Homeಮುಖಪುಟಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು ‘ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ’ ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು ಅನುಸರಿಸುತ್ತಿರುವ ‘ಸ್ವಯಂ ನಿಯಂತ್ರಣ’ ಮಾದರಿಯ ಪರಿಣಾಮಕಾರಿತ್ವದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.

“ಇಂಡಿಯಾಸ್ ಗಾಟ್ ಲೇಟೆಂಟ್” ಕಾರ್ಯಕ್ರಮದಲ್ಲಿನ ಅಶ್ಲೀಲ ವಿಷಯಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪಾಡ್‌ಕ್ಯಾಸ್ಟರ್ ರಣವೀರ್ ಅಲಹಾಬಾದಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಪ್ರಕರಣ ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದರೂ, ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸುವ ಸುಪ್ರೀಂ ಕೋರ್ಟ್, ಇಡೀ ದೇಶದ ಆನ್‌ಲೈನ್ ಅಶ್ಲೀಲತೆಯನ್ನು ತಡೆಗಟ್ಟುವ ಸಂಬಂಧ ಮಾರ್ಗಸೂಚಿ ರೂಪಿಸುವ ಕುರಿತು ಚರ್ಚೆ ಆರಂಭಿಸಿದೆ.

ಗುರುವಾರ ವಿಚಾರಣೆಯ ವೇಳೆ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರ ಕೆಲವು ಹೊಸ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿದೆ ಮತ್ತು ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದು ಕೇವಲ ‘ಅಶ್ಲೀಲತೆ’ಗೆ ಸೀಮಿತವಾಗಿಲ್ಲ, ಬದಲಾಗಿ ಇಂಟರ್‌ನೆಟ್ ಬಳಕೆದಾರರು ರಚಿಸಿದ ವಿಷಯಗಳಲ್ಲಿನ ‘ವಿಕೃತತೆಗೂ ಸಂಬಂಧಿಸಿದೆ. ಜನರು ತಮ್ಮದೇ ಆದ ಯೂಟ್ಯೂಬ್ ಚಾನೆಲ್‌ಗಳು ಅಥವಾ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಅವುಗಳನ್ನು ಪ್ರಕಟಿಸುತ್ತಾರೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಕಾಂತ್, ಅಂತಹ ವಿಷಯ ರಚನೆಕಾರರಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈಗ ನಾನು ನನ್ನದೇ ಚಾನೆಲ್ ರಚಿಸಿ ಏನು ಬೇಕಾದರೂ ಅಪ್ಲೋಡ್ ಮಾಡಬಹುದೇ? ಅದಕ್ಕೆ ನಿಯಂತ್ರಣವಿಲ್ಲವೇ? ನಿಯಂತ್ರಿಸುವವರು ಬೇಕಲ್ಲವೇ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಮೌಲ್ಯಯುತವಾದ ಹಕ್ಕು, ಆದರೆ ಆ ಸ್ವಾತಂತ್ರ್ಯ ವಿಕೃತಿ ಮನೋಭಾವಕ್ಕೆ ದಾರಿ ಮಾಡಿಕೊಡಬಾರದು ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಅಭಿವ್ಯಕ್ತಿ ಹಕ್ಕನ್ನು ಗೌರವಿಸಲೇ ಬೇಕು. ಆದರೆ ಒಂದು ವೇಳೆ ಯಾವುದಾದರೂ ಕಾರ್ಯಕ್ರಮದಲ್ಲಿ ವಯಸ್ಕರಿಗೆ ಮಾತ್ರ ಸೂಕ್ತವಾದ (adult) ವಿಷಯ ಇದ್ದರೆ, ಅದನ್ನು ಪ್ರಸಾರ ಮಾಡುವ ಮೊದಲು ಸ್ಪಷ್ಟವಾದ ಎಚ್ಚರಿಕೆ ಕೊಡಲೇ ಬೇಕು. ಪ್ರೇಕ್ಷಕರಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಹೇಳಿದ್ದಾರೆ.

ಓಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಇತ್ಯಾದಿಗಳನ್ನೊಳಗೊಂಡಿರುವ ಇಂಡಿಯನ್ ಬ್ರಾಡ್‌ಕಾಸ್ಟ್ ಅಂಡ್ ಡಿಜಿಟಲ್ ಫೌಂಡೇಷನ್ ಪರವಾಗಿ ವಾದಿಸಿದ ಹಿರಿಯ ವಕೀಲ ಅಮಿತ್ ಸಿಬಲ್ ಅವರು, ಈಗಾಗಲೇ ಆನ್‌ಲೈನ್ ವಿಷಯಗಳ ನಿಯಂತ್ರಣಕ್ಕೆ 2021ರ ಐಟಿ ರೂಲ್ಸ್ (Information Technology (Intermediary Guidelines and Digital Media Ethics Code) Rules, 2021) ಇವೆ. ಈ ನಿಯಮಗಳನ್ನು ಪ್ರಸ್ತುತ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಮತ್ತು ಅನೇಕ ಅರ್ಜಿಗಳು ಅಲ್ಲಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿಯಮಗಳ ಕೆಲವು ಸೆಕ್ಷನ್‌ಗಳ ಮೇಲೆ ತಡೆಯಾಜ್ಞೆ ಇದ್ದರೂ ಸಹ, ಓಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂಪ್ರೇರಿತವಾಗಿ (voluntarily) ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಅನ್ನು ಪಾಲಿಸುತ್ತಿವೆ. ಜನರ ದೂರುಗಳನ್ನು ಪರಿಹರಿಸಲು ಒಂದು ಸ್ವತಂತ್ರ ಸಂಸ್ಥೆ ಇದೆ. ಈ ಸಂಸ್ಥೆಯ ಅಧ್ಯಕ್ಷೆಯಾಗಿ ನಿವೃತ್ತ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರು ಇದ್ದಾರೆ. ಯಾರಿಗಾದರೂ ಯಾವುದಾದರೂ ಒಂದು ಶೋ/ಸಿನಿಮಾ ಅಡೆತಡೆಯಿಲ್ಲದೆ ಅಶ್ಲೀಲ ಎನಿಸಿದರೆ ಅಲ್ಲಿಗೆ ದೂರು ಸಲ್ಲಿಸಬಹುದು ಮತ್ತು ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ ಎಂದಿದ್ದಾರೆ.

ಈ ಹಂತದಲ್ಲಿ, ಸಿಜೆಐ ಕಾಂತ್ ಸ್ವಯಂ-ನಿಯಂತ್ರಕ ಕಾರ್ಯವಿಧಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಶಾಸನಬದ್ಧ ನಿಯಂತ್ರಣದ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...