Homeಮುಖಪುಟತಮಿಳುನಾಡು | ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ, ವಿಸಿಕೆ ಪಕ್ಷಗಳು

ತಮಿಳುನಾಡು | ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ, ವಿಸಿಕೆ ಪಕ್ಷಗಳು

- Advertisement -
- Advertisement -

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಮತ್ತು ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಅಧ್ಯಕ್ಷ ಹಾಗೂ ಸಂಸದ ಥೋಲ್ ತಿರುಮಾವಲವನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಸೋಮವಾರ (ನ.24) ಲೈವ್ ಲಾ ವರದಿ ಮಾಡಿದೆ.

ತಮಿಳುನಾಡು ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ 4ರಂದು ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆಯ ಮೊದಲ ಹಂತವಾದ ಮನೆ ಮನೆ ಎಣಿಕೆ ಪ್ರಾರಂಭಿಸಿದೆ.

ಡಿಸೆಂಬರ್ 9ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 9ರಿಂದ ಜನವರಿ 8 ರವರೆಗೆ ಮತದಾರರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಜನವರಿ 31ರವರೆಗೆ ವಿಚಾರಣೆಗಳು ನಡೆಯಲಿವೆ. ಫೆಬ್ರವರಿ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಟಿವಿಕೆ ತನ್ನ ಅರ್ಜಿಯಲ್ಲಿ, ಎಸ್‌ಐಆರ್ ಕಾನೂನಿನ ಮುಂದೆ ಸಮಾನತೆ ಮತ್ತು ಬದುಕುವ ಹಕ್ಕಿನ ತತ್ವಗಳನ್ನು ಉಲ್ಲಂಘಿಸುತ್ತದೆ ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಗೆ ವಿರುದ್ಧವಾಗಿದೆ ಎಂದು ವಾದಿಸಿದೆ.

ಈ ಪ್ರಕ್ರಿಯೆ ಯಾವುದೇ ದಾಖಲಿತ ಕಾರಣಗಳು ಅಥವಾ ಸಮರ್ಥನೆಗಳಿಲ್ಲದೆ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸುವುದಕ್ಕೆ ಸಮನಾಗಿರುತ್ತದೆ ಎಂದು ಟಿವಿಕೆ ಹೇಳಿದೆ.

ಎಸ್‌ಐಆರ್ ಪ್ರಕ್ರಿಯೆಯು ಸೂಚನೆ ಅಥವಾ ವಿಚಾರಣೆಯಿಲ್ಲದೆ ಹೆಸರುಗಳನ್ನು ಅಳಿಸಲು ಅನುಮತಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನಿರಂತರತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಸುಪ್ರೀಂ ಕೋರ್ಟ್‌ನ ಪೂರ್ವನಿದರ್ಶನಗಳು ಮತ್ತು ಮತದಾರರ ನೋಂದಣಿ ನಿಯಮಗಳು, 1960 ರ ಅಡಿಯಲ್ಲಿ ಶಾಸನಬದ್ಧ ಸುರಕ್ಷತೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದೆ.

ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗಬಹುದಾದ ಕಾರ್ಯವಿಧಾನದ ತೊಂದರೆಗಳನ್ನು ಕೂಡ ಟಿವಿಕೆ ಉಲ್ಲೇಖಿಸಿದೆ.

ಎಸ್‌ಐಆರ್‌ ಪ್ರಕ್ರಿಯೆಯನ್ನು ಮಳೆಗಾಲಕ್ಕೆ ಇಟ್ಟಿದ್ದಾರೆ. ಆ ಸಮಯದಲ್ಲಿ ಪ್ರವಾಹ ಬಂದರೆ ಸರ್ಕಾರಿ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಸಿಬ್ಬಂದಿಯನ್ನು ಎಲ್ಲಾ ಪ್ರವಾಹ ಪರಿಹಾರ ಕೆಲಸಕ್ಕೆ ಕಳುಹಿಸಬೇಕಾಗುತ್ತದೆ. ಆಗ ಮತದಾರರ ಪಟ್ಟಿ ಸರಿಪಡಿಸುವ ಕೆಲಸಕ್ಕೆ ಯಾರೂ ಇರುವುದಿಲ್ಲ ಎಂದು ಹೇಳಿದೆ.

ತಮಿಳುನಾಡಿನಲ್ಲಿ ಎಸ್‌ಐಆರ್‌ ನಡೆಸುವ ಚುನಾವಣಾ ಆಯೋಗದ ಅಕ್ಟೋಬರ್ 27ರ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ತಿರುಮಾವಲವನ್ ಅವರು ಆರ್ಟಿಕಲ್ 32ರ ಅಡಿಯಲ್ಲಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಯಲ್ಲಿ ಕೋರಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಎಸ್‌ಐಆರ್‌ ಅನಿಯಂತ್ರಿತ, ಅಪಾರದರ್ಶಕ ಮತ್ತು ಅಸಂವಿಧಾನಿಕ ಎಂದು ಅವರು ಬಣ್ಣಿಸಿದ್ದು, ಇದು ಸಮಾನತೆ, ಘನತೆ ಮತ್ತು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಸಮಯ ಇರುವಾಗ ತೀವ್ರವಾದ ಪರಿಷ್ಕರಣೆಯನ್ನು ಪ್ರಾರಂಭಿಸುವುದರಿಂದ, ವಿಶೇಷವಾಗಿ ಅಂಚಿನಲ್ಲಿರುವ ಗುಂಪುಗಳಲ್ಲಿ ದೊಡ್ಡ ಪ್ರಮಾಣದ ಅಳಿಸುವಿಕೆಗಳ ಅಪಾಯ ಹೆಚ್ಚಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ವಿನ್ಯಾಸ ಮತ್ತು ಸಮಯವು ದಲಿತರು, ಆದಿವಾಸಿಗಳು, ವಲಸೆ ಕಾರ್ಮಿಕರು, ಮದುವೆಯ ನಂತರ ಸ್ಥಳಾಂತರಗೊಳ್ಳುವ ಮಹಿಳೆಯರು, ಕಾರ್ಮಿಕ ವರ್ಗ, ಅಂಗವಿಕಲರು ಮತ್ತು ಸ್ಥಿರ ದಾಖಲೆಗಳು ಅಥವಾ ಡಿಜಿಟಲ್ ಪ್ರವೇಶವಿಲ್ಲದವರ ಮೇಲೆ ಅಸಮಾನವಾಗಿ ಹೊರೆಯಾಗುತ್ತದೆ ಎಂದು ತಿರುಮಾವಲವನ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ತಮಿಳುನಾಡು 2024ರ ಅಕ್ಟೋಬರ್ ಮತ್ತು ಜನವರಿ ನಡುವೆ ವಿಶೇಷ ಸಾರಾಂಶ ಪರಿಷ್ಕರಣೆಯನ್ನು ಪೂರ್ಣಗೊಳಿಸಿದೆ, ಜನವರಿ 6 ರಂದು ನವೀಕರಿಸಿದ ಪಟ್ಟಿಗಳನ್ನು ಪ್ರಕಟಿಸಲಾಗಿದೆ. ಅಂದಿನಿಂದ ನಿರಂತರವಾಗಿ ನಿರ್ವಹಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ಹೊಸದಾಗಿ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ಚುನಾವಣಾ ಆಯೋಗವು ಯಾವುದೇ ಸಮರ್ಥನೆಯನ್ನು ನೀಡಿಲ್ಲ ಎಂದು ತಿರುಮಾವಲವನ್ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಎಸ್‌ಐಆರ್‌ ಪ್ರಕ್ರಿಯೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಇದನ್ನು ‘ಸಾಂವಿಧಾನಿಕ ಅತಿಕ್ರಮಣ’ ಎಂದು ಹೇಳಿದೆ.

ಎಸ್‌ಐಆರ್‌ನಿಂದ ಮತದಾರರು ದೊಡ್ಡ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...