Homeಕರ್ನಾಟಕಮಹಿಳೆಗೆ ಪಾದರಸ 'ಇಂಜೆಕ್ಟ್‌' ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ, ಪತಿಯ ದುಷ್ಕೃತ್ಯ ಬಿಚ್ಚಿಟ್ಟಿದ್ದ...

ಮಹಿಳೆಗೆ ಪಾದರಸ ‘ಇಂಜೆಕ್ಟ್‌’ ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ, ಪತಿಯ ದುಷ್ಕೃತ್ಯ ಬಿಚ್ಚಿಟ್ಟಿದ್ದ ಮಹಿಳೆ

- Advertisement -
- Advertisement -

ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಪಾದರಸ ಚುಚ್ಚುಮದ್ದು ನೀಡಿ, ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವಿಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಿರುವ ಮಹಿಳೆ, ‘ತನ್ನ ಪತಿ ಮತ್ತು ಮಾವ ನನ್ನನ್ನು ಕೊಲ್ಲಲು ಸಂಚುಹೂಡಿ, ವೈದ್ಯಕೀಯ ದಂಪತಿಯ ನೆರವು ಪಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.

ಮೃತ ಮಹಿಳೆಯನ್ನು ವಿದ್ಯಾ ಎಂದು ಗುರುತಿಸಾಗಿದೆ. ಅವರು ಕಳೆದ ವಾರ ಮೃತಪಟ್ಟಿದ್ದಾರೆ. ಅವರು ತಮ್ಮ ಮೇಲಾದ ದೌರ್ಜ್ಯದ ಕುರಿತು ಪೊಲೀಸರಿಗೆ ವಿವರಿಸಿರುವಂತೆ, ಅವರಿಗೆ ಫೆಬ್ರವರಿ 26ರಂದು ಆಕೆಯ ಪತಿ ಪಾದರವನ್ನು ಇಂಜೆಕ್ಟ್‌ ಮಾಡಿದ್ದಾರೆ.

“SLN ಡಯಾಗ್ನೋಸ್ಟಿಕ್ ಸೆಂಟರ್ ಎಂಬಲ್ಲಿ ಕೆಲಸ ಮಾಡುತ್ತಿದ್ದ ಶ್ವೇತಾ ಮತ್ತು ಆಕೆಯ ಪತಿ ನನ್ನ ಗಂಡನಿಗೆ ಕ್ಲೋರೋಪಾರ್ಫ್‌, ಸಿರಿಂಜ್ ಹಾಗೂ ಮರ್ಕ್ಯುರಿಯನ್ನು ನೀಡಿದ್ದರು. ಅವುಗಳನ್ನು ಬಳಸಿಕೊಂಡ ನನ್ನ ಪತಿ, ನಾನು ಫೆಬ್ರವರಿ 26ರ ರಾತ್ರಿ ಮಲಗಿದ್ದಾಗ, ಕ್ಲೋರೋಫಾರ್ಮ್‌ ಮೂಲಕ ನನ್ನ ಪ್ರಜ್ಞೆ ತಪ್ಪಿಸಿ, ಪಾದರಸವನ್ನು ಇಂಜೆಕ್ಟ್‌ ಮಾಡಿದ್ದಾರೆ” ಎಂದು ವಿವರಿಸಿರುವುದಾಗಿ ವರದಿಯಾಗಿದೆ. 

“ಮರುದಿನ ಸಂಜೆ ವೇಳೆಗೆ ನನಗೆ ಪ್ರಜ್ಞೆ ಬಂದಿತು. ಆಗ, ನನ್ನ ಕಾಲು ಊದಿಕೊಂಡಿತ್ತು. ನನ್ನ ಬಲ ತೊಡೆಯಲ್ಲಿ ತೀವ್ರ ನೋವಾಗುತ್ತಿತ್ತು. ಕೆಲ ದಿನಗಳಲ್ಲಿಯೇ ನನ್ನ ಆರೋಗ್ಯ ಸ್ಥಿತಿ ಹದಗೆಟ್ಟು, ಮಾರ್ಚ್‌ 7ರಂದು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿಂದ, ಆಕ್ಸ್‌ಫರ್ಡ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ, ವೈದ್ಯರು ಪರೀಕ್ಷಿಸಿದಾಗ, ನನ್ನ ದೇಹದಲ್ಲಿ ಪಾದರಸ ಇರುವುದು ಪತ್ತೆಯಾಯಿತು” ಎಂದು ಸಾವಿನ ಅಂಚಿನಲ್ಲಿದ್ದ ಮಹಿಳೆ ಪೊಲೀಸರಿಗೆ ವಿವರಿಸಿದ್ದರೆಂದು ತಿಳಿದುಬಂದಿದೆ.

“ನನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ನನ್ನನ್ನು ಕೊಲ್ಲುವ ಉದ್ದೇಶದಿಂದ ನನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ. ಅವರಿಬ್ಬರು ನನಗೆ ನಿರಂತರ ಕಿರುಕುಳ ನೀಡಿ, ಅವಮಾನಿಸುತ್ತಿದ್ದರು. ಮನೆಯೊಳಗೆ ಕೂಡಿಹಾಕುತ್ತಿದ್ದರು” ಎಂದು ವಿದ್ಯಾ ಆರೋಪಿಸಿದ್ದರು.

ದೇಹದಲ್ಲಿ ಪಾದರಸ ಇದ್ದಿದ್ದರಿಂದ ಆಕೆಯ ಮೂತ್ರಪಿಂಡಗಳು ಸೇರಿದಂತೆ ಬಹು ಅಂಗಗಳು ಹಾನಿಯಾಗಿದ್ದವು. ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಅಲ್ಲಿ ನಿಯಮಿತವಾಗಿ ಡಯಾಲಿಸಿಸ್‌ ಮಾಡಲಾಗುತ್ತಿತ್ತು. ಆದಾಗ್ಯೂ, ಆಕೆ 9 ತಿಂಗಳ ಜೀವನ್ಮರಣ ಹೋರಾಟದ ಬಳಿಕ ಇತ್ತೀಚೆಗೆ ಮೃತಪಟ್ಟಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...