Homeಮುಖಪುಟಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

- Advertisement -
- Advertisement -

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಮಂಗಳವಾರ (ನವೆಂಬರ್ 25) ಹೇಳಿದ್ದಾರೆ.

ಸಂಸದರ ನಿಧಿ, ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಹಣ ಲಭ್ಯವಿದೆ ಎಂದು ಬಂಡಿ ಸಂಜಯ್ ತಿಳಿಸಿದ್ದಾರೆ. ಈ ಯೋಜನೆಯಡಿಯಲ್ಲಿ, ಪ್ರತಿಯೊಬ್ಬ ಸಂಸದರು ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ವರ್ಷಕ್ಕೆ 5 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಶಿಫಾರಸು ಮಾಡುವ ಹಕ್ಕನ್ನು ಹೊಂದಿರುತ್ತಾರೆ.

ಸಿಎಸ್ಆರ್ ನಿಧಿಗಳ ಮೂಲಕ ನಾವು ಕೋಟ್ಯಂತರ ರೂಪಾಯಿಗಳನ್ನು ಹೇಗೆ ಗಳಿಸಿದ್ದೇವೆ ಮತ್ತು ಶಿಕ್ಷಣ, ಆರೋಗ್ಯ ರಕ್ಷಣೆಯನ್ನು ಸುಧಾರಿಸುವಲ್ಲಿ ಹೇಗೆ ಹೂಡಿಕೆ ಮಾಡಿದ್ದೇವೆ ಎಂದು ನಿಮಗೆ ಈಗಾಗಲೇ ಗೊತ್ತಿದೆ ಎಂದು ಬಂಡಿ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಕೇಂದ್ರ ಸಚಿವನಾಗಿ ಪಂಚಾಯತ್ ಅಭಿವೃದ್ಧಿಯನ್ನು ಬಲಪಡಿಸಲು ನಾನು ಇನ್ನೂ ಹೆಚ್ಚಿನ ಕೇಂದ್ರ ನಿಧಿಗಳನ್ನು ತರುತ್ತೇನೆ ಎಂದಿದ್ದಾರೆ.

ಗ್ರಾಮಗಳ ಅಭಿವೃದ್ಧಿಗಾಗಿ ನಾನು ನೇರವಾಗಿ 10 ಲಕ್ಷ ರೂಪಾಯಿ ನೀಡುತ್ತೇನೆ. ಇದರಲ್ಲಿ ಯಾವುದೇ ವಿಳಂಬ ಮಾಡುವುದಿಲ್ಲ, ಯಾವುದೇ ನೆಪ ಹೇಳುವುದಿಲ್ಲ ಎಂದು ಬಿಜೆಪಿ ನಾಯಕ ಭರವಸೆ ನೀಡಿದ್ದಾರೆ.

ಡಿಸೆಂಬರ್ ಮಧ್ಯದಲ್ಲಿ ತೆಲಂಗಾಣದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ.

ತೆಲಂಗಾಣದ ಈ ಹಿಂದಿನ ಆಡಳಿತ ಪಕ್ಷ ಬಿಆರ್‌ಎಸ್‌ ಸರ್ವಾನುಮತದಿಂದ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಂಚಾಯತ್‌ಗಳಿಗೆ 5 ಲಕ್ಷ ರೂ.ಗಳ ಭರವಸೆ ನೀಡಿತ್ತು ಎಂದು ಬಂಡಿ ಸಂಜಯ್ ನೆನಪಿಸಿದ್ದಾರೆ.

ಕರೀಂನಗರ ಲೋಕಸಭಾ ಕ್ಷೇತ್ರ ಪ್ರದೇಶದ ಸುಮಾರು 70 ಹಳ್ಳಿಗಳು ಬಿಆರ್‌ಎಸ್ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದವು. ಆದರೆ, ಅವರ ಸರ್ಕಾರ ಬಂದು ಐದು ವರ್ಷಗಳ ನಂತರವೂ ಕೆಸಿಆರ್ ಸರ್ಕಾರ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ಇದೇ ರೀತಿಯ ಭರವಸೆಗಳನ್ನು ನೀಡಿತ್ತು. ಸರ್ವಾನುಮತದ ಆಯ್ಕೆಯ ಹೆಸರಿನಲ್ಲಿ ಜನರನ್ನು ವಂಚಿಸಿದೆ ಎಂದು ಬಂಡಿ ಸಂಜಯ್ ದೂರಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಅನ್ನು ನಂಬಿದವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದರು. ಎರಡೂ ಪಕ್ಷಗಳು ಈಗ ಅದೇ ವಂಚನೆಯನ್ನು ಪುನರಾವರ್ತಿಸಲು ತಯಾರಿ ನಡೆಸುತ್ತಿವೆ. ಬಿಜೆಪಿ ಮಾತ್ರ ಕೊಟ್ಟ ಭರವಸೆಯಂತೆ ಹಣ ತರಲಿದೆ. ಕಾಂಗ್ರೆಸ್ ಅಥವಾ ಬಿಆರ್‌ಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದರೆ, ಹೊಸ ನಿಧಿಗಳು ಬರುವುದಿಲ್ಲ ಮತ್ತು ಕೇಂದ್ರದ ನಿಧಿಗಳು ಕೂಡ ಬೇರೆಡೆಗೆ ಹೋಗಬಹುದು. ಆದ್ದರಿಂದ ಅವರ ತಂತ್ರ, ಪ್ರಚೋದನೆಗಳಿಗೆ ಬಲಿಯಾಗಬೇಡಿ ಎಂದು ಬಂಡಿ ಸಂಜಯ್ ಹೇಳಿದ್ದಾರೆ.

ಡಿಸೆಂಬರ್ 2ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮಾತ್ರ ಈ ಪ್ರದೇಶದ ಅಭಿವೃದ್ದಿಗೆ ಹಣ ಸಿಗಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶುಕ್ರವಾರ (ನವೆಂಬರ್ 21) ಮಾಲೆಗಾಂವ್‌ನಲ್ಲಿ ಮತದಾರರಿಗೆ ಹೇಳಿದ್ದರು. ಈ ಬೆನ್ನಲ್ಲೇ ತೆಲಂಗಾಣದ ಬಿಜೆಪಿ ನಾಯಕ ಅದೇ ರೀತಿಯ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...