Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...