Homeಕರ್ನಾಟಕಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

- Advertisement -
- Advertisement -

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಹೋರಾಟಕ್ಕೆ ಕರೆ ನೀಡಿದ್ದಾರೆ. 

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ. ಮಂಜೂರಾತಿಗೆ ಹತ್ತಾರು ಕಾನೂನುಗಳ ವಿಘ್ನಗಳನ್ನು ಮುಂದೆ ಮಾಡಲಾಗುತ್ತಿದೆ. ವಸತಿ ರಹಿತರ ವಿಚಾರಕ್ಕೆ ಸರ್ಕಾರದ ಸರಿಯಾದ ಯೋಜನೆ ಮತ್ತು ಆದ್ಯತೆ ಇಲ್ಲದಿರುವುದರಿಂದ ಕುಟುಂಬಗಳು ಬೆಳೆದಂತೆ ವಾಸಕ್ಕೆ ಜಾಗ ಸಾಕಾಗದೇ ಕುಟುಂಬದೊಳಗೇ ಆಂತರಿಕ ಕಲಹವಾಗಿ ಮಾರ್ಪಾಡಾಗುತ್ತಿದೆ. 

ಇನ್ನು ಅರಣ್ಯದ ಹೆಸರಿನಲ್ಲಿರುವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರ ಕಥೆ ಬೇರೆಯೇ ಇದೆ. ಅರಣ್ಯ ಅಧಿಕಾರಿಗಳಂತೂ ಆರಣ್ಯ ವಾಸಿಗಳಿಗೆ, ಸಾಗುವಳಿ ಮಾಡುವ ಜನರಿಗೆ ಪೀಡಕರಾಗಿದ್ದಾರೆ. ತಲೆ-ತಲಾಂತರಗಳಿಂದ ಆರಣ್ಯವಾಸಿಗಳಾಗಿ ಜೀವನ ಕಟ್ಟಿಕೊಂಡು ಅರಣ್ಯವನ್ನೂ ಕಾಪಾಡುತ್ತಾ ಬದುಕಿದವರಿಗೆ ನೆಲೆಗೊಂದು ಹಕ್ಕುಪತ್ರ, ಬದುಕಿಗೊಂದಿಷ್ಟು ತುಂಡು ಭೂಮಿಯ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಕಳೆದ 60-50 ವರ್ಷಗಳಿಂದಲೂ ಸಾಗುವಳಿ ಮಾಡುತ್ತಾ, ಅರ್ಜಿ ಸಲ್ಲಿಸಿದ್ದರೂ ಭೂಮಿ ಮಂಜೂರಾತಿ ನೀಡದೆ ಈಗ ನಗರ ಮಿತಿಯ ನೆಪದಲ್ಲಿ ಲಕ್ಷಾಂತರ ಸಂಖ್ಯೆಯ ಭೂರಹಿತರು ಭೂಮಿಯಿಂದ ವಂಚನೆಗೊಳಗಾಗುತ್ತಿದ್ದಾರೆ. ಇದು ಬಡವರ ಪಾಲಿಗೆ

ಮುಗಿಯದ ಗೋಳಿನ ಕಥೆಗಳ ದೊಡ್ಡ ಸರಮಾಲೆಯೇ ಆಗಿದೆಯಾದರೂ ಸರ್ಕಾರಗಳು ಇದನ್ನು ಸರಿಪಡಿಸುವ, ಬಡವರಿಗೆ ನ್ಯಾಯ ಕೊಡಿಸುವ ವಿಚಾರಕ್ಕೆ ಕೈಹಾಕದೆ ಕಾಲ ತಳ್ಳುತ್ತಲೇ ಇದ್ದಾರೆ. ಬಡವರು ಇನ್ನೆಷ್ಟು ವರ್ಷಗಳ ಕಾಲ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಹಲವು ರೀತಿಯ ಹೆಸರಿನಲ್ಲಿ ಭೂಮಿಗಳಿವೆ. ಸರ್ಕಾರಿ, ಗೋಮಾಳ (ಗಾಯರಾಣ), ಹುಲ್ಲುಬನಿ, ಖರಾಬ್, ಖಾರೀಜ್ ಖಾತಾ, ಸೊಪ್ಪಿನ ಬೆಟ್ಟ, ಹರಳು ಪ್ರದೇಶ, ಗುಡ್ಡ ಪ್ರದೇಶ, ಕಲ್ಲು ಪ್ರದೇಶ, ಸೇಂದಿವನ, ಅನಾಧೀನ, ಕಾವಲು, ಅಮೃತ ಮಹಲ್ ಕಾವಲು, ಬಾಣೆ, ಪೈಸಾರಿ, ಅರಣ್ಯ, ಸಾಮಾಜಿಕ ಅರಣ್ಯ, ಲ್ಯಾಂಡ್ ಬ್ಯಾಂಕ್ ಇನ್ನಿತರೆ ಹೆಸರಿನಲ್ಲಿರುವ ಈ ಎಲ್ಲಾ ಭೂಮಿಗಳಿಗೆ ಇವುಗಳ ಉಪಯೋಗದ ಬಗ್ಗೆ ಅದರದೇ ಆದ ಕಾನೂನುಗಳನ್ನು ರೂಪಿಸಲಾಗಿದೆ. ಈಗಿನ ಸರ್ಕಾರದ ಪ್ರಕಾರ ಮೇಲಿನ ಯಾವ ಭೂಮಿಗಳನ್ನೂ ಫಾರಂ ನಂ. 50-53-57ರಲ್ಲಿ ಸಲ್ಲಿಸಿರುವ ಅರ್ಜಿದಾರರಿಗೆ ಮಂಜೂರಾತಿ ಮಾಡಲು ಅವಕಾಶವಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ತಾನು ಬಡವರ ಪರ, ಸಂವಿಧಾನ ಪರ ಎಂದು ಸಾಬೀತು ಪಡಿಸಲು, ಈಗಿರುವ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು. 

5-6 ದಶಕಗಳ ಕಾಲದಿಂದಲೂ ಇರುವ ಸಮಸ್ಯೆಯಿಂದಾಗಿ ರೈತರು ಅಲೆದಲೆದು ಸವಕಳಿಯಾಗಿದ್ದಾರೆ. ಇನ್ನು ಮುಂದೆ ಅರ್ಜಿ ಹಿಡಿದು ಪುನಃ ಅಲೆಸುವುದೆಂದರೆ ಜನರನ್ನು ಹಿಂಸೆಗೆ ಗುರಿಪಡಿಸಿದಂತಾಗುತ್ತದೆ. ಆದ್ದರಿಂದ ಸರಕಾರ ಬಡವರಿಗಾಗಿ ‘ಒನ್ ಟೈಮ್ ಸೆಟಲೆಂಟ್’ ಎಂಬ ತೀರ್ಮಾನ ಕೈಗೊಂಡು, ಭೂಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಆಗ್ರಹಿಸುತ್ತದೆ.

ಹೋರಾಟ ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು ಮಾಡಲೇಬೇಕೆಂದು ಒತ್ತಾಯಿಸಿ ನಾಡಿನ ರೈತ-ದಲಿತ-ಕಾರ್ಮಿಕ-ಮಹಿಳೆ-ವಿದ್ಯಾರ್ಥಿ ಯುವಜನ ಮತ್ತಿತರೆ ಸಮುದಾಯಗಳ ಐಕ್ಯ ವೇದಿಕೆಯಾದ ‘ಸಂಯುಕ್ತ ಕರ್ನಾಟಕ’ ನೇತೃತ್ವದಲ್ಲಿ ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ನವೆಂಬರ್ 21ರಂದು ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಹೋರಾಟಗಾರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಕೆ. ಮರಿಯಪ್ಪ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...