Homeಮುಖಪುಟಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

- Advertisement -
- Advertisement -

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಚೈತಾಲಿ ಚಟರ್ಜಿ ದಾಸ್ ಅವರ ವಿಭಾಗೀಯ ಪೀಠವು, ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಪ್ರಕಾರ, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶಿಸಿದೆ. ಈಗಾಗಲೇ 10 ಲಕ್ಷ ರೂಪಾಯಿ ಕೊಟ್ಟಿರುವುದರಿಂದ ಬಾಕಿ 20 ಲಕ್ಷ ರೂಪಾಯಿ ಕೊಡುವಂತೆ ಸೂಚಿಸಿದೆ. ಮೂರು ತಿಂಗಳ ಒಳಗೆ ಹಣ ಪಾವತಿಸುವಂತೆ ನಿರ್ದೇಶಿಸಿದೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಎರಡು ತಿಂಗಳ ಒಳಗೆ ನೀಡಬೇಕು ಎಂದು ಶುಕ್ರವಾರ (ನವೆಂಬರ್ 21) ನೀಡಿದ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

“ಮಲ ಹೊರುವ ಪದ್ದತಿ ಗಂಭೀರ ಮಾನವ ಹಕ್ಕು ಉಲ್ಲಂಘನೆಯಾಗಿದೆ. ಅದು ಇನ್ನೂ ಮುಂದುವರಿದಿರುವುದು ದೇಶದ ಆತ್ಮ ಸಾಕ್ಷಿಗೆ ಕಪ್ಪುಚುಕ್ಕೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2013ರ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆಯಡಿ ಕಡ್ಡಾಯ ಮೇಲ್ವಿಚಾರಣಾ ಕಾರ್ಯವಿಧಾನಗಳು ಅಸ್ತಿತ್ವದಲ್ಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧದ ಎಫ್‌ಐಆರ್ ಮಾತ್ರ ಉಲ್ಲೇಖಿಸುವ ಪೊಲೀಸರ ಅಫಿಡವಿಟ್ ಅಸಮರ್ಪಕವಾಗಿದೆ ಎಂದು ನ್ಯಾಯಾಲಯ ಟೀಕಿಸಿದೆ.

ಈ ಕುರಿತು ವರದಿ ಸಲ್ಲಿಸುವಂತೆ ಉಪ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಮತ್ತು ಒಂದು ತಿಂಗಳೊಳಗೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಪರಿಹಾರ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಂತ್ರಸ್ತ ಕುಟುಂಬಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಲೈವ್ ಲಾ ವರದಿ ವಿವರಿಸಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯವರಾದ ನಾಲ್ವರು ಕಾರ್ಮಿಕರು ಕೋಲ್ಕತ್ತಾ ಮಹಾನಗರ ಪಾಲಿಕೆಯ ಪರಿಸರ ಮೂಲಸೌಕರ್ಯ ಸುಧಾರಣಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರನ್ನುಒಳಚರಂಡಿ ಸ್ವಚ್ವಗೊಳಿಸಲು ಮ್ಯಾನ್‌ಹೋಲ್‌ಗೆ ಇಳಿಸಲಾಗಿತ್ತು. ಅಲ್ಲಿ ವಿಷಕಾರಿ ಅನಿಲ ಉಸಿರಾಡಿ ಸಾವನ್ನಪ್ಪಿದ್ದರು.

19 ವರ್ಷದ ಶಬೀರ್ ಹುಸೈನ್, 35 ವರ್ಷದ ಮೊಹಮ್ಮದ್ ಅಲಂಗೀರ್, 22 ವರ್ಷದ ಜಹಾಂಗೀರ್ ಅಲಮ್ ಮತ್ತು 20 ವರ್ಷದ ಲಿಯಾಕತ್ ಅಲಿ ಮೃತ ದುರ್ದೈವಿಗಳು.

2013ರ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆಯಡಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳನ್ನು ಮನುಷ್ಯರಿಂದ ಅಂದರೆ ಆಧುನಿಕ ಯಂತ್ರಗಳನ್ನು ಬಳಸದೆ ಸ್ವಚ್ಚ ಮಾಡಿಸುವುದನ್ನು ನಿಷೇಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...