Homeಕರ್ನಾಟಕಮದ್ಯ ನಿಷೇಧ ಆಂದೋಲನದಿಂದ ಬೃಹತ್ 'ಬೆಂಗಳೂರು ಚಲೋ': ಸಾವಿರಾರು ಮಹಿಳೆಯರು ಭಾಗಿ

ಮದ್ಯ ನಿಷೇಧ ಆಂದೋಲನದಿಂದ ಬೃಹತ್ ‘ಬೆಂಗಳೂರು ಚಲೋ’: ಸಾವಿರಾರು ಮಹಿಳೆಯರು ಭಾಗಿ

- Advertisement -
- Advertisement -

ಮದ್ಯ ನಿಷೇಧ ಆಂದೋಲನ ಕರ್ನಾಟಕ ವತಿಯಿಂದ ‘ಮಹಿಳೆಯರ ಸ್ವಾಭಿಮಾನಕ್ಕಾಗಿ ಬೆಂಗಳೂರು ಚಲೋ’ ಸಮಾವೇಶ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ನವೆಂಬರ್ 25) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾನೂನು ರೀತಿಯಲ್ಲಿ ಹಾಗೂ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಕಳೆದ 20 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಹೆಚ್ಚಿಸುತ್ತಲೆ ಬರಲಾಗುತ್ತಿದೆ. ಸರ್ಕಾರ ಬರೀ ಮದ್ಯ ಮಾರಾಟದಿಂದ ಬರುವ (ಅಬಕಾರಿ) ಆದಾಯದ ಕಡಗೆ ಹೆಚ್ಚಿನ ಗಮನ ಹರಿಸುತ್ತಿದೆ. ಆದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳೂ ಕುಡಿಯುವ ಚಟಕ್ಕೆ ಬಲಿಯಾಗುತ್ತಿದ್ದಾರೆ. ಜೊತೆಗೆ ಮಹಿಳೆಯರು ಅವರ ಕುಟುಂಬಗಳನ್ನು ನಡೆಸುವುದಕ್ಕೆ ಹಲವಾರು ಕಷ್ಟ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪಂಜಾಬ್ ರಾಜ್ಯದಂತೆ ನಮ್ಮ ರಾಜ್ಯವು ಮದ್ಯ ಸೇವನೆಯಿಂದ ಮಾದಕ ವ್ಯಸನದತ್ತ (ಡ್ರಗ್ಸ್‌) ಯುವಕರು ಹೋಗುವಂತೆ ಮಾಡಬಹುದು ಎಂದು ಸಮಾವೇಶದಲ್ಲಿ ಪಾಲ್ಗೊಂಡವರು ಕಳವಳ ವ್ಯಕ್ತಪಡಿಸಿದರು.

ಕಳೆದ 10 ವರ್ಷಗಳಿಂದ ಕರ್ನಾಟಕದ ಹಲವು ಗ್ರಾಮಗಳಿಂದ ಮಹಿಳೆಯರು ಅಕ್ರಮ ಮದ್ಯ ಮಾರಾಟದ ದೂರುಗಳನ್ನುಅಬಕಾರಿ ಇಲಾಖೆ, ಗ್ರಾಮ ಪಂಚಾಯತಿಗಳು, ಪೋಲಿಸ್ ಠಾಣೆಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಆದರೆ, ಯಾವ ದೂರುಗಳ ಮೇಲೂ ಕ್ರಮ ಜರುಗಿಸಿಲ್ಲ ಎಂದರು.

ಸಮಾವೇಶದಲ್ಲಿ ಸರ್ಕಾರಕ್ಕೆ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ, ಅವುಗಳು ಹೀಗಿವೆ..

1. ಮದ್ಯ ಮಾರಾಟಕ್ಕೆ ಪರವಾನಿಗೆ (ಲೈಸನ್ಸ್) ಹೊಂದಲು ಹರಿಯಾಣ, ಮಹಾರಾಷ್ಟ್ರ ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡ 20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಂದರೆ ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಅದೇ ರೀತಿ ನಮ್ಮಲ್ಲೂ ಈ ಅಂಶವನ್ನು ಪಂಚಾಯತ್ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು. ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರ್ಕಾರ ಅದನ್ನು ತೆಗೆದು ಹಾಕಿತು.

2. ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ, ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ, ಪಾನ್‌ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ, ನಮ್ಮ ಬೇಡಿಕೆ ಇಷ್ಟೇ ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ್ ರಾಜ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...