Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...