Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...