Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...