Homeಅಂತರಾಷ್ಟ್ರೀಯಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

- Advertisement -
- Advertisement -

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 

18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನನ ವಂಶಸ್ಥೆಯಾಗಿರುವ ನೂರ್ ಇನಾಯತ್ ಖಾನ್, ಎರಡನೇ ಮಹಾಯುದ್ಧದ ಸಮಯದಲ್ಲಿ ಗುಪ್ತ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ಪ್ರತಿರೋಧದಲ್ಲಿ ವಹಿಸಿದ ಪಾತ್ರಕ್ಕಾಗಿ ಫ್ರಾನ್ಸ್ ಸ್ಮರಣಾರ್ಥ ಅಂಚೆ ಚೀಟಿಯೊಂದಿಗೆ ಗೌರವಿಸಲ್ಪಟ್ಟ ಏಕೈಕ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ.

ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆ, ನಾಜಿ ಜರ್ಮನಿಯ ವಿರುದ್ಧ ಹೋರಾಡಿದ “ಪ್ರತಿರೋಧದ ವ್ಯಕ್ತಿಗಳ” ಗೌರವಾರ್ಥವಾಗಿ ಬಿಡುಗಡೆ ಮಾಡಲಾದ ಅಂಚೆಚೀಟಿಯೊಂದಿಗೆ ನೂರ್ ಅವರನ್ನು ಗೌರವಿಸಿದೆ. ಎರಡನೇ ಮಹಾಯುದ್ಧದ 80 ವರ್ಷಗಳನ್ನು ಗುರುತಿಸಲು ಈ ತಿಂಗಳು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಸೆಟ್‌ನಲ್ಲಿ ಆಯ್ಕೆಯಾದ ಒಂದು ಡಜನ್ ಯುದ್ಧ ವೀರರು ಮತ್ತು ನಾಯಕಿಯರಲ್ಲಿ ಅವರು ಒಬ್ಬರು.

“ಯುದ್ಧದ ಅಂತ್ಯದ 80 ನೇ ಮಹತ್ವದ ವಾರ್ಷಿಕೋತ್ಸವದಂದು ಫ್ರಾನ್ಸ್ ನೂರ್ ಇನಾಯತ್ ಖಾನ್ ಅವರಿಗೆ ಅಂಚೆ ಚೀಟಿ ನೀಡಿ ಗೌರವಿಸಿರುವುದು ನನಗೆ ಸಂತೋಷ ತಂದಿದೆ” ಎಂದು ನೂರ್ ಅವರ ಜೀವನ ಚರಿತ್ರೆ – ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ ನ ಲಂಡನ್ ಮೂಲದ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. 

“ನೂರ್ ಫ್ಯಾಸಿಸಂ ವಿರುದ್ಧದ ಹೋರಾಟದಲ್ಲಿ ತನ್ನ ಪ್ರಾಣವನ್ನು ತ್ಯಾಗ ಮಾಡಿದಳು. ಅವಳು ಪ್ಯಾರಿಸ್‌ನಲ್ಲಿ ಬೆಳೆದಳು, ಇಂಗ್ಲೆಂಡ್‌ನಲ್ಲಿ ಯುದ್ಧ ಪ್ರಯತ್ನದಲ್ಲಿ ಸೇರಿಕೊಂಡಳು, ಮತ್ತು ಫ್ರಾನ್ಸ್‌ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವಳ ಮುಖವನ್ನು ನೋಡುವುದು ಅದ್ಭುತವಾಗಿದೆ,” ಎಂದು ಅವರು ಹೇಳಿದರು.

ಪ್ರತಿಯೊಂದು ಅಂಚೆಚೀಟಿ ಛಾಯಾಚಿತ್ರದಿಂದ ತೆಗೆದ ಕೆತ್ತನೆಯ ರೂಪದಲ್ಲಿದ್ದು, ನೂರ್ ಅವರ ಮೇಲಿನ ಅಂಚೆಚೀಟಿ ಅವರ ಬ್ರಿಟಿಷ್ ಮಹಿಳಾ ಸಹಾಯಕ ವಾಯುಪಡೆ (WAAF) ಸಮವಸ್ತ್ರವನ್ನು ಪ್ರದರ್ಶಿಸುತ್ತದೆ.

“ನೂರ್ ಅವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಬ್ರಿಟನ್ 2014 ರಲ್ಲಿ ಅವರನ್ನು ಗೌರವಿಸಿತು. ಈಗ ಬ್ರಿಟನ್ ಮತ್ತು ಫ್ರಾನ್ಸ್ ಅವರ ಗೌರವಾರ್ಥವಾಗಿ ಅಂಚೆಚೀಟಿ ಹೊರಡಿಸಿವೆ. ಅವರ ಪೂರ್ವಜರ ದೇಶವಾದ ಭಾರತವು ಕೂಡ ಅಂಚೆಚೀಟಿಯೊಂದಿಗೆ ಅವರನ್ನು ಗೌರವಿಸುವ ಸಮಯ ಬಂದಿದೆ” ಎಂದು ಬಸು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...