Homeಮುಖಪುಟ‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

- Advertisement -
- Advertisement -

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರ ಶ್ರಮವೂ ಇದೆ. ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ತನ್ನಿಂದಲೇ ಸರ್ಕಾರ ರಚನೆಯಾಗಿದೆ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಅದು ನ್ಯಾಯವೂ ಅಲ್ಲ. ಎಲ್ಲರದ್ದೂ ಸಮಾನ ಶ್ರಮವಿದೆ, ಸಮಾನ ಪ್ರಾಧಾನ್ಯತೆ ಸಿಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಾಸಕರಾಗಿ ಚುನಾಯಿತರಾದ ಎಲ್ಲರದ್ದೂ ಸಮಾನ ಶ್ರಮವಿದೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ. ಯಾರೋ ಇಬ್ಬರು ಇದರ ‘ಕ್ರೆಡಿಟ್‌’ ತೆಗೆದುಕೊಳ್ಳಲು ಬರುವುದಿಲ್ಲ’ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಟೀಕಿಸಿದರು.

‘ಡಾ.ಜಿ. ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ದುಡಿದಿದ್ದಾರೆ. ಅವರ ಕಾಲದಲ್ಲಿ ಮಾಡಿದ ಕಾರ್ಯಕ್ರಮಗಳ ಕಾರಣದಿಂದ ಕಾಂಗ್ರೆಸ್‌ಗೆ ಬಲ ಬಂದಿದೆ. ಸರ್ಕಾರ ರಚನೆ ಮಾಡುವಷ್ಟು ಪಕ್ಷವನ್ನು ಸಿದ್ಧಪಡಿಸಿದವರಲ್ಲಿ ಅವರೂ ಒಬ್ಬರು. ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನನ್ನ ಒತ್ತಾಸೆ’ ಎಂದರು.

‘ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಪರಮೇಶ್ವರ ಅವರು ಈ ಹಿಂದೆಯೂ ಹೇಳಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ನಾನು ಕೂಡ ಆಕಾಂಕ್ಷಿ ಆಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟರು, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಹೇಳಿದರು.

‘ಒನ್‌ ಮ್ಯಾನ್‌ ಶೋ’ ವಿಚಾರವನ್ನು ನಾನು ನಂಬುವುದಿಲ್ಲ. ಮುಖ್ಯಮಂತ್ರಿ ಯಾರಾಗಬೇಕು, ಯಾವಾಗ ಆಗಬೇಕು ಎಂದು ಹೈಕಮಾಂಡ್‌ ನಿರ್ಧರಿಸುತ್ತದೆ. ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರ ನನಗೆ ಗೊತ್ತಿಲ್ಲ. ಅದು ಬೆಂಗಳೂರಿನಲ್ಲಿ ನಡೆದಿದ್ದಲ್ಲ. ಅಂಥ ಚರ್ಚೆಗಳು ದೆಹಲಿಯಲ್ಲಿ ಮಾತ್ರ ನಡೆಯುತ್ತವೆ. ಸದ್ಯ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆಗೆ ದೆಹಲಿಗೆ ಬನ್ನಿ ಎಂದು ನನ್ನನ್ನು ಕರೆದರೆ ಖಂಡಿತ ಹೋಗುತ್ತೇನೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಕೆಲವರಿಗೆ ಅಧಿಕಾರ ಇಂದೇ ಬರಬಹುದು ಅಥವಾ ಇಂದೇ ಹೋಗಬಹುದು. ಮತ್ತೆ ಕೆಲವರಿಗೆ ಒಂದು ವರ್ಷ ಬಿಟ್ಟು ಬರಬಹುದು, ಕೆಲವರಿಗೆ ಹೋಗಲೂಬಹುದು. ಇಂಥದ್ದಕ್ಕೆಲ್ಲ ‘ತ್ಯಾಗ’ ಎಂಬ ಪದ ಸರಿಯಲ್ಲ’ ಎಂದೂ ಅವರು ಸೂಚ್ಯವಾಗಿ ಹೇಳಿದರು.

‘ಮಾಜಿ ಸಚಿವ ರಾಜಣ್ಣ ಹೇಳಿದಂತೆ ನವೆಂಬರ್‌ನಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಈಗಾಗಲೇ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. ಶೀಘ್ರ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಿದ್ದಾರೆ’ ಎಂದು ಸಚಿವ ಹೇಳಿದರು.

‘ನೀವು ಸಿ.ಎಂ ರೇಸ್‌ನಲ್ಲಿ ನಿಂತಿದ್ದೀರಾ’ ಎಂಬ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಸತೀಶ ಜಾರಕಿಹೊಳಿ, ‘ಅದನ್ನು ಕೇಳಬೇಡಿ. ಈಗ ಹೇಳುವ ಅಗತ್ಯವೇ ಇಲ್ಲ’ ಎಂದರು.

‘1960ರಲ್ಲಿ ತೇನ್‌ಸಿಂಗ್ ನೊರ್ಗೆ ಹಿಮಾಲಯ ಪರ್ವತ ಏರಿದರು. ಆಗ ಜಗತ್ತಿನ ಎಲ್ಲ ಪತ್ರಿಕೆಗಳೂ ತೇನ್‌ಸಿಂಗ್ ಬಗ್ಗೆ ಮಾತ್ರ ಬರೆದವು. ಅವರ ಜೊತೆಗೆ ಇನ್ನೂ 14 ಜನ ಕೂಡ ಇದ್ದರು. ಅವರ ಹೆಸರು ಎಲ್ಲೂ ಬರಲಿಲ್ಲ. ಇದು ಹಾಗೇ ಆಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಡಿ.ಕೆ.ಶಿವಕುಮಾರ್‌ ವಿರುದ್ಧ ವ್ಯಂಗ್ಯವಾಡಿದರು.

ಡಿ.ಕೆ.ಶಿವಕುಮಾರ ಜೈಲಿಗೆ ಹೋಗಿ ಶಾಸಕರನ್ನು ಭೇಟಿ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಶಾಸಕರಿದ್ದಾರೆ. ಹಾಗಾಗಿ, ಹೋಗಿ ಭೇಟಿಯಾಗಿ ಬಂದಿದ್ದಾರೆ. ಹಿಂದೆಯೂ ಒಂದು ಸಾರಿ ಹೋಗಿ ಭೇಟಿಯಾಗಿದ್ದರು. ಇದರಲ್ಲಿ ‘ಅಂಡರ್ ಕರೆಂಟ್ ಶಾಕ್’ ಏನಿಲ್ಲ. ನಮ್ಮದೂ ಕರೆಂಟ್ ಏನಿಲ್ಲ. ಎಲ್ಲವೂ ಸರಿ ಇದೆ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...