Homeಮುಖಪುಟಎಸ್‌ಐಆರ್ : 60 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ; ಇಬ್ಬರು ಅಮಾನತು

ಎಸ್‌ಐಆರ್ : 60 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ; ಇಬ್ಬರು ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ನೋಯ್ಡಾ ಆಡಳಿತವು ಮೂರು ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತ್ತು ಏಳು ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಬಹ್ರೈಚ್‌ನಲ್ಲಿ ಇಬ್ಬರು ಬಿಎಲ್‌ಒಗಳನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಮತ್ತು ಬಿಜೆಪಿ ನಾಯಕರ ದೂರಿನ ಮೇರೆಗೆ ಮತ್ತೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನೋಯ್ಡಾದಲ್ಲಿ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 32ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ನೋಯ್ಡಾದ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೇಧಾ ರೂಪಮ್ ಅವರ ಆದೇಶದ ಮೇರೆಗೆ, ನೋಯ್ಡಾದ ಮೂರು ವಿಧಾನಸಭಾ ವಿಭಾಗಗಳ ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ನಿಯಮ ಪಾಲಿಸದ ಬಿಎಲ್‌ಒಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಿದ್ದಾರೆ.

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಎಸ್‌ಐಆರ್ ಹಂತ-IIರ ಭಾಗವಾಗಿ ಒಂದು ತಿಂಗಳ ಮನೆ ಮನೆ ಎಣಿಕೆ ಪ್ರಕ್ರಿಯೆ ಮುಗಿಸಲು ಡಿಸೆಂಬರ್ 4ರ ಗಡುವು ವಿಧಿಸಲಾಗಿದೆ. ಈ ಅವಧಿಯಲ್ಲಿ ಬಿಎಲ್‌ಒಗಳು ಫಾರ್ಮ್‌ಗಳ ವಿತರಣೆ ಮತ್ತು ಸಂಗ್ರಹಣೆ ಮಾಡಬೇಕಿದೆ.

ಮೊದಲ ಹಂತದಲ್ಲಿ ನಡೆದ ಬಿಹಾರದ ಎಸ್‌ಐಆರ್ ಪ್ರಕ್ರಿಯೆಗಿಂತ ಭಿನ್ನವಾಗಿ, ಮನೆ ಮನೆ ಎಣಿಕೆ ಹಂತದಲ್ಲಿಯೇ ಮತದಾರರ ಅಥವಾ ಅವರ ಪೋಷಕರ ಹಳೆಯ ಮತದಾರರ ಪಟ್ಟಿಯೊಂದಿಗೆ ಫಾರ್ಮ್‌ಗಳಲ್ಲಿನ ಮತದಾರರ ವಿವರಗಳನ್ನು ಹೊಂದಿಸುವ ಜವಾಬ್ದಾರಿಯನ್ನು ಬಿಎಲ್‌ಒಗಳಿಗೆ ವಹಿಸಲಾಗಿದೆ.

ನೋಯ್ಡಾ ಆಡಳಿತದ ಪ್ರಕಾರ, ಪದೇ ಪದೇ ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದರೂ, ಹಲವಾರು ಬಿಎಲ್‌ಒಗಳು ತಮ್ಮ ನಿಯೋಜಿತ ಪ್ರದೇಶಗಳಿಗೆ ವರದಿ ಮಾಡಿಲ್ಲ ಮತ್ತು ಹಿರಿಯ ಅಧಿಕಾರಿಗಳು ನೀಡಿದ ಆದೇಶಗಳನ್ನು ಪಾಲಿಸಲು ವಿಫಲರಾಗಿದ್ದಾರೆ.

ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಎರಡು ದಾದ್ರಿಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ 18 ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಒಂದರಲ್ಲಿ 12 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸರ್ಕಾರಿ ಶಾಲಾ ಶಿಕ್ಷಕರು, ಮತ್ತು ಇನ್ನೊಂದರಲ್ಲಿ ಮೇಲ್ವಿಚಾರಕರಾಗಿ ನೇಮಕಗೊಂಡ ಆರು ಮಂದಿಯ ಹೆಸರಿದೆ ಎಂದು ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಇಕೋಟೆಕ್ ಹಂತ 1 ಪೊಲೀಸ್ ಠಾಣೆಯಲ್ಲಿ, 33 ಬಿಎಲ್‌ಒಗಳು ಮತ್ತು ಒಬ್ಬ ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೆವರ್ ಪೊಲೀಸ್ ಠಾಣೆಯಲ್ಲಿ, ಅಧಿಕಾರಿಗಳು 17 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರತಿಯೊಂದು ಎಫ್‌ಐಆರ್ ಅನ್ನು ಆಯಾ ಪ್ರದೇಶದ ಎಸ್‌ಡಿಎಂ ದಾಖಲಿಸಿದ್ದಾರೆ. ಎಸ್‌ಡಿಎಂಗಳು ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸ್ಥಳೀಯ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಆಗಿ ಕಾರ್ಯನಿರ್ವಹಿಸಲು ನೇಮಕಗೊಂಡಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ಸೂಚನೆಗಳಿಗೆ ಅನುಗುಣವಾಗಿ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ‘ವಾರ್ ರೂಮ್’ ನೀಡಿದ ವಿವರವಾದ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶನಿವಾರ, ಜಿಲ್ಲಾಧಿಕಾರಿ ರೂಪಮ್ ಅವರು ಕಲೆಕ್ಟರೇಟ್‌ನಲ್ಲಿ ಸೆಕ್ಟರ್ ಮತ್ತು ವಲಯ ಮ್ಯಾಜಿಸ್ಟ್ರೇಟ್‌ಗಳೊಂದಿಗೆ ಪರಿಶೀಲನಾ ಸಭೆ ನಡೆಸಿ, ಪರಿಷ್ಕರಣಾ ಕಾರ್ಯವನ್ನು ಪರಿಣಾಮಕಾರಿ, ಪಾರದರ್ಶಕ ಮತ್ತು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದ್ದಾರೆ. ಪ್ರತಿಯೊಬ್ಬ ಬಿಎಲ್‌ಒ ತಮ್ಮ ಪ್ರದೇಶವನ್ನು ಸಮಯಕ್ಕೆ ಸರಿಯಾಗಿ ತಲುಪಬೇಕು, ಮನೆ ಮನೆಗೆ ಭೇಟಿ ನೀಡಬೇಕು ಮತ್ತು ಹೊಸ ಮತದಾರರಿಗೆ ಫಾರ್ಮ್ 6 ಮತ್ತು ವರ್ಗಾವಣೆ ಅಥವಾ ತಿದ್ದುಪಡಿಗಳಿಗಾಗಿ ಫಾರ್ಮ್ 8 ಅನ್ನು ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯ ಮಾಡಿದರೆ ನೋಟಿಸ್‌ ಜಾರಿ ಮಾಡಲಾಗುವುದು ಮತ್ತು ಸ್ಪಷ್ಟೀಕರಣ ಕೇಳಲಾಗುವುದು. ಪದೇ ಪದೇ ಆದೇಶ ಪಾಲಿಸದಿರುವುದು ವೇತನ ತಡೆಹಿಡಿಯುವಿಕೆ ಮತ್ತು ಶಿಸ್ತು ಕ್ರಮಕ್ಕೆ ಕಾರಣವಾಗಬಹುದು ಎಂದು ಆಡಳಿತವು ಈ ಹಿಂದೆ ಎಚ್ಚರಿಸಿತ್ತು.

ಬಹ್ರೈಚ್‌ನ ಬೇಸಿಕ್ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಆಶಿಶ್ ಕುಮಾರ್ ಸಿಂಗ್ ಮಾತನಾಡಿ, ಬಿಎಲ್‌ಒ ಆಗಿ ನೇಮಕಗೊಂಡಿದ್ದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಮಾ ನಫೀಸ್, ಹಿರಿಯ ಅಧಿಕಾರಿಗಳು ನೀಡಿದ ಜ್ಞಾಪನೆಗಳನ್ನು ಲೆಕ್ಕಿಸದೆ ಕರ್ತವ್ಯಕ್ಕೆ ವರದಿ ಮಾಡುವಂತೆ ಸೂಚಿಸಿದ ಲಿಖಿತ ಸೂಚನೆಗಳು ಮತ್ತು ಪದೇ ಪದೇ ಫೋನ್ ಕರೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿದ್ದಾರೆ. ಅದೇ ರೀತಿ, ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ಅನುರಾಗ್, ಎಸ್‌ಐಆರ್ ಅಡಿಯಲ್ಲಿ ತನಗೆ ನಿಯೋಜಿಸಲಾದ ಜವಾಬ್ದಾರಿಗಳನ್ನು ನಿರ್ವಹಿಸಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ನಾಯಕ ಅಂಕಿತ್ ಕುಮಾರ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಾಥಮಿಕ ಶಾಲೆಯ ಬೋಧಕ ಬಿಎಲ್‌ಒ ಅಭಿಷೇಕ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...