Homeಮುಖಪುಟಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಭಾಗೀಯ ಪೀಠ ಬುಧವಾರ (ನವೆಂಬರ್ 26) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಶ್ಯಾಮ್ ಕುಮಾರ್ ವಿ.ಎಂ ಅವರನ್ನೊಳಗೊಂಡ ವಿಭಾಗೀಯ ಪೀಠವು, 2019ರಿಂದ ಹಂತ ಹಂತವಾಗಿ ಜಾರಿಗೆ ತರಲಾದ ಕಾನೂನನ್ನು ಎತ್ತಿಹಿಡಿದಿದೆ. ಕಾಯ್ದೆಯ ನಿಬಂಧನೆಗಳು ಅಸ್ಪಷ್ಟ, ಅನಿಯಂತ್ರಿತ, ಅಪ್ರಾಯೋಗಿಕ ಮತ್ತು ಅಸಮಾನವಾಗಿವೆ ಎಂಬ ಮೇಲ್ಮನವಿಯ ವಾದಗಳನ್ನು ತಿರಸ್ಕರಿಸಿದೆ.

"ಈ ತೀರ್ಪು ಕೇವಲ ಕಾನೂನಿನ ಘೋಷಣೆಯಾಗಿ ಕಾರ್ಯನಿರ್ವಹಿಸದೆ, ಘನತೆ, ನೈತಿಕ ಮತ್ತು ಸಮಾನ ವೈದ್ಯಕೀಯ ಆರೈಕೆಯ ಹಕ್ಕಿನ ಮರುದೃಢೀಕರಣವಾಗಿರಲಿ" ಎಂದು ಪೀಠ ಹೇಳಿದೆ.

ಕಾಯ್ದೆಯ ನಿಬಂಧನೆಗಳು ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಮತ್ತು ಯುರೋಪಿಯನ್ ಒಕ್ಕೂಟದಂತೆಯೇ ( (ಇಯು) ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಆಸ್ಪತ್ರೆ ನೌಕರರ ವಿವರಗಳನ್ನು ಬಹಿರಂಗಪಡಿಸುವುದು ಕಡ್ಡಾಯ, ಪ್ರತಿ ಚಿಕಿತ್ಸಾ ವಸ್ತು ಮತ್ತು ಪ್ಯಾಕೇಜ್‌ಗಳಿಗೆ ವಿಧಿಸುವ ಶುಲ್ಕಗಳ ಪಟ್ಟಿಯನ್ನು ಪ್ರಕಟಿಸುವುದು ಕಡ್ಡಾಯ ಎಂಬ ಕಾಯ್ದೆಯ ನಿಬಂಧನೆಗಳನ್ನು ಮೇಲ್ಮನವಿದಾರರು ಪ್ರಾಥಮಿಕವಾಗಿ ಪ್ರಶ್ನಿಸಿದ್ದರು. ರೋಗಿಗಳಿಗೆ ಜೀವರಕ್ಷಕ ಚಿಕಿತ್ಸೆಗಳು ಮತ್ತು ಸುರಕ್ಷಿತ ಸಾರಿಗೆಯನ್ನು ಕಡ್ಡಾಯವಾಗಿ ಒದಗಿಸುವ ಕಾನೂನಿನ ಆದೇಶವನ್ನೂ ಪ್ರಶ್ನಿಸಿದ್ದರು.

ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದು, ರೋಗಿಗಳ ಹಕ್ಕುಗಳು ಮತ್ತು ಸುರಕ್ಷತೆಯನ್ನು ಎತ್ತಿಹಿಡಿಯುವುದು, ಕ್ಲಿನಿಕಲ್ ಅಭ್ಯಾಸದಲ್ಲಿ ಪಾರದರ್ಶಕತೆ ಮತ್ತು ನೈತಿಕ ಮಾನದಂಡಗಳನ್ನು ಉತ್ತೇಜಿಸುವುದು, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳನ್ನು ಉತ್ತಮವಾಗಿ ಸಜ್ಜುಗೊಳಿಸುವುದು, ಸ್ಥಿರ ಮತ್ತು ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವುದು, ಆರೋಗ್ಯ ವಲಯದಲ್ಲಿ ಸಮಾನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶವನ್ನು ಕಾನೂನು ಹೊಂದಿದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತ್ತು.

ಪ್ರಶ್ನಿಸಲಾಗಿರುವ ನಿಬಂಧನೆಗಳನ್ನು ಮತ್ತು ಕಾಯ್ದೆಯ ರಚನಾತ್ಮಕ ಚೌಕಟ್ಟನ್ನು ಪರಿಶೀಲಿಸಿದ ನ್ಯಾಯಾಲಯ, ಈ ಕಾಯ್ದೆಯು ಈಗಾಗಲೇ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಕರ್ತವ್ಯಗಳನ್ನು ಜಾರಿಗೊಳಿಸುವ ವಿಧಾನವನ್ನು ಮಾತ್ರ ಹೊಂದಿದೆ ಎಂದು ಅಭಿಪ್ರಾಯಪಟ್ಟಿದೆ.

ಕಾಯ್ದೆಯು ಹೊಸ ನಿರ್ಬಂಧಗಳನ್ನು ಸೃಷ್ಟಿಸುವುದಿಲ್ಲ. ಬದಲಾಗಿ, ನೋಂದಣಿ ಮತ್ತು ಗುಣಮಟ್ಟದ ಮಾನದಂಡಗಳ ವ್ಯವಸ್ಥೆ, ಪಾರದರ್ಶಕತೆಯ ಕಡ್ಡಾಯ ಆದೇಶ, ತುರ್ತು ಚಿಕಿತ್ಸೆ ಮತ್ತು ರೋಗಿಯ ಸ್ಥಿರೀಕರಣಕ್ಕೆ ಜಾರಿಗೊಳಿಸಬಹುದಾದ ಕನಿಷ್ಠ ಅಗತ್ಯತೆಗಳು- ಈ ಎಲ್ಲವನ್ನೂ ಜಾರಿಗೆ ತಂದು ಸಾಂವಿಧಾನಿಕ ಜವಾಬ್ದಾರಿಗಳನ್ನು ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ದರ ಪಟ್ಟಿ ಪ್ರದರ್ಶನ ಕಡ್ಡಾಯ

ಕಾಯ್ದೆಯ ಸೆಕ್ಷನ್ 39ರ ಅಡಿಯಲ್ಲಿ ಬರುವ ‘ಸೇವೆಯ ಪ್ರಕಾರಗಳು’ ಮತ್ತು ‘ಪ್ಯಾಕೇಜ್ ದರಗಳು’ ಎಂಬ ಪದಗಳು ಅಸ್ಪಷ್ಟವಾಗಿವೆ ಎಂಬ ವಾದವನ್ನು ತಿರಸ್ಕರಿಸಿದ ಪೀಠವು, ಕಾಯ್ದೆಯು ಪ್ರತಿಯೊಂದು ವೈದ್ಯಕೀಯ ಪರಿಸ್ಥಿತಿಯನ್ನು ಮೊದಲೇ ಊಹಿಸಿ ಬೆಲೆ ನಿಗದಿಪಡಿಸಬೇಕೆಂದು ಆದೇಶಿಸುವುದಿಲ್ಲ. ಗುರುತಿಸಬಹುದಾದ ಸೇವೆಗಳು ಮತ್ತು ಪ್ಯಾಕೇಜ್‌ಗಳ ಪ್ರಾಮಾಣಿಕ ಮೂಲ ಬೆಲೆ, ಹೆಚ್ಚುವರಿ ಸೇವೆಗಳು, ತೊಡಕುಗಳು ಮತ್ತು ಹೆಚ್ಚಿನ ದಿನಗಳ ವಾಸ್ತವ್ಯಕ್ಕೆ ಪ್ರತ್ಯೇಕವಾಗಿ ಐಟಂ-ವೈಸ್ ಬಿಲ್ಲಿಂಗ್ (ವಿವರವಾದ ಬಿಲ್) ನೀಡಬೇಕು ಎಂಬುವುದನ್ನು ಮಾತ್ರ ಕಡ್ಡಾಯಗೊಳಿಸುತ್ತದೆ ಎಂದಿದೆ.

ಸೇವೆಗಳ ಬೆಲೆಯನ್ನು ಸರ್ಕಾರವೇ ನಿಗದಿಪಡಿಸುವುದಕ್ಕಿಂತ, ಈ ಬೆಲೆ ಬಹಿರಂಗಪಡಿಸುವ ನಿಯಮವು ಬಹಳ ಕಡಿಮೆ ಒತ್ತಡ ಹೇರುವಂಥದ್ದು. ಜೊತೆಗೆ, ಇದು ಜನಸಾಮಾನ್ಯರ ಹಿತವನ್ನು ಕಾಪಾಡುತ್ತದೆ ಮತ್ತು ಆಸ್ಪತ್ರೆಗಳು ಅತಿಯಾದ ಶುಲ್ಕ ವಿಧಿಸುವುದರಿಂದ ರೋಗಿಗಳಿಗೆ ರಕ್ಷಣೆ ನೀಡುತ್ತದೆ. ಆದ್ದರಿಂದ ಬೆಲೆ ಬಹಿರಂಗಪಡಿಸುವುದು ಸಾರ್ವಜನಿಕ ಹಿತಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ ‘ಪ್ಯಾಕೇಜ್ ದರಗಳು’ ಎಂದರೇನು? ಎಂಬುದನ್ನು ನ್ಯಾಯಾಲಯ ಸ್ಪಷ್ಟವಾಗಿ ವಿವರಿಸಿದೆ.

ಪ್ಯಾಕೇಜ್ ದರಗಳು ಎಂದರೆ ಸಾಮಾನ್ಯವಾಗಿ ನಡೆಸಲಾಗುವ ಶಸ್ತ್ರಚಿಕಿತ್ಸೆಗಳು ಅಥವಾ ಚಿಕಿತ್ಸಾ ಕ್ರಮಗಳಿಗೆ ನಿಗದಿಪಡಿಸಿರುವ ಮೂಲ ದರಗಳು ಮಾತ್ರ. ಇದರಲ್ಲಿ ಆ ಚಿಕಿತ್ಸೆಗೆ ಸಾಮಾನ್ಯವಾಗಿ ಬೇಕಾದ ಸೇವೆಗಳು ಸೇರಿಕೊಂಡಿರುತ್ತವೆ. ಆದರೆ ಊಹಿಸಿರದ ತೊಡಕುಗಳು, ರೋಗಿಯಲ್ಲಿ ಇರುವ ಇತರ ರೋಗಗಳ ನಿರ್ವಹಣೆ, ಐಸಿಯುವಿನಲ್ಲಿ ಹೆಚ್ಚು ದಿನಗಳ ಕಾಲ ಇರಬೇಕಾದ ಸ್ಥಿತಿ ಅಥವಾ ದುಬಾರಿ ಉಪಕರಣಗಳು/ಸಾಮಗ್ರಿಗಳ ಬಳಕೆ ಇತ್ಯಾದಿಗಳು ಪ್ಯಾಕೇಜ್‌ನಲ್ಲಿ ಸೇರಿಕೊಂಡಿರುವುದಿಲ್ಲ. ಇಂತಹ ಹೆಚ್ಚುವರಿ ವೆಚ್ಚಗಳನ್ನು ಪ್ರತ್ಯೇಕವಾಗಿ ಬಿಲ್ ಮಾಡಬಹುದು, ಆದರೆ ಎರಡು ಷರತ್ತುಗಳನ್ನು ಪೂರೈಸಲೇ ಬೇಕು: ಒಂದು, ರೋಗಿಗೆ ಅಥವಾ ಕುಟುಂಬಕ್ಕೆ ಈ ಹೆಚ್ಚುವರಿ ಶುಲ್ಕದ ಬಗ್ಗೆ ಮೊದಲೇ ಸ್ಪಷ್ಟವಾಗಿ ತಿಳಿಸಬೇಕು; ಎರಡು, ಆ ಖರ್ಚು ವೈದ್ಯಕೀಯವಾಗಿ ಅಗತ್ಯ ಎಂಬುದಕ್ಕೆ ಸಾಕ್ಷ್ಯ ಅಥವಾ ಕಾರಣ ತೋರಿಸಬೇಕು. ಈ ರೀತಿ ಪಾರದರ್ಶಕತೆ ಮತ್ತು ವೈದ್ಯಕೀಯ ಸಾಕ್ಷ್ಯ ಇದ್ದರೆ ಮಾತ್ರ ಪ್ಯಾಕೇಜ್ ಹೊರಗಿನ ಶುಲ್ಕ ವಿಧಿಸಲು ಅನುಮತಿ ಇದೆ ಎಂದು ನ್ಯಾಯಾಲಯ ಹೇಳಿದೆ.

ವೈದ್ಯರು ಮತ್ತು ಇತರ ಉದ್ಯೋಗಿಗಳ ವಿವರಗಳನ್ನು ಬಹಿರಂಗಪಡಿಸುವುದು

ವೈದ್ಯರು ಮತ್ತು ಇತರ ಸಿಬ್ಬಂದಿಯ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯತೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆಸ್ಪತ್ರೆಯಲ್ಲಿ ಸಾಕಷ್ಟು ಸಂಖ್ಯೆಯ ಸಿಬ್ಬಂದಿ ಇದ್ದಾರೆ ಮತ್ತು ಅವರು ಸಮರ್ಥರಿದ್ದಾರೆ ಎಂಬುದನ್ನು ಜನರಿಗೆ ತೋರಿಸಲು ಸಿಬ್ಬಂದಿಯ ಪ್ರಾಥಮಿಕ ಮಾಹಿತಿ ನೀಡಬಹುದು ಎಂದಿದೆ.

ಅಂದರೆ, ವೈದ್ಯರ ಹೆಸರು, ಶೈಕ್ಷಣಿಕ ಅರ್ಹತೆ, ಅನುಭವ ಇತ್ಯಾದಿಯನ್ನು ಸರ್ಕಾರಿ ಅಧಿಕಾರಿಗಳಿಗೆ ತೋರಿಸಿ ದೃಢೀಕರಣ ಪಡೆಯಬೇಕು. ಇದನ್ನು ಜನಸಾಮಾನ್ಯರಿಗೆ ಅಥವಾ ಆನ್‌ಲೈನ್‌ನಲ್ಲಿ ಪ್ರಕಟಿಸಬೇಕೆಂಬ ಯಾವ ನಿಯಮವೂ ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಪೀಠವು ಸಿಬ್ಬಂದಿಯ ಮಾಹಿತಿ ಸಂಗ್ರಹಿಸುವ ನಿಯಮವು ಸಂಪೂರ್ಣ ಸಾಂವಿಧಾನಿಕವಾಗಿ ಸಿಂಧು ಎಂದು ಸ್ಪಷ್ಟಪಡಿಸಿದೆ. ಗೌಪ್ಯತೆಯ ಹಕ್ಕಿಗೆ ಸಂಬಂಧಿಸಿದ ಐತಿಹಾಸಿಕ ಪುಟ್ಟಸ್ವಾಮಿ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಲಯ, ಈ ಕ್ರಮವು (1) ಕಾಯ್ದೆಯಲ್ಲಿ ಸ್ಪಷ್ಟ ಆಧಾರ ಹೊಂದಿರುವ ಕಾನೂನುಬದ್ಧ ಕ್ರಮ, (2) ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಚಿಕಿತ್ಸೆ ಎಂಬ ಸಮಂಜಸ ಉದ್ದೇಶವನ್ನು ಹೊಂದಿದೆ, (3) ಅತಿಯಾಗಿ ಒತ್ತಡ ಹೇರುವುದಿಲ್ಲ, ಕೇವಲ ಕೆಲಸಕ್ಕೆ ಬೇಕಾದ ಅಗತ್ಯ ಮಾಹಿತಿ ಮಾತ್ರ ಕೇಳುತ್ತದೆ ಮತ್ತು ತಪಾಸಣೆಗೆ ಮಾತ್ರ ಬಳಸುತ್ತದೆ, (4) ಮಾಹಿತಿಯ ದುರುಪಯೋಗ ತಡೆಯಲು ಮಿತಿಗಳಿವೆ ಮತ್ತು ಯಾವುದೇ ಪ್ರತಿಕೂಲ ನಿರ್ಧಾರದ ವಿರುದ್ಧ ಮೇಲ್ಮನವಿ ಅಥವಾ ಪುನರ್ವಿಚಾರಣೆ ಮಾಡುವ ಹಕ್ಕು ಇದೆ. ಈ ನಾಲ್ಕೂ ಷರತ್ತುಗಳನ್ನು ಪೂರೈಸುವ ಕಾರಣ ಈ ನಿಯಮವು ವೈಯಕ್ತಿಕ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈಗಿರುವ ನಿಯಮಗಳು ಈಗಾಗಲೇ ಸಾಂವಿಧಾನಿಕವಾಗಿ ಸರಿಯಿದ್ದರೂ, ಇನ್ನಷ್ಟು ರಕ್ಷಣೆ ಮತ್ತು ಪಾರದರ್ಶಕತೆ ತರಲು ಸರ್ಕಾರ ಹೆಚ್ಚುವರಿ ನಿಯಮಗಳು ಅಥವಾ ಮಾರ್ಗದರ್ಶನಗಳನ್ನು ರೂಪಿಸಬಹುದು ಎಂದು ನ್ಯಾಯಾಲಯ ಸಲಹೆ ನೀಡಿದೆ.

ಸಿಬ್ಬಂದಿಯ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ನಲ್ಲಿ ಅಥವಾ ಬೋರ್ಡ್‌ನಲ್ಲಿ ಹಾಕುವ ಅವಶ್ಯಕತೆ ಇಲ್ಲ. ಅದನ್ನು ಕೇವಲ ಸರ್ಕಾರಿ ದಾಖಲೆಯಲ್ಲಿ ಸುರಕ್ಷಿತವಾಗಿ ಇಟ್ಟುಕೊಂಡರೆ ಸಾಕು ಎಂದು ನ್ಯಾಯಾಲಯ ಆದೇಶಿಸಿದೆ.

ಇನ್ನುಳಿದಂತೆ, ತುರ್ತು ಆರೈಕೆ ಮತ್ತು ಸುರಕ್ಷಿತ ವರ್ಗಾವಣೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಪ್ರದರ್ಶನ, ನವೀಕರಿಸಿದ ರೋಗಿಯ ಮಾಹಿತಿ ದಾಖಲೆ, ಕುಂದುಕೊರತೆ ನಿವಾರಣಾ ಕಾರ್ಯವಿಧಾನ, ಅನುಸರಣೆ ದಾಖಲಾತಿಗಳು, ರೋಗಿಗೆ ಪರಿಹಾರ ಸೇರಿದಂತೆ ಕಾಯ್ದೆಗೆ ಸಂಬಂಧಿಸಿದ ಪ್ರತಿಯೊಂದು ಅಂಶಗಳನ್ನು ನ್ಯಾಯಾಲಯ ತನ್ನ ಆದೇಶದಲ್ಲಿ ವಿವರವಾಗಿ ವಿಶ್ಲೇಷಿಸಿದೆ. ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ ಮತ್ತು ಕೆಲ ಸಲಹೆಗಳನ್ನು ನೀಡಿದೆ.

ಇನ್ನಷ್ಟು ಸಂಪೂರ್ಣ ಮಾಹಿತಿಗಾಗಿ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ಕೆಳಗಡೆ ಕೊಡಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...