Homeಮುಖಪುಟಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಭಾಗೀಯ ಪೀಠ ಬುಧವಾರ (ನವೆಂಬರ್ 26) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಶ್ಯಾಮ್ ಕುಮಾರ್ ವಿ.ಎಂ ಅವರನ್ನೊಳಗೊಂಡ ವಿಭಾಗೀಯ ಪೀಠವು, 2019ರಿಂದ ಹಂತ ಹಂತವಾಗಿ ಜಾರಿಗೆ ತರಲಾದ ಕಾನೂನನ್ನು ಎತ್ತಿಹಿಡಿದಿದೆ. ಕಾಯ್ದೆಯ ನಿಬಂಧನೆಗಳು ಅಸ್ಪಷ್ಟ, ಅನಿಯಂತ್ರಿತ, ಅಪ್ರಾಯೋಗಿಕ ಮತ್ತು ಅಸಮಾನವಾಗಿವೆ ಎಂಬ ಮೇಲ್ಮನವಿಯ ವಾದಗಳನ್ನು ತಿರಸ್ಕರಿಸಿದೆ.

"ಈ ತೀರ್ಪು ಕೇವಲ ಕಾನೂನಿನ ಘೋಷಣೆಯಾಗಿ ಕಾರ್ಯನಿರ್ವಹಿಸದೆ, ಘನತೆ, ನೈತಿಕ ಮತ್ತು ಸಮಾನ ವೈದ್ಯಕೀಯ ಆರೈಕೆಯ ಹಕ್ಕಿನ ಮರುದೃಢೀಕರಣವಾಗಿರಲಿ" ಎಂದು ಪೀಠ ಹೇಳಿದೆ.

ಕಾಯ್ದೆಯ ನಿಬಂಧನೆಗಳು ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಮತ್ತು ಯುರೋಪಿಯನ್ ಒಕ್ಕೂಟದಂತೆಯೇ ( (ಇಯು) ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಆಸ್ಪತ್ರೆ ನೌಕರರ ವಿವರಗಳನ್ನು ಬಹಿರಂಗಪಡಿಸುವುದು ಕಡ್ಡಾಯ, ಪ್ರತಿ ಚಿಕಿತ್ಸಾ ವಸ್ತು ಮತ್ತು ಪ್ಯಾಕೇಜ್‌ಗಳಿಗೆ ವಿಧಿಸುವ ಶುಲ್ಕಗಳ ಪಟ್ಟಿಯನ್ನು ಪ್ರಕಟಿಸುವುದು ಕಡ್ಡಾಯ ಎಂಬ ಕಾಯ್ದೆಯ ನಿಬಂಧನೆಗಳನ್ನು ಮೇಲ್ಮನವಿದಾರರು ಪ್ರಾಥಮಿಕವಾಗಿ ಪ್ರಶ್ನಿಸಿದ್ದರು. ರೋಗಿಗಳಿಗೆ ಜೀವರಕ್ಷಕ ಚಿಕಿತ್ಸೆಗಳು ಮತ್ತು ಸುರಕ್ಷಿತ ಸಾರಿಗೆಯನ್ನು ಕಡ್ಡಾಯವಾಗಿ ಒದಗಿಸುವ ಕಾನೂನಿನ ಆದೇಶವನ್ನೂ ಪ್ರಶ್ನಿಸಿದ್ದರು.

ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದು, ರೋಗಿಗಳ ಹಕ್ಕುಗಳು ಮತ್ತು ಸುರಕ್ಷತೆಯನ್ನು ಎತ್ತಿಹಿಡಿಯುವುದು, ಕ್ಲಿನಿಕಲ್ ಅಭ್ಯಾಸದಲ್ಲಿ ಪಾರದರ್ಶಕತೆ ಮತ್ತು ನೈತಿಕ ಮಾನದಂಡಗಳನ್ನು ಉತ್ತೇಜಿಸುವುದು, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳನ್ನು ಉತ್ತಮವಾಗಿ ಸಜ್ಜುಗೊಳಿಸುವುದು, ಸ್ಥಿರ ಮತ್ತು ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವುದು, ಆರೋಗ್ಯ ವಲಯದಲ್ಲಿ ಸಮಾನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶವನ್ನು ಕಾನೂನು ಹೊಂದಿದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತ್ತು.

ಪ್ರಶ್ನಿಸಲಾಗಿರುವ ನಿಬಂಧನೆಗಳನ್ನು ಮತ್ತು ಕಾಯ್ದೆಯ ರಚನಾತ್ಮಕ ಚೌಕಟ್ಟನ್ನು ಪರಿಶೀಲಿಸಿದ ನ್ಯಾಯಾಲಯ, ಈ ಕಾಯ್ದೆಯು ಈಗಾಗಲೇ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಕರ್ತವ್ಯಗಳನ್ನು ಜಾರಿಗೊಳಿಸುವ ವಿಧಾನವನ್ನು ಮಾತ್ರ ಹೊಂದಿದೆ ಎಂದು ಅಭಿಪ್ರಾಯಪಟ್ಟಿದೆ.

ಕಾಯ್ದೆಯು ಹೊಸ ನಿರ್ಬಂಧಗಳನ್ನು ಸೃಷ್ಟಿಸುವುದಿಲ್ಲ. ಬದಲಾಗಿ, ನೋಂದಣಿ ಮತ್ತು ಗುಣಮಟ್ಟದ ಮಾನದಂಡಗಳ ವ್ಯವಸ್ಥೆ, ಪಾರದರ್ಶಕತೆಯ ಕಡ್ಡಾಯ ಆದೇಶ, ತುರ್ತು ಚಿಕಿತ್ಸೆ ಮತ್ತು ರೋಗಿಯ ಸ್ಥಿರೀಕರಣಕ್ಕೆ ಜಾರಿಗೊಳಿಸಬಹುದಾದ ಕನಿಷ್ಠ ಅಗತ್ಯತೆಗಳು- ಈ ಎಲ್ಲವನ್ನೂ ಜಾರಿಗೆ ತಂದು ಸಾಂವಿಧಾನಿಕ ಜವಾಬ್ದಾರಿಗಳನ್ನು ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ದರ ಪಟ್ಟಿ ಪ್ರದರ್ಶನ ಕಡ್ಡಾಯ

ಕಾಯ್ದೆಯ ಸೆಕ್ಷನ್ 39ರ ಅಡಿಯಲ್ಲಿ ಬರುವ ‘ಸೇವೆಯ ಪ್ರಕಾರಗಳು’ ಮತ್ತು ‘ಪ್ಯಾಕೇಜ್ ದರಗಳು’ ಎಂಬ ಪದಗಳು ಅಸ್ಪಷ್ಟವಾಗಿವೆ ಎಂಬ ವಾದವನ್ನು ತಿರಸ್ಕರಿಸಿದ ಪೀಠವು, ಕಾಯ್ದೆಯು ಪ್ರತಿಯೊಂದು ವೈದ್ಯಕೀಯ ಪರಿಸ್ಥಿತಿಯನ್ನು ಮೊದಲೇ ಊಹಿಸಿ ಬೆಲೆ ನಿಗದಿಪಡಿಸಬೇಕೆಂದು ಆದೇಶಿಸುವುದಿಲ್ಲ. ಗುರುತಿಸಬಹುದಾದ ಸೇವೆಗಳು ಮತ್ತು ಪ್ಯಾಕೇಜ್‌ಗಳ ಪ್ರಾಮಾಣಿಕ ಮೂಲ ಬೆಲೆ, ಹೆಚ್ಚುವರಿ ಸೇವೆಗಳು, ತೊಡಕುಗಳು ಮತ್ತು ಹೆಚ್ಚಿನ ದಿನಗಳ ವಾಸ್ತವ್ಯಕ್ಕೆ ಪ್ರತ್ಯೇಕವಾಗಿ ಐಟಂ-ವೈಸ್ ಬಿಲ್ಲಿಂಗ್ (ವಿವರವಾದ ಬಿಲ್) ನೀಡಬೇಕು ಎಂಬುವುದನ್ನು ಮಾತ್ರ ಕಡ್ಡಾಯಗೊಳಿಸುತ್ತದೆ ಎಂದಿದೆ.

ಸೇವೆಗಳ ಬೆಲೆಯನ್ನು ಸರ್ಕಾರವೇ ನಿಗದಿಪಡಿಸುವುದಕ್ಕಿಂತ, ಈ ಬೆಲೆ ಬಹಿರಂಗಪಡಿಸುವ ನಿಯಮವು ಬಹಳ ಕಡಿಮೆ ಒತ್ತಡ ಹೇರುವಂಥದ್ದು. ಜೊತೆಗೆ, ಇದು ಜನಸಾಮಾನ್ಯರ ಹಿತವನ್ನು ಕಾಪಾಡುತ್ತದೆ ಮತ್ತು ಆಸ್ಪತ್ರೆಗಳು ಅತಿಯಾದ ಶುಲ್ಕ ವಿಧಿಸುವುದರಿಂದ ರೋಗಿಗಳಿಗೆ ರಕ್ಷಣೆ ನೀಡುತ್ತದೆ. ಆದ್ದರಿಂದ ಬೆಲೆ ಬಹಿರಂಗಪಡಿಸುವುದು ಸಾರ್ವಜನಿಕ ಹಿತಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ ‘ಪ್ಯಾಕೇಜ್ ದರಗಳು’ ಎಂದರೇನು? ಎಂಬುದನ್ನು ನ್ಯಾಯಾಲಯ ಸ್ಪಷ್ಟವಾಗಿ ವಿವರಿಸಿದೆ.

ಪ್ಯಾಕೇಜ್ ದರಗಳು ಎಂದರೆ ಸಾಮಾನ್ಯವಾಗಿ ನಡೆಸಲಾಗುವ ಶಸ್ತ್ರಚಿಕಿತ್ಸೆಗಳು ಅಥವಾ ಚಿಕಿತ್ಸಾ ಕ್ರಮಗಳಿಗೆ ನಿಗದಿಪಡಿಸಿರುವ ಮೂಲ ದರಗಳು ಮಾತ್ರ. ಇದರಲ್ಲಿ ಆ ಚಿಕಿತ್ಸೆಗೆ ಸಾಮಾನ್ಯವಾಗಿ ಬೇಕಾದ ಸೇವೆಗಳು ಸೇರಿಕೊಂಡಿರುತ್ತವೆ. ಆದರೆ ಊಹಿಸಿರದ ತೊಡಕುಗಳು, ರೋಗಿಯಲ್ಲಿ ಇರುವ ಇತರ ರೋಗಗಳ ನಿರ್ವಹಣೆ, ಐಸಿಯುವಿನಲ್ಲಿ ಹೆಚ್ಚು ದಿನಗಳ ಕಾಲ ಇರಬೇಕಾದ ಸ್ಥಿತಿ ಅಥವಾ ದುಬಾರಿ ಉಪಕರಣಗಳು/ಸಾಮಗ್ರಿಗಳ ಬಳಕೆ ಇತ್ಯಾದಿಗಳು ಪ್ಯಾಕೇಜ್‌ನಲ್ಲಿ ಸೇರಿಕೊಂಡಿರುವುದಿಲ್ಲ. ಇಂತಹ ಹೆಚ್ಚುವರಿ ವೆಚ್ಚಗಳನ್ನು ಪ್ರತ್ಯೇಕವಾಗಿ ಬಿಲ್ ಮಾಡಬಹುದು, ಆದರೆ ಎರಡು ಷರತ್ತುಗಳನ್ನು ಪೂರೈಸಲೇ ಬೇಕು: ಒಂದು, ರೋಗಿಗೆ ಅಥವಾ ಕುಟುಂಬಕ್ಕೆ ಈ ಹೆಚ್ಚುವರಿ ಶುಲ್ಕದ ಬಗ್ಗೆ ಮೊದಲೇ ಸ್ಪಷ್ಟವಾಗಿ ತಿಳಿಸಬೇಕು; ಎರಡು, ಆ ಖರ್ಚು ವೈದ್ಯಕೀಯವಾಗಿ ಅಗತ್ಯ ಎಂಬುದಕ್ಕೆ ಸಾಕ್ಷ್ಯ ಅಥವಾ ಕಾರಣ ತೋರಿಸಬೇಕು. ಈ ರೀತಿ ಪಾರದರ್ಶಕತೆ ಮತ್ತು ವೈದ್ಯಕೀಯ ಸಾಕ್ಷ್ಯ ಇದ್ದರೆ ಮಾತ್ರ ಪ್ಯಾಕೇಜ್ ಹೊರಗಿನ ಶುಲ್ಕ ವಿಧಿಸಲು ಅನುಮತಿ ಇದೆ ಎಂದು ನ್ಯಾಯಾಲಯ ಹೇಳಿದೆ.

ವೈದ್ಯರು ಮತ್ತು ಇತರ ಉದ್ಯೋಗಿಗಳ ವಿವರಗಳನ್ನು ಬಹಿರಂಗಪಡಿಸುವುದು

ವೈದ್ಯರು ಮತ್ತು ಇತರ ಸಿಬ್ಬಂದಿಯ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯತೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆಸ್ಪತ್ರೆಯಲ್ಲಿ ಸಾಕಷ್ಟು ಸಂಖ್ಯೆಯ ಸಿಬ್ಬಂದಿ ಇದ್ದಾರೆ ಮತ್ತು ಅವರು ಸಮರ್ಥರಿದ್ದಾರೆ ಎಂಬುದನ್ನು ಜನರಿಗೆ ತೋರಿಸಲು ಸಿಬ್ಬಂದಿಯ ಪ್ರಾಥಮಿಕ ಮಾಹಿತಿ ನೀಡಬಹುದು ಎಂದಿದೆ.

ಅಂದರೆ, ವೈದ್ಯರ ಹೆಸರು, ಶೈಕ್ಷಣಿಕ ಅರ್ಹತೆ, ಅನುಭವ ಇತ್ಯಾದಿಯನ್ನು ಸರ್ಕಾರಿ ಅಧಿಕಾರಿಗಳಿಗೆ ತೋರಿಸಿ ದೃಢೀಕರಣ ಪಡೆಯಬೇಕು. ಇದನ್ನು ಜನಸಾಮಾನ್ಯರಿಗೆ ಅಥವಾ ಆನ್‌ಲೈನ್‌ನಲ್ಲಿ ಪ್ರಕಟಿಸಬೇಕೆಂಬ ಯಾವ ನಿಯಮವೂ ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಪೀಠವು ಸಿಬ್ಬಂದಿಯ ಮಾಹಿತಿ ಸಂಗ್ರಹಿಸುವ ನಿಯಮವು ಸಂಪೂರ್ಣ ಸಾಂವಿಧಾನಿಕವಾಗಿ ಸಿಂಧು ಎಂದು ಸ್ಪಷ್ಟಪಡಿಸಿದೆ. ಗೌಪ್ಯತೆಯ ಹಕ್ಕಿಗೆ ಸಂಬಂಧಿಸಿದ ಐತಿಹಾಸಿಕ ಪುಟ್ಟಸ್ವಾಮಿ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಲಯ, ಈ ಕ್ರಮವು (1) ಕಾಯ್ದೆಯಲ್ಲಿ ಸ್ಪಷ್ಟ ಆಧಾರ ಹೊಂದಿರುವ ಕಾನೂನುಬದ್ಧ ಕ್ರಮ, (2) ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಚಿಕಿತ್ಸೆ ಎಂಬ ಸಮಂಜಸ ಉದ್ದೇಶವನ್ನು ಹೊಂದಿದೆ, (3) ಅತಿಯಾಗಿ ಒತ್ತಡ ಹೇರುವುದಿಲ್ಲ, ಕೇವಲ ಕೆಲಸಕ್ಕೆ ಬೇಕಾದ ಅಗತ್ಯ ಮಾಹಿತಿ ಮಾತ್ರ ಕೇಳುತ್ತದೆ ಮತ್ತು ತಪಾಸಣೆಗೆ ಮಾತ್ರ ಬಳಸುತ್ತದೆ, (4) ಮಾಹಿತಿಯ ದುರುಪಯೋಗ ತಡೆಯಲು ಮಿತಿಗಳಿವೆ ಮತ್ತು ಯಾವುದೇ ಪ್ರತಿಕೂಲ ನಿರ್ಧಾರದ ವಿರುದ್ಧ ಮೇಲ್ಮನವಿ ಅಥವಾ ಪುನರ್ವಿಚಾರಣೆ ಮಾಡುವ ಹಕ್ಕು ಇದೆ. ಈ ನಾಲ್ಕೂ ಷರತ್ತುಗಳನ್ನು ಪೂರೈಸುವ ಕಾರಣ ಈ ನಿಯಮವು ವೈಯಕ್ತಿಕ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈಗಿರುವ ನಿಯಮಗಳು ಈಗಾಗಲೇ ಸಾಂವಿಧಾನಿಕವಾಗಿ ಸರಿಯಿದ್ದರೂ, ಇನ್ನಷ್ಟು ರಕ್ಷಣೆ ಮತ್ತು ಪಾರದರ್ಶಕತೆ ತರಲು ಸರ್ಕಾರ ಹೆಚ್ಚುವರಿ ನಿಯಮಗಳು ಅಥವಾ ಮಾರ್ಗದರ್ಶನಗಳನ್ನು ರೂಪಿಸಬಹುದು ಎಂದು ನ್ಯಾಯಾಲಯ ಸಲಹೆ ನೀಡಿದೆ.

ಸಿಬ್ಬಂದಿಯ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ನಲ್ಲಿ ಅಥವಾ ಬೋರ್ಡ್‌ನಲ್ಲಿ ಹಾಕುವ ಅವಶ್ಯಕತೆ ಇಲ್ಲ. ಅದನ್ನು ಕೇವಲ ಸರ್ಕಾರಿ ದಾಖಲೆಯಲ್ಲಿ ಸುರಕ್ಷಿತವಾಗಿ ಇಟ್ಟುಕೊಂಡರೆ ಸಾಕು ಎಂದು ನ್ಯಾಯಾಲಯ ಆದೇಶಿಸಿದೆ.

ಇನ್ನುಳಿದಂತೆ, ತುರ್ತು ಆರೈಕೆ ಮತ್ತು ಸುರಕ್ಷಿತ ವರ್ಗಾವಣೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಪ್ರದರ್ಶನ, ನವೀಕರಿಸಿದ ರೋಗಿಯ ಮಾಹಿತಿ ದಾಖಲೆ, ಕುಂದುಕೊರತೆ ನಿವಾರಣಾ ಕಾರ್ಯವಿಧಾನ, ಅನುಸರಣೆ ದಾಖಲಾತಿಗಳು, ರೋಗಿಗೆ ಪರಿಹಾರ ಸೇರಿದಂತೆ ಕಾಯ್ದೆಗೆ ಸಂಬಂಧಿಸಿದ ಪ್ರತಿಯೊಂದು ಅಂಶಗಳನ್ನು ನ್ಯಾಯಾಲಯ ತನ್ನ ಆದೇಶದಲ್ಲಿ ವಿವರವಾಗಿ ವಿಶ್ಲೇಷಿಸಿದೆ. ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ ಮತ್ತು ಕೆಲ ಸಲಹೆಗಳನ್ನು ನೀಡಿದೆ.

ಇನ್ನಷ್ಟು ಸಂಪೂರ್ಣ ಮಾಹಿತಿಗಾಗಿ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ಕೆಳಗಡೆ ಕೊಡಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...