಿಡದಂತೆ) ಮಾಡಬೇಕು" ಈ ರೀತಿಯ ಹೇಳಿಕೆಗಳನ್ನು ಶಾರ್ಜೀಲ್ ಇಮಾಮ್ ನೀಡಿರುವುದು ವಿಡಿಯೋದಲ್ಲಿ ಇದೆ ಎಂದು ವರದಿ ಹೇಳಿದೆ.

ಭಾಷಣಗಳು ಸಾಕ್ಷ್ಯದ ಭಾಗವಾಗಿದೆಯೇ ಎಂದು ಪೀಠ ಕೇಳಿದಾಗ, ಹೆಚ್ಚುವರಿ ಸಾಲಿಸಿಟರ್ ಜನರಲ್ ಸಕಾರಾತ್ಮಕವಾಗಿ ಉತ್ತರಿಸಿದರು ಎಂದು ವರದಿ ತಿಳಿಸಿದೆ.

ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಈ ವಿಡಿಯೋಗಳಲ್ಲಿ ಭಾಷಣದ ಪೂರ್ಣ ಸಂದರ್ಭವನ್ನು ತೋರಿಸದೆ, ಕೇವಲ ಆಯ್ದ ಭಾಗಗಳನ್ನು ಮಾತ್ರ ತೋರಿಸಲಾಗಿದೆ (ಅಂದರೆ ಸಂಪೂರ್ಣ ಭಾಷಣವನ್ನು ತಿರುಚಿ ಅಥವಾ ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ) ಎಂದು ಹೇಳಿದ್ದಾರೆ.

ದೆಹಲಿ ಪ್ರೊಟೆಸ್ಟ್‌ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಂ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿದ್ದ ಹಲವು ಸಂದೇಶಗಳನ್ನು ಉಲ್ಲೇಖಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, “ಆರೋಪಿಗಳ ಉದ್ದೇಶವು ಸರ್ಕಾರವನ್ನು ಉರುಳಿಸುವುದು ಮತ್ತು ಹಿಂಸಾತ್ಮಕ ಗಲಭೆಗಳ ಮೂಲಕ ಆಡಳಿತ ಬದಲಾವಣೆ (ರೆಜೀಮ್ ಚೇಂಜ್) ತರುವುದಾಗಿತ್ತು. ಈ ಗಲಭೆಗಳನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಪ್ರವಾಸದೊಂದಿಗೆ ತಾದಾತ್ಮ್ಯವಾಗಿ (ಒಟ್ಟಿಗೆ ಸಂಭವಿಸುವಂತೆ) ಯೋಜಿಸಲಾಗಿತ್ತು” ಎಂದು ವಾದಿಸಿದ್ದಾರೆ.

“ಆರೋಪಿಗಳನ್ನು ಬುದ್ಧಿಜೀವಿಗಳು ಮತ್ತು ಹೋರಾಟಗಾರರ ವೇಷ ಧರಿಸಿರುವ ರಾಷ್ಟ್ರವಿರೋಧಿಗಳು ಮತ್ತು ಸಮಾಜದ ಸ್ವಾಸ್ಥ್ಯ ಕದಡುವವರು” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

“ಜಾಮೀನು ವಿಷಯ ಬಂದಾಗಲೆಲ್ಲಾ, ನ್ಯೂಯಾರ್ಕ್ ಟೈಮ್ಸ್ ಏನನ್ನಾದರೂ ಪ್ರಕಟಿಸುತ್ತದೆ. ಬುದ್ಧಿಜೀವಿಗಳು ಎಂಬ ಸೋಗಿನಲ್ಲಿ ಅವರು ದೇಶ ವಿರೋಧಿಗಳು ಎಂದು ಅರಿತುಕೊಳ್ಳದೆ ಸಾಮಾಜಿಕ ಮಾಧ್ಯಮಗಳು ಸಕ್ರಿಯವಾಗುತ್ತವೆ” ಹೆಚ್ಚುವರಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕೆಲವು ಸಂರಕ್ಷಿತ ಸಾಕ್ಷಿಗಳ ಹೇಳಿಕೆಗಳನ್ನು ಕೂಡ ಹೆಚ್ಚುವರಿ ಸಾಲಿಸಿಟರ್ ಜನರಲ್ ಉಲ್ಲೇಖಿಸಿದ್ದಾರೆ, ಈ ವೇಳೆ ನ್ಯಾಯಾಧೀಶ ಕುಮಾರ್ ಅವರು ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯವು ಸಾಕ್ಷ್ಯವನ್ನು ಮೌಲ್ಯಮಾಪನ ಮಾಡಬಹುದೇ ಎಂದು ಕೇಳಿದ್ದಾರೆ. ಆಗ, ಸಾಕ್ಷ್ಯಗಳ ನಿಖರತೆಯನ್ನು ನ್ಯಾಯಾಲಯ ಪರಿಶೀಲಿಸುವ ಅಗತ್ಯವಿಲ್ಲ ಎಂದ ಹೆಚ್ಚುವರಿ ಸಾಲಿಸಿಟರ್ ಜನರಲ್, ಪ್ರಕರಣಕ್ಕೆ ಪ್ರಾಥಮಿಕ ಪುರಾವೆಗಳಿವೆ ಎಂದು ತೋರಿಸುವುದು ಮಾತ್ರ ನನ್ನ ಪ್ರಯತ್ನವಾಗಿದೆ ಎಂದಿದ್ದಾರೆ.

ವಿಚಾರಣೆ ನಾಳೆ (ನವೆಂಬರ್ 21) ಮುಂದುವರಿಯಲಿದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಉಮರ್ ಖಾಲಿದ್‌ ಅವರನ್ನು ಸಹ ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಜೊತೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾರಣ, ಯುಎಪಿಎ ಕಾಯ್ದೆಯ ತಪ್ಪಾದ ವ್ಯಾಖ್ಯಾನದ ಮೇಲೆ 2021ರಲ್ಲಿ ದೆಹಲಿ ಹೈಕೋರ್ಟ್ ಆ ಮೂವರಿಗೆ ಜಾಮೀನು ನೀಡಿದೆ ಎಂದು ದೆಹಲಿ ಪೊಲೀಸರು ಸೋಮವಾರ (ನವೆಂಬರ್ 17) ವಾದಿಸಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಿಂದ ಮೊದಲು, ಸ್ವಲ್ಪ ಹೊತ್ತು ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಗಳು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದೇಶದ ಸಾರ್ವಭೌಮತ್ವದ ಮೇಲೆ ದಾಳಿ ಮಾಡುವಂತಹ ಪೂರ್ವ ಯೋಜಿತ ಪಿತೂರಿಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...