HomeUncategorizedದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

- Advertisement -
- Advertisement -

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದ ಸಿದ್ದರಾಮಯ್ಯ ‘ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ  ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಹೇಳಿದರು. 

ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಈ ಸಂವಿಧಾನವನ್ನು ಅಂಗೀಕರಿಸಲಾಗಿದೆ ಎಂದರು. 

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದರು. 

ಇದೇ ವೇಳೆ ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ ಎಂದರು.

ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಮಾಡಿದ ಕೊನೆಯ ಭಾಷಣವನ್ನು, ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. 

ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ. ಯಾವ ಧರ್ಮವೂ ಹೇಳುವುದಿಲ್ಲ.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದಿದ್ದಾರೆ. 

ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು. 

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...