Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...