Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...