Homeಮುಖಪುಟಎಸ್‌ಐಆರ್ : 60 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ; ಇಬ್ಬರು ಅಮಾನತು

ಎಸ್‌ಐಆರ್ : 60 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ; ಇಬ್ಬರು ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ನೋಯ್ಡಾ ಆಡಳಿತವು ಮೂರು ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತ್ತು ಏಳು ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಬಹ್ರೈಚ್‌ನಲ್ಲಿ ಇಬ್ಬರು ಬಿಎಲ್‌ಒಗಳನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಮತ್ತು ಬಿಜೆಪಿ ನಾಯಕರ ದೂರಿನ ಮೇರೆಗೆ ಮತ್ತೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನೋಯ್ಡಾದಲ್ಲಿ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 32ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ನೋಯ್ಡಾದ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೇಧಾ ರೂಪಮ್ ಅವರ ಆದೇಶದ ಮೇರೆಗೆ, ನೋಯ್ಡಾದ ಮೂರು ವಿಧಾನಸಭಾ ವಿಭಾಗಗಳ ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ನಿಯಮ ಪಾಲಿಸದ ಬಿಎಲ್‌ಒಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಿದ್ದಾರೆ.

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಎಸ್‌ಐಆರ್ ಹಂತ-IIರ ಭಾಗವಾಗಿ ಒಂದು ತಿಂಗಳ ಮನೆ ಮನೆ ಎಣಿಕೆ ಪ್ರಕ್ರಿಯೆ ಮುಗಿಸಲು ಡಿಸೆಂಬರ್ 4ರ ಗಡುವು ವಿಧಿಸಲಾಗಿದೆ. ಈ ಅವಧಿಯಲ್ಲಿ ಬಿಎಲ್‌ಒಗಳು ಫಾರ್ಮ್‌ಗಳ ವಿತರಣೆ ಮತ್ತು ಸಂಗ್ರಹಣೆ ಮಾಡಬೇಕಿದೆ.

ಮೊದಲ ಹಂತದಲ್ಲಿ ನಡೆದ ಬಿಹಾರದ ಎಸ್‌ಐಆರ್ ಪ್ರಕ್ರಿಯೆಗಿಂತ ಭಿನ್ನವಾಗಿ, ಮನೆ ಮನೆ ಎಣಿಕೆ ಹಂತದಲ್ಲಿಯೇ ಮತದಾರರ ಅಥವಾ ಅವರ ಪೋಷಕರ ಹಳೆಯ ಮತದಾರರ ಪಟ್ಟಿಯೊಂದಿಗೆ ಫಾರ್ಮ್‌ಗಳಲ್ಲಿನ ಮತದಾರರ ವಿವರಗಳನ್ನು ಹೊಂದಿಸುವ ಜವಾಬ್ದಾರಿಯನ್ನು ಬಿಎಲ್‌ಒಗಳಿಗೆ ವಹಿಸಲಾಗಿದೆ.

ನೋಯ್ಡಾ ಆಡಳಿತದ ಪ್ರಕಾರ, ಪದೇ ಪದೇ ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದರೂ, ಹಲವಾರು ಬಿಎಲ್‌ಒಗಳು ತಮ್ಮ ನಿಯೋಜಿತ ಪ್ರದೇಶಗಳಿಗೆ ವರದಿ ಮಾಡಿಲ್ಲ ಮತ್ತು ಹಿರಿಯ ಅಧಿಕಾರಿಗಳು ನೀಡಿದ ಆದೇಶಗಳನ್ನು ಪಾಲಿಸಲು ವಿಫಲರಾಗಿದ್ದಾರೆ.

ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಎರಡು ದಾದ್ರಿಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ 18 ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಒಂದರಲ್ಲಿ 12 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸರ್ಕಾರಿ ಶಾಲಾ ಶಿಕ್ಷಕರು, ಮತ್ತು ಇನ್ನೊಂದರಲ್ಲಿ ಮೇಲ್ವಿಚಾರಕರಾಗಿ ನೇಮಕಗೊಂಡ ಆರು ಮಂದಿಯ ಹೆಸರಿದೆ ಎಂದು ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಇಕೋಟೆಕ್ ಹಂತ 1 ಪೊಲೀಸ್ ಠಾಣೆಯಲ್ಲಿ, 33 ಬಿಎಲ್‌ಒಗಳು ಮತ್ತು ಒಬ್ಬ ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೆವರ್ ಪೊಲೀಸ್ ಠಾಣೆಯಲ್ಲಿ, ಅಧಿಕಾರಿಗಳು 17 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರತಿಯೊಂದು ಎಫ್‌ಐಆರ್ ಅನ್ನು ಆಯಾ ಪ್ರದೇಶದ ಎಸ್‌ಡಿಎಂ ದಾಖಲಿಸಿದ್ದಾರೆ. ಎಸ್‌ಡಿಎಂಗಳು ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸ್ಥಳೀಯ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಆಗಿ ಕಾರ್ಯನಿರ್ವಹಿಸಲು ನೇಮಕಗೊಂಡಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ಸೂಚನೆಗಳಿಗೆ ಅನುಗುಣವಾಗಿ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ‘ವಾರ್ ರೂಮ್’ ನೀಡಿದ ವಿವರವಾದ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶನಿವಾರ, ಜಿಲ್ಲಾಧಿಕಾರಿ ರೂಪಮ್ ಅವರು ಕಲೆಕ್ಟರೇಟ್‌ನಲ್ಲಿ ಸೆಕ್ಟರ್ ಮತ್ತು ವಲಯ ಮ್ಯಾಜಿಸ್ಟ್ರೇಟ್‌ಗಳೊಂದಿಗೆ ಪರಿಶೀಲನಾ ಸಭೆ ನಡೆಸಿ, ಪರಿಷ್ಕರಣಾ ಕಾರ್ಯವನ್ನು ಪರಿಣಾಮಕಾರಿ, ಪಾರದರ್ಶಕ ಮತ್ತು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದ್ದಾರೆ. ಪ್ರತಿಯೊಬ್ಬ ಬಿಎಲ್‌ಒ ತಮ್ಮ ಪ್ರದೇಶವನ್ನು ಸಮಯಕ್ಕೆ ಸರಿಯಾಗಿ ತಲುಪಬೇಕು, ಮನೆ ಮನೆಗೆ ಭೇಟಿ ನೀಡಬೇಕು ಮತ್ತು ಹೊಸ ಮತದಾರರಿಗೆ ಫಾರ್ಮ್ 6 ಮತ್ತು ವರ್ಗಾವಣೆ ಅಥವಾ ತಿದ್ದುಪಡಿಗಳಿಗಾಗಿ ಫಾರ್ಮ್ 8 ಅನ್ನು ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯ ಮಾಡಿದರೆ ನೋಟಿಸ್‌ ಜಾರಿ ಮಾಡಲಾಗುವುದು ಮತ್ತು ಸ್ಪಷ್ಟೀಕರಣ ಕೇಳಲಾಗುವುದು. ಪದೇ ಪದೇ ಆದೇಶ ಪಾಲಿಸದಿರುವುದು ವೇತನ ತಡೆಹಿಡಿಯುವಿಕೆ ಮತ್ತು ಶಿಸ್ತು ಕ್ರಮಕ್ಕೆ ಕಾರಣವಾಗಬಹುದು ಎಂದು ಆಡಳಿತವು ಈ ಹಿಂದೆ ಎಚ್ಚರಿಸಿತ್ತು.

ಬಹ್ರೈಚ್‌ನ ಬೇಸಿಕ್ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಆಶಿಶ್ ಕುಮಾರ್ ಸಿಂಗ್ ಮಾತನಾಡಿ, ಬಿಎಲ್‌ಒ ಆಗಿ ನೇಮಕಗೊಂಡಿದ್ದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಮಾ ನಫೀಸ್, ಹಿರಿಯ ಅಧಿಕಾರಿಗಳು ನೀಡಿದ ಜ್ಞಾಪನೆಗಳನ್ನು ಲೆಕ್ಕಿಸದೆ ಕರ್ತವ್ಯಕ್ಕೆ ವರದಿ ಮಾಡುವಂತೆ ಸೂಚಿಸಿದ ಲಿಖಿತ ಸೂಚನೆಗಳು ಮತ್ತು ಪದೇ ಪದೇ ಫೋನ್ ಕರೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿದ್ದಾರೆ. ಅದೇ ರೀತಿ, ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ಅನುರಾಗ್, ಎಸ್‌ಐಆರ್ ಅಡಿಯಲ್ಲಿ ತನಗೆ ನಿಯೋಜಿಸಲಾದ ಜವಾಬ್ದಾರಿಗಳನ್ನು ನಿರ್ವಹಿಸಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ನಾಯಕ ಅಂಕಿತ್ ಕುಮಾರ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಾಥಮಿಕ ಶಾಲೆಯ ಬೋಧಕ ಬಿಎಲ್‌ಒ ಅಭಿಷೇಕ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...