Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...