Homeಮುಖಪುಟಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಮತ್ತು ‘ಪೂನಾ ಮಾರ್ಗಂ’ (ಬಸ್ತರ್ ಶ್ರೇಣಿ ಪೊಲೀಸರ ಸಾಮಾಜಿಕ ಪುನರ್ವಸತಿ ಅಭಿಯಾನ) ನಿಂದ ಪ್ರಭಾವಿತರಾಗಿ 12 ಮಹಿಳೆಯರು ಸೇರಿದಂತೆ 41 ಮಂದಿ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಶರಣಾದವರಲ್ಲಿ ನಾಲ್ವರು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್ ನಂ.1 ಮತ್ತು ಮಾವೋವಾದಿಗಳ ವಿವಿಧ ಕಂಪನಿಗಳ ಸದಸ್ಯರು, ಮೂವರು ಪ್ರದೇಶ ಸಮಿತಿಗಳ ಸದಸ್ಯರು, 11 ಪ್ಲಟೂನ್ ಮತ್ತು ಪ್ರದೇಶ ಸಮಿತಿ ಪಕ್ಷದ ಸದಸ್ಯರು, ಇಬ್ಬರು ಪಿಎಲ್‌ಜಿಎ ಸದಸ್ಯರು, ನಾಲ್ವರು ಮಿಲಿಟಿಯಾ ಪ್ಲಟೂನ್ ಕಮಾಂಡರ್‌ಗಳು, ಒಬ್ಬ ಉಪ ಕಮಾಂಡರ್, ಆರು ಮಂದಿ ಮಿಲಿಟಿಯಾ ಪ್ಲಟೂನ್ ಸದಸ್ಯರು, ಮತ್ತು ಉಳಿದವರು ನಿಷೇಧಿತ ಸಿಪಿಐ (ಮಾವೋವಾದಿ) ನ ಮುಂಚೂಣಿ ಸಂಘಟನೆಗಳಿಗೆ ಸೇರಿದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಒಟ್ಟು 41 ಮಂದಿಯಲ್ಲಿ 39 ಜನರು ಮಾವೋವಾದಿಗಳ ದಕ್ಷಿಣ ಉಪ-ವಲಯ ಬ್ಯೂರೋಗೆ ಸೇರಿದವರು ಎಂದು ಹೇಳಿದ್ದಾರೆ.

ಶರಣಾದವರೆಲ್ಲರೂ ದಂಡಕಾರಣ್ಯ ವಿಶೇಷ ವಲಯ ಸಮಿತಿ, ತೆಲಂಗಾಣ ರಾಜ್ಯ ಸಮಿತಿ ಮತ್ತು ನಿಷೇಧಿತ ಸಂಘಟನೆಯ ಧಮ್ತಾರಿ-ಗರಿಯಾಬಂದ್-ನುವಾಪಾ ವಿಭಾಗಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಶರಣಾದವರು ಸಂವಿಧಾನದಲ್ಲಿ ನಂಬಿಕೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಘನತೆಯ ಮತ್ತು ಸುರಕ್ಷಿತ ಜೀವನವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪುನರ್ವಸತಿ ನೀತಿಯಡಿಯಲ್ಲಿ, ಪ್ರತಿ ಕೇಡರ್‌ಗೆ ಪ್ರೋತ್ಸಾಹ ಧನವಾಗಿ 50 ಸಾವಿರ ರೂಗಳ ತಕ್ಷಣದ ಆರ್ಥಿಕ ಸಹಾಯವನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಶರಣಾದವರಲ್ಲಿ ಪಾಂಡ್ರು ಹಪಕ ಅಲಿಯಾಸ್ ಮೋಹನ್ (37), ಬಂಡಿ ಹಪ್ಕಾ (35), ಲಕ್ಕು ಕೊರ್ಸ (37), ಬದ್ರು ಪುಣೆಂ (35), ಸುಖರಾಮ್ ಹೇಮ್ಲಾ (27), ಮಂಜುಳಾ ಹೇಮ್ಲಾ (25), ಮಂಗಳಿ ಮದ್ವಿ ಅಲಿಯಾಸ್ ಶಾಂತಿ (29), ಜೈರಾಮ್ ಕಡಿಯಂ (28) ಈ ಎಲ್ಲರ ತಲೆಗೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು.

ಇದಲ್ಲದೆ, ಮೂವರು ಕೇಡರ್‌ಗಳ ತಲೆಗೆ ತಲಾ 5 ಲಕ್ಷ ರೂ., 12 ಕೇಡರ್‌ಗಳ ತಲೆಗೆ ತಲಾ 2 ಲಕ್ಷ ರೂ. ಮತ್ತು 8 ಕೇಡರ್‌ಗಳ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪುನರ್ವಸತಿ ನೀತಿಯು ಮಾವೋವಾದಿಗಳು ಹಿಂಸಾಚಾರವನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಲು ಪ್ರೋತ್ಸಾಹಿಸುತ್ತಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದು, ಉಳಿದ ಮಾವೋವಾದಿಗಳು ಹಿಂಸಾಚಾರದ ಮಾರ್ಗವನ್ನು ತ್ಯಜಿಸುವಂತೆ ಮನವಿ ಮಾಡಿದ್ದಾರೆ.

ಮಾವೋವಾದಿಗಳು ದಾರಿತಪ್ಪಿಸುವ ಮತ್ತು ಹಿಂಸಾತ್ಮಕ ಸಿದ್ಧಾಂತಗಳನ್ನು ತ್ಯಜಿಸಿ ಭಯವಿಲ್ಲದೆ ಸಮಾಜಕ್ಕೆ ಮರಳಬೇಕು. ‘ಪೂನಾ ಮಾರ್ಗಂ’ ಅಭಿಯಾನವು ಶರಣಾಗುವವರಿಗೆ ಸುರಕ್ಷಿತ, ಗೌರವಾನ್ವಿತ ಮತ್ತು ಸ್ವಾವಲಂಬಿ ಭವಿಷ್ಯವನ್ನು ಖಾತ್ರಿಗೊಳಿಸುತ್ತದೆ. ಈ ಶರಣಾಗತಿಯೊಂದಿಗೆ, ಜನವರಿ 2024 ರಿಂದ ಇದುವರೆಗೆ ಜಿಲ್ಲೆಯಲ್ಲಿ ಹಿಂಸಾಚಾರವನ್ನು ತೊರೆದು ಮುಖ್ಯವಾಹಿನಿಗೆ ಸೇರಿದ ಮಾವೋವಾದಿಗಳ ಸಂಖ್ಯೆ 790ಕ್ಕೆ ಏರಿಕೆಯಾಗಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 202 ನಕ್ಸಲರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ ಮತ್ತು 1,031 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಕಳೆದ 23 ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ಉನ್ನತ ಕೇಡರ್‌ಗಳು ಸೇರಿದಂತೆ 2,200 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...