Homeಮುಖಪುಟಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

- Advertisement -
- Advertisement -

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಮಂಗಳವಾರ (ನವೆಂಬರ್ 25) ಹೇಳಿದ್ದಾರೆ.

ಸಂಸದರ ನಿಧಿ, ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಹಣ ಲಭ್ಯವಿದೆ ಎಂದು ಬಂಡಿ ಸಂಜಯ್ ತಿಳಿಸಿದ್ದಾರೆ. ಈ ಯೋಜನೆಯಡಿಯಲ್ಲಿ, ಪ್ರತಿಯೊಬ್ಬ ಸಂಸದರು ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ವರ್ಷಕ್ಕೆ 5 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಶಿಫಾರಸು ಮಾಡುವ ಹಕ್ಕನ್ನು ಹೊಂದಿರುತ್ತಾರೆ.

ಸಿಎಸ್ಆರ್ ನಿಧಿಗಳ ಮೂಲಕ ನಾವು ಕೋಟ್ಯಂತರ ರೂಪಾಯಿಗಳನ್ನು ಹೇಗೆ ಗಳಿಸಿದ್ದೇವೆ ಮತ್ತು ಶಿಕ್ಷಣ, ಆರೋಗ್ಯ ರಕ್ಷಣೆಯನ್ನು ಸುಧಾರಿಸುವಲ್ಲಿ ಹೇಗೆ ಹೂಡಿಕೆ ಮಾಡಿದ್ದೇವೆ ಎಂದು ನಿಮಗೆ ಈಗಾಗಲೇ ಗೊತ್ತಿದೆ ಎಂದು ಬಂಡಿ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಕೇಂದ್ರ ಸಚಿವನಾಗಿ ಪಂಚಾಯತ್ ಅಭಿವೃದ್ಧಿಯನ್ನು ಬಲಪಡಿಸಲು ನಾನು ಇನ್ನೂ ಹೆಚ್ಚಿನ ಕೇಂದ್ರ ನಿಧಿಗಳನ್ನು ತರುತ್ತೇನೆ ಎಂದಿದ್ದಾರೆ.

ಗ್ರಾಮಗಳ ಅಭಿವೃದ್ಧಿಗಾಗಿ ನಾನು ನೇರವಾಗಿ 10 ಲಕ್ಷ ರೂಪಾಯಿ ನೀಡುತ್ತೇನೆ. ಇದರಲ್ಲಿ ಯಾವುದೇ ವಿಳಂಬ ಮಾಡುವುದಿಲ್ಲ, ಯಾವುದೇ ನೆಪ ಹೇಳುವುದಿಲ್ಲ ಎಂದು ಬಿಜೆಪಿ ನಾಯಕ ಭರವಸೆ ನೀಡಿದ್ದಾರೆ.

ಡಿಸೆಂಬರ್ ಮಧ್ಯದಲ್ಲಿ ತೆಲಂಗಾಣದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ.

ತೆಲಂಗಾಣದ ಈ ಹಿಂದಿನ ಆಡಳಿತ ಪಕ್ಷ ಬಿಆರ್‌ಎಸ್‌ ಸರ್ವಾನುಮತದಿಂದ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಂಚಾಯತ್‌ಗಳಿಗೆ 5 ಲಕ್ಷ ರೂ.ಗಳ ಭರವಸೆ ನೀಡಿತ್ತು ಎಂದು ಬಂಡಿ ಸಂಜಯ್ ನೆನಪಿಸಿದ್ದಾರೆ.

ಕರೀಂನಗರ ಲೋಕಸಭಾ ಕ್ಷೇತ್ರ ಪ್ರದೇಶದ ಸುಮಾರು 70 ಹಳ್ಳಿಗಳು ಬಿಆರ್‌ಎಸ್ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದವು. ಆದರೆ, ಅವರ ಸರ್ಕಾರ ಬಂದು ಐದು ವರ್ಷಗಳ ನಂತರವೂ ಕೆಸಿಆರ್ ಸರ್ಕಾರ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ಇದೇ ರೀತಿಯ ಭರವಸೆಗಳನ್ನು ನೀಡಿತ್ತು. ಸರ್ವಾನುಮತದ ಆಯ್ಕೆಯ ಹೆಸರಿನಲ್ಲಿ ಜನರನ್ನು ವಂಚಿಸಿದೆ ಎಂದು ಬಂಡಿ ಸಂಜಯ್ ದೂರಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಅನ್ನು ನಂಬಿದವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದರು. ಎರಡೂ ಪಕ್ಷಗಳು ಈಗ ಅದೇ ವಂಚನೆಯನ್ನು ಪುನರಾವರ್ತಿಸಲು ತಯಾರಿ ನಡೆಸುತ್ತಿವೆ. ಬಿಜೆಪಿ ಮಾತ್ರ ಕೊಟ್ಟ ಭರವಸೆಯಂತೆ ಹಣ ತರಲಿದೆ. ಕಾಂಗ್ರೆಸ್ ಅಥವಾ ಬಿಆರ್‌ಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದರೆ, ಹೊಸ ನಿಧಿಗಳು ಬರುವುದಿಲ್ಲ ಮತ್ತು ಕೇಂದ್ರದ ನಿಧಿಗಳು ಕೂಡ ಬೇರೆಡೆಗೆ ಹೋಗಬಹುದು. ಆದ್ದರಿಂದ ಅವರ ತಂತ್ರ, ಪ್ರಚೋದನೆಗಳಿಗೆ ಬಲಿಯಾಗಬೇಡಿ ಎಂದು ಬಂಡಿ ಸಂಜಯ್ ಹೇಳಿದ್ದಾರೆ.

ಡಿಸೆಂಬರ್ 2ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮಾತ್ರ ಈ ಪ್ರದೇಶದ ಅಭಿವೃದ್ದಿಗೆ ಹಣ ಸಿಗಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶುಕ್ರವಾರ (ನವೆಂಬರ್ 21) ಮಾಲೆಗಾಂವ್‌ನಲ್ಲಿ ಮತದಾರರಿಗೆ ಹೇಳಿದ್ದರು. ಈ ಬೆನ್ನಲ್ಲೇ ತೆಲಂಗಾಣದ ಬಿಜೆಪಿ ನಾಯಕ ಅದೇ ರೀತಿಯ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...