Homeಮುಖಪುಟಆರ್ಟಿಕಲ್ 240 ನೇ ವಿಧಿಗೆ ಚಂಡೀಗಢ ಆಡಳಿತ; ಕೇಂದ್ರದ ನಿರ್ಧಾರಕ್ಕೆ ಪಂಜಾಬ್‌ನಲ್ಲಿ ವಿರೋಧ

ಆರ್ಟಿಕಲ್ 240 ನೇ ವಿಧಿಗೆ ಚಂಡೀಗಢ ಆಡಳಿತ; ಕೇಂದ್ರದ ನಿರ್ಧಾರಕ್ಕೆ ಪಂಜಾಬ್‌ನಲ್ಲಿ ವಿರೋಧ

- Advertisement -
- Advertisement -

ಕೇಂದ್ರ ಸರ್ಕಾರವು ಸಂವಿಧಾನದ 240 ನೇ ವಿಧಿಯ ವ್ಯಾಪ್ತಿಗೆ ಚಂಡೀಗಢವನ್ನು ತರುವ ಉದ್ದೇಶವನ್ನು ಸೂಚಿಸಿದ ನಂತರ ಪಂಜಾಬ್‌ನಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎದ್ದಿದೆ, ಇದು ಕೇಂದ್ರಾಡಳಿತ ಪ್ರದೇಶಕ್ಕೆ ರಾಷ್ಟ್ರಪತಿಗಳು ನೇರವಾಗಿ ನಿಯಮಗಳನ್ನು ರೂಪಿಸಲು ಅಧಿಕಾರ ನೀಡುವ ಕ್ರಮವಾಗಿದೆ.

ಪ್ರಸ್ತುತ, ಚಂಡೀಗಢ ಪಂಜಾಬ್ ರಾಜ್ಯಪಾಲರ ಆಡಳಿತದಲ್ಲಿದ್ದು, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಜಂಟಿ ರಾಜಧಾನಿಯಾಗಿ ಕಾರ್ಯನಿರ್ವಹಿಸುತ್ತದೆ.

ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, 2025 ಅನ್ನು ಡಿಸೆಂಬರ್ 1 ರಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪರಿಚಯಿಸುವ ಸಾಧ್ಯತೆಯಿದೆ ಎಂದು ಸಂಸತ್ತಿನ ಬುಲೆಟಿನ್ ಸೂಚಿಸಿದೆ. ಇದು ಪಂಜಾಬ್‌ನಲ್ಲಿ ರಾಜಕೀಯ ವಲಯದಲ್ಲಿ ಪ್ರತಿಭಟನೆ ಹುಟ್ಟುಹಾಕಿದೆ.

ಎಎಪಿ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ ಸೇರಿದಂತೆ ಇತರೆ ಪಕ್ಷಗಳು ಈ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿವೆ. ಕೇಂದ್ರದ ನಿರ್ಧಾರವನ್ನು “ಪಂಜಾಬ್ ವಿರೋಧಿ” ಎಂದು ಕರೆದಿವೆ.

ಚಂಡೀಗಢವನ್ನು ಪ್ರಸ್ತುತ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಮತ್ತು ಪುದುಚೇರಿಗಳನ್ನು ಒಳಗೊಂಡಿರುವ 240 ನೇ ವಿಧಿಯ ಅಡಿಯಲ್ಲಿ ಚಂಡೀಗಢವನ್ನು ಸೇರಿಸುವುದರಿಂದ ನಗರದ ಮೇಲಿನ ಪಂಜಾಬ್‌ನ ದೀರ್ಘಕಾಲದ ಹಕ್ಕನ್ನು ದುರ್ಬಲಗೊಳಿಸುತ್ತದೆ ಎಂದು ಅವರು ವಾದಿಸುತ್ತಾರೆ.

1966 ರಲ್ಲಿ ಹರಿಯಾಣವನ್ನು ಪಂಜಾಬ್‌ನಿಂದ ಬೇರ್ಪಡಿಸಿದಾಗ ಚಂಡೀಗಢವನ್ನು ಕೇಂದ್ರಾಡಳಿತ ಪ್ರದೇಶವಾಗಿ ರಚಿಸಲಾಯಿತು. ಅಂದಿನಿಂದ ಉಭಯ ರಾಜ್ಯಗಳ ಹಂಚಿಕೆಯ ರಾಜಧಾನಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಪಂಜಾಬ್ ರಾಜ್ಯಪಾಲರು ಚಂಡೀಗಢದ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರೂ, ರಾಜ್ಯದ ರಾಜಕೀಯ ನಾಯಕರು ಚಂಡೀಗಢ ಪಂಜಾಬ್‌ಗೆ ಸೇರಿದ್ದು ಮತ್ತು ಹರಿಯಾಣಕ್ಕೆ ಪ್ರತ್ಯೇಕ ರಾಜಧಾನಿ ಇರಬೇಕು ಎಂದು ನಿರಂತರವಾಗಿ ವಾದಿಸುತ್ತಿದ್ದಾರೆ.

ಮುಖ್ಯಮಂತ್ರಿ ಭಗವಂತ್ ಮಾನ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ಬಿಜೆಪಿ ನೇತೃತ್ವದ ಕೇಂದ್ರವು ಪಂಜಾಬ್‌ನ ರಾಜಧಾನಿಯನ್ನು ‘ಕಿತ್ತುಕೊಳ್ಳಲು ಪಿತೂರಿ ನಡೆಸುತ್ತಿದೆ’ ಎಂದು ಹೇಳಿಕೊಂಡರು.

“ಚಂಡೀಗಢವು ರಾಜ್ಯದ ಅವಿಭಾಜ್ಯ ಅಂಗವಾಗಿತ್ತು, ಈಗಲೂ ಇದೆ ಮತ್ತು ಯಾವಾಗಲೂ ಉಳಿಯುತ್ತದೆ. ನಗರವನ್ನು ನಿರ್ಮಿಸಲು ಹಳ್ಳಿಗಳನ್ನು ತ್ಯಾಗ ಮಾಡಲಾಗಿದೆ ಮತ್ತು ಪಂಜಾಬ್ ಮಾತ್ರ ಸರಿಯಾದ ಹಕ್ಕನ್ನು ಹೊಂದಿದೆ” ಎಂದು ಹೇಳಿದರು.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಈ ಕ್ರಮದ ಮೇಲೆ ದಾಳಿ ನಡೆಸಿ, ಇದನ್ನು ಪಂಜಾಬ್‌ನ ಗುರುತಿನ ಮೇಲಿನ ದಾಳಿ ಎಂದು ಕರೆದರು.

“ಇತಿಹಾಸವೇ ಸಾಕ್ಷಿ: ಪಂಜಾಬಿಗಳು ಎಂದಿಗೂ ಸರ್ವಾಧಿಕಾರಕ್ಕೆ ತಲೆಬಾಗಿಲ್ಲ” ಎಂದು ಅವರು ಬರೆದಿದ್ದಾರೆ. “ಭದ್ರತೆ, ಧಾನ್ಯಗಳು ಮತ್ತು ನೀರಿನ” ಮೂಲಕ ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ ಪಂಜಾಬ್‌ಗೆ ಈಗ ಅದರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಈ ಬೆಳವಣಿಗೆಯನ್ನು ಅನಗತ್ಯ ಎಂದು ಟೀಕಿಸಿದ್ದಾರೆ. ಪಂಜಾಬ್‌ನ ಹಕ್ಕು ಕಸಿದುಕೊಳ್ಳುವ ಯಾವುದೇ ಪ್ರಯತ್ನವು ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಎಚ್ಚರಿಸಿದರು.

“ನೀವು ಪಂಜಾಬ್‌ನೊಂದಿಗೆ ಇದ್ದೀರೋ ಅಥವಾ ಪಂಜಾಬ್ ವಿರುದ್ಧ ಇದ್ದೀರೋ ಎಂಬುದು ಇಂದು ನೀವು ತೆಗೆದುಕೊಳ್ಳುವ ನಿಲುವಿನಿಂದ ನಿರ್ಧರಿಸಲ್ಪಡುತ್ತದೆ” ಎಂದು ಹೇಳುವ ಮೂಲಕ ಅವರು ರಾಜ್ಯದ ಬಿಜೆಪಿ ನಾಯಕರನ್ನು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕರೆ ನೀಡಿದರು.

“ಪಂಜಾಬ್ ವಿರೋಧಿ ಮಸೂದೆ ಒಕ್ಕೂಟ ರಚನೆಯ ಮೇಲಿನ ಸ್ಪಷ್ಟ ದಾಳಿ” ಎಂದು ಅಕಾಲಿ ದಳದ ಮುಖ್ಯಸ್ಥ ಮತ್ತು ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದರು. “ಪ್ರತಿಯೊಂದು ರಂಗದಲ್ಲೂ ಕೇಂದ್ರದ ನಿರ್ಧಾರದ ವಿರುದ್ಧ ಹೋರಾಡುವುದಾಗಿ” ಪ್ರತಿಜ್ಞೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...