Homeಕರ್ನಾಟಕಮದ್ಯ ನಿಷೇಧ ಆಂದೋಲನದಿಂದ ಬೃಹತ್ 'ಬೆಂಗಳೂರು ಚಲೋ': ಸಾವಿರಾರು ಮಹಿಳೆಯರು ಭಾಗಿ

ಮದ್ಯ ನಿಷೇಧ ಆಂದೋಲನದಿಂದ ಬೃಹತ್ ‘ಬೆಂಗಳೂರು ಚಲೋ’: ಸಾವಿರಾರು ಮಹಿಳೆಯರು ಭಾಗಿ

- Advertisement -
- Advertisement -

ಮದ್ಯ ನಿಷೇಧ ಆಂದೋಲನ ಕರ್ನಾಟಕ ವತಿಯಿಂದ ‘ಮಹಿಳೆಯರ ಸ್ವಾಭಿಮಾನಕ್ಕಾಗಿ ಬೆಂಗಳೂರು ಚಲೋ’ ಸಮಾವೇಶ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ನವೆಂಬರ್ 25) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾನೂನು ರೀತಿಯಲ್ಲಿ ಹಾಗೂ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಕಳೆದ 20 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಹೆಚ್ಚಿಸುತ್ತಲೆ ಬರಲಾಗುತ್ತಿದೆ. ಸರ್ಕಾರ ಬರೀ ಮದ್ಯ ಮಾರಾಟದಿಂದ ಬರುವ (ಅಬಕಾರಿ) ಆದಾಯದ ಕಡಗೆ ಹೆಚ್ಚಿನ ಗಮನ ಹರಿಸುತ್ತಿದೆ. ಆದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳೂ ಕುಡಿಯುವ ಚಟಕ್ಕೆ ಬಲಿಯಾಗುತ್ತಿದ್ದಾರೆ. ಜೊತೆಗೆ ಮಹಿಳೆಯರು ಅವರ ಕುಟುಂಬಗಳನ್ನು ನಡೆಸುವುದಕ್ಕೆ ಹಲವಾರು ಕಷ್ಟ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪಂಜಾಬ್ ರಾಜ್ಯದಂತೆ ನಮ್ಮ ರಾಜ್ಯವು ಮದ್ಯ ಸೇವನೆಯಿಂದ ಮಾದಕ ವ್ಯಸನದತ್ತ (ಡ್ರಗ್ಸ್‌) ಯುವಕರು ಹೋಗುವಂತೆ ಮಾಡಬಹುದು ಎಂದು ಸಮಾವೇಶದಲ್ಲಿ ಪಾಲ್ಗೊಂಡವರು ಕಳವಳ ವ್ಯಕ್ತಪಡಿಸಿದರು.

ಕಳೆದ 10 ವರ್ಷಗಳಿಂದ ಕರ್ನಾಟಕದ ಹಲವು ಗ್ರಾಮಗಳಿಂದ ಮಹಿಳೆಯರು ಅಕ್ರಮ ಮದ್ಯ ಮಾರಾಟದ ದೂರುಗಳನ್ನುಅಬಕಾರಿ ಇಲಾಖೆ, ಗ್ರಾಮ ಪಂಚಾಯತಿಗಳು, ಪೋಲಿಸ್ ಠಾಣೆಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಆದರೆ, ಯಾವ ದೂರುಗಳ ಮೇಲೂ ಕ್ರಮ ಜರುಗಿಸಿಲ್ಲ ಎಂದರು.

ಸಮಾವೇಶದಲ್ಲಿ ಸರ್ಕಾರಕ್ಕೆ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ, ಅವುಗಳು ಹೀಗಿವೆ..

1. ಮದ್ಯ ಮಾರಾಟಕ್ಕೆ ಪರವಾನಿಗೆ (ಲೈಸನ್ಸ್) ಹೊಂದಲು ಹರಿಯಾಣ, ಮಹಾರಾಷ್ಟ್ರ ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡ 20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಂದರೆ ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಅದೇ ರೀತಿ ನಮ್ಮಲ್ಲೂ ಈ ಅಂಶವನ್ನು ಪಂಚಾಯತ್ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು. ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರ್ಕಾರ ಅದನ್ನು ತೆಗೆದು ಹಾಕಿತು.

2. ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ, ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ, ಪಾನ್‌ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ, ನಮ್ಮ ಬೇಡಿಕೆ ಇಷ್ಟೇ ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ್ ರಾಜ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...