Homeಕರ್ನಾಟಕಮದ್ಯ ನಿಷೇಧ ಆಂದೋಲನದಿಂದ ಬೃಹತ್ 'ಬೆಂಗಳೂರು ಚಲೋ': ಸಾವಿರಾರು ಮಹಿಳೆಯರು ಭಾಗಿ

ಮದ್ಯ ನಿಷೇಧ ಆಂದೋಲನದಿಂದ ಬೃಹತ್ ‘ಬೆಂಗಳೂರು ಚಲೋ’: ಸಾವಿರಾರು ಮಹಿಳೆಯರು ಭಾಗಿ

- Advertisement -
- Advertisement -

ಮದ್ಯ ನಿಷೇಧ ಆಂದೋಲನ ಕರ್ನಾಟಕ ವತಿಯಿಂದ ‘ಮಹಿಳೆಯರ ಸ್ವಾಭಿಮಾನಕ್ಕಾಗಿ ಬೆಂಗಳೂರು ಚಲೋ’ ಸಮಾವೇಶ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ನವೆಂಬರ್ 25) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾನೂನು ರೀತಿಯಲ್ಲಿ ಹಾಗೂ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಕಳೆದ 20 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಹೆಚ್ಚಿಸುತ್ತಲೆ ಬರಲಾಗುತ್ತಿದೆ. ಸರ್ಕಾರ ಬರೀ ಮದ್ಯ ಮಾರಾಟದಿಂದ ಬರುವ (ಅಬಕಾರಿ) ಆದಾಯದ ಕಡಗೆ ಹೆಚ್ಚಿನ ಗಮನ ಹರಿಸುತ್ತಿದೆ. ಆದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳೂ ಕುಡಿಯುವ ಚಟಕ್ಕೆ ಬಲಿಯಾಗುತ್ತಿದ್ದಾರೆ. ಜೊತೆಗೆ ಮಹಿಳೆಯರು ಅವರ ಕುಟುಂಬಗಳನ್ನು ನಡೆಸುವುದಕ್ಕೆ ಹಲವಾರು ಕಷ್ಟ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪಂಜಾಬ್ ರಾಜ್ಯದಂತೆ ನಮ್ಮ ರಾಜ್ಯವು ಮದ್ಯ ಸೇವನೆಯಿಂದ ಮಾದಕ ವ್ಯಸನದತ್ತ (ಡ್ರಗ್ಸ್‌) ಯುವಕರು ಹೋಗುವಂತೆ ಮಾಡಬಹುದು ಎಂದು ಸಮಾವೇಶದಲ್ಲಿ ಪಾಲ್ಗೊಂಡವರು ಕಳವಳ ವ್ಯಕ್ತಪಡಿಸಿದರು.

ಕಳೆದ 10 ವರ್ಷಗಳಿಂದ ಕರ್ನಾಟಕದ ಹಲವು ಗ್ರಾಮಗಳಿಂದ ಮಹಿಳೆಯರು ಅಕ್ರಮ ಮದ್ಯ ಮಾರಾಟದ ದೂರುಗಳನ್ನುಅಬಕಾರಿ ಇಲಾಖೆ, ಗ್ರಾಮ ಪಂಚಾಯತಿಗಳು, ಪೋಲಿಸ್ ಠಾಣೆಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಆದರೆ, ಯಾವ ದೂರುಗಳ ಮೇಲೂ ಕ್ರಮ ಜರುಗಿಸಿಲ್ಲ ಎಂದರು.

ಸಮಾವೇಶದಲ್ಲಿ ಸರ್ಕಾರಕ್ಕೆ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ, ಅವುಗಳು ಹೀಗಿವೆ..

1. ಮದ್ಯ ಮಾರಾಟಕ್ಕೆ ಪರವಾನಿಗೆ (ಲೈಸನ್ಸ್) ಹೊಂದಲು ಹರಿಯಾಣ, ಮಹಾರಾಷ್ಟ್ರ ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡ 20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಂದರೆ ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಅದೇ ರೀತಿ ನಮ್ಮಲ್ಲೂ ಈ ಅಂಶವನ್ನು ಪಂಚಾಯತ್ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು. ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರ್ಕಾರ ಅದನ್ನು ತೆಗೆದು ಹಾಕಿತು.

2. ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ, ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ, ಪಾನ್‌ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ, ನಮ್ಮ ಬೇಡಿಕೆ ಇಷ್ಟೇ ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ್ ರಾಜ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...