Homeಕರ್ನಾಟಕದೊರೆಸ್ವಾಮಿಯವರ ಸಾರ್ಥಕ ಬದುಕಿಗೆ ಅಖಂಡ ಬೆಂಬಲವಾಗಿ ನಿಂತಿದ್ದ ಲಲಿತಮ್ಮ

ದೊರೆಸ್ವಾಮಿಯವರ ಸಾರ್ಥಕ ಬದುಕಿಗೆ ಅಖಂಡ ಬೆಂಬಲವಾಗಿ ನಿಂತಿದ್ದ ಲಲಿತಮ್ಮ

- Advertisement -
- Advertisement -

ಲಲಿತಮ್ಮನವರು ಹುಟ್ಟಿದ್ದು ಮದ್ದೂರು ತಾಲೂಕು ಕೌಡ್ಲೆ. ಬೆಳೆದಿದ್ದು ಬೆಂಗಳೂರು. ದೊರೆಸ್ವಾಮಿಯವರ ಜೊತೆ ಮದುವೆ (ದೊರೆಸ್ವಾಮಿಯವರ ಪ್ರಕಾರ “ಒಂದು ರೀತಿಯಲ್ಲಿ ಲವ್ ಮ್ಯಾರೇಜ್”!) ಡಿಸೆಂಬರ್ 1950. ಭರ್ತಿ 69 ವರ್ಷಗಳ ಸಹಜೀವನ ನಡೆಸಿ ಈಗ ತಮ್ಮ 89 ವರ್ಷನೇ ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಜೀವನ ಪೂರ್ತಿ ದೊರೆಸ್ವಾಮಿಯವರ ಸಾರ್ಥಕ ಬದುಕಿಗೆ ಅಖಂಡ ಬೆಂಬಲವಾಗಿ ನಿಂತ ಸಾರ್ಥಕ ಬದುಕು ಬದುಕಿದರು. ಗಂಡನಾದ ಜಂಗಮ ತಿಂಗಳಿಗೆ ಕೈಗೆ ತಂದಿಡುತ್ತಿದ್ದ 100 ರೂ. ಮಾಸಾಶನದಲ್ಲಿ 34 ರೂಪಾಯಿ ಮನೆ ಬಾಡಿಗೆ ಕಟ್ಟಿ, ಮೂರೋ ನಾಲಕೋ ರೂಪಾಯಿ ಮನೆಗೆಲಸದಾಕೆಗೆ ಕೊಟ್ಟು ಮಿಕ್ಕಿದ್ದರಲ್ಲಿ ಎರಡು ಮಕ್ಕಳ ಎಲ್ಲ ಬೇಕುಬೇಡಗಳನ್ನು ನಿಭಾಯಿಸಿ ಮನೆ ತೂಗಿಸಿಕೊಂಡು ಬಂದ ಗಟ್ಟಿಗಿತ್ತಿ ಅವರಾಗಿದ್ದರು.

ಗಂಡ ಸತತ ನಾಲ್ಕು ವರ್ಷಗಳ ಕಾಲ ಭೂದಾನ ಚಳವಳಿಯ ಸಂಘಟಕರಾಗಿ ತಿಂಗಳಲ್ಲಿ ಮೂರುವಾರ ಊರೂರು ತಿರುಗಿ ಒಂದು ವಾರ ಮಾತ್ರ ಮನೆಯಲ್ಲಿರುತ್ತಿದ್ದುದು.

ಖಾದಿ ಪ್ರಸಾರ ಇತ್ಯಾದಿ ಕಾರಣ

ನಂತರ ಕೂಡ ದೊರೆಸ್ವಾಮಿಯವರು ಖಾದಿ ಪ್ರಸಾರ, ಪರಿಸರ ಚಳವಳಿ, ಶಾಲೆಗಳು-ಸಹಕಾರಿ ಸಂಘಗಳು, ಭ್ರಷ್ಟಾಚಾರ ವಿರೋಧಿ ಚಳವಳಿ ಇವೇ ಮುಂತಾದವುಗಳಲ್ಲಿ ಎಡೆಬಿಡದೆ ತೊಡಗಿಸಿಕೊಂಡು ತಿಂಗಳಲ್ಲಿ ಮೂರು ವಾರ ಹೊರಗೆ ಇರುತ್ತಿದ್ದವರೇ. ಕೈಗಾ ಚಳವಳಿಯಲ್ಲಿ ಸತತ ಎರಡು ವರ್ಷ ಆ ಕಡೆಯೇ ಇದ್ದವರು. ಆಗೆಲ್ಲ ಅಮ್ಮ ‘ಏಕಾಂಗವೀರ’ರೇ!

ಸಬ್‍ಇನ್‍ಸ್ಪೆಕ್ಟರ್‍ಗೇ ಗದರಿದರು!

ತುರ್ತುಪರಿಸ್ಥಿತಿ ಅವಧಿಯಲ್ಲಿ ದೊರೆಸ್ವಾಮಿಯವರು ನಾಲ್ಕು ತಿಂಗಳ ಕಾಲ ಜೈಲಿನಲ್ಲಿದ್ದರು. ಆಗ ಅಮ್ಮ ಪ್ರತಿವಾರ ಕೋಡುಬಳೆ, ನಿಪ್ಪಟ್ಟು, ಚಕ್ಕುಲಿ, ರವೆಉಂಡೆ, ಪುಳಿಯೋಗರೆ… ಹೀಗೆ ಏನಾದರೊಂದು ತಿಂಡಿಯನ್ನು ಎಲ್ಲ ಸತ್ಯಾಗ್ರಹಿಗಳಿಗೂ ಆಗುವಷ್ಟು ಮಾಡಿಕೊಂಡು ಜೈಲುಭೇಟಿಗೆ ಹೋಗುವರು. ಎಲ್ಲರೂ ಗಂಟೆ ಕಾಲ ಕೂತು ಹರಟುತ್ತ ಕುರುಕುತ್ತ ಸಮಯ ಕಳೆಯುವರು. ಜೈಲು ಸಿಬ್ಬಂದಿ ಕೂಡ ಸಾಮಾನ್ಯವಾಗಿ ಅಡ್ಡಿಪಡಿಸುತ್ತಿರಲಿಲ್ಲ.

ಆದರೆ ಒಮ್ಮೆ ಯಾರೋ ಒಬ್ಬ ಹೊಸಬ ‘ಉತ್ಸಾಹಿ’ ಸಬ್‍ಇನ್‍ಸ್ಪೆಕ್ಟರ್‍ಗೆ ಗ್ರಹಚಾರ ಕೆಟ್ಟುಬಿಟ್ಟಿತ್ತು! “ಅದನ್ನೆಲ್ಲ ಇಲ್ಲಿ ತರಬಾರದಮ್ಮ. ಇದು ಜೈಲು. ಗೊತ್ತು ತಾನೆ? ಇಲ್ಲಿ ಅದನ್ನೆಲ್ಲ ಅಲೋ ಮಾಡಲ್ಲ” ಅಂದರು. ಅಮ್ಮ ಅವರಿಗೆ ಸಮಾಧಾನವಾಗಿಯೇ ತಿಳಿಹೇಳಿ ನೋಡಿದರು. ಆತ ಜಗ್ಗಲಿಲ್ಲ. ತನ್ನ ಮಗನ ವಯಸ್ಸಿನ ಆತನಿಗೆ “ಇದೇನಪ್ಪ. ಇಷ್ಟು ದಿನ ಬಿಡುತ್ತಿದ್ದರು, ನಿಮ್ಮದೊಂದು ಹೊಸ ರೂಲ್ಸಾ?” ಎಂದರು ಅಮ್ಮ. ಆತನದು ಬಿಸಿರಕ್ತ. ತನ್ನ ರೂಲುದೊಣ್ಣೆ ಅಡ್ಡಹಿಡಿದು ತಡೆದು ಬಿಟ್ಟ. ಅಮ್ಮ ರಣಚಂಡಿಯಾಗಿ ಬಿಟ್ಟರು!

“ಏನು ಮಾಡ್ತೀಯೋ ಮಾಡ್ಕೋ. ಜೈಲಿಗೆ ಹಾಕ್ತೀಯಾ? ತಯಾರಾಗಿಯೇ ಬಂದಿದೀನಿ. ಈ ತಿಂಡಿಯನ್ನು ಮಾತ್ರ ನಾನು ಹಂಚದೆ ವಾಪಸ್ ಹೋಗೋಳಲ್ಲ..” ಎನ್ನುತ್ತಾ ಅವನ ರೂಲ್ ದೊಣ್ಣೆಯನ್ನೂ ಅವನನ್ನೂ ತಳ್ಳಿ ನುಗ್ಗಿ ನಡೆದೇಬಿಟ್ಟರು. ಇದು ಯಾಕೋ ವಿಕೋಪಕ್ಕೆ ಹೋಗಬಹುದೆಂದು ಹೆದರಿದ ಇತರ ಸಿಬ್ಬಂದಿ ಓಡಿಬಂದು ಇಬ್ಬರನ್ನೂ ಸಮಾಧಾನಪಡಿಸಿದರು. ಅಮ್ಮನಿಗೆ, “ಸಾಹೇಬ ಹೊಸಬ. ನಿಧಾನವಾಗಿ ನಾವು ಅವನಿಗೆ ಹೇಳ್ತೀವಿ. ಇವತ್ತೊಂದು ದಿನ ನಮ್ಮ ಕೈಲೇ ಕೊಡಿಯಮ್ಮ, ನಾವೇ ಹಂಚ್ತೀವಿ” ಅಂತ ರಣಚಂಡಿಯನ್ನು ಶಾಂತಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದರು!

ದೊರೆಸ್ವಾಮಿಯವರು ಅಮ್ಮನನ್ನು ನೆನೆದು ಹೇಳುತ್ತಾರೆ..

“70 ವರ್ಷಗಳ ಸಾರ್ಥಕ ಬದುಕು ಒಟ್ಟಿಗೆ ಕಳೆದೆವು. ಕಷ್ಟ ಸುಖ ಎಲ್ಲವನ್ನೂ ಕಂಡಿದ್ದೀವಿ. ಕಷ್ಟವನ್ನು ಪಟ್ಟಿದ್ದೀವಿ, ಸುಖವನ್ನು ಹಂಚಿಕೊಂಡಿದ್ದೆವು. ನಿಮ್ಮಂತ ನೂರಾರು ಗೆಳೆಯರನ್ನು ಪಡೆಯಲಿಕ್ಕೆ ಅವಳು ಇಲ್ಲದಿದ್ದರೆ ಸಾಧ್ಯವಾಗುತ್ತಿರಲಿಲ್ಲ. ಅವಳು ನನ್ನ ಪಾಡಿಗೆ ನನ್ನನ್ನು ಬಿಟ್ಟು ಮನೆ ಮತ್ತು ಮಕ್ಕಳನ್ನು ನೋಡಿಕೊಂಡಿದ್ದರಿಂದಲೇ ನಾನು ಊರೂರು ತಿರುಗಿಕೊಂಡು ನಿಮ್ಮೆಲ್ಲರ ಪ್ರೀತಿಯನ್ನು ಗಳಿಸಲಿಕ್ಕೆ ಸಾಧ್ಯವಾಯಿತು. ನನಗೆ ನೀವೆಲ್ಲರೂ ಸೇರಿ ಸಮಾಜ ನನ್ನ ರಕ್ಷಣೆಗೆ ನಿಲ್ಲುತ್ತದೆ. ಒಂದು ವೇಳೆ ನಾನೇ ಮೊದಲು ಹೊರಟುಹೋಗಿದ್ದರೆ ಅವಳನ್ನು ಯಾರು ನೋಡಿಕೊಳ್ಳುತ್ತಿದ್ದರು ಎಂಬ ಆತಂಕ ಕಾಡುತ್ತಿತ್ತು. ಆ ಆತಂಕ ಇವತ್ತು ದೂರವಾಗಿದೆ. ಅವಳು ಮುಂದೆ ಹೋಗಿದ್ದಾಳೆ. ಇದು ನಿಜವಾಗಿಯೂ ಸಮಾಧಾನದ ದಿನವಾಗಿದೆ.

ಹೌದು ಅವಳಿಲ್ಲದಿರುವುದು ಹಲವು ದಿನಗಳು ಕಾಡುತ್ತದೆ ನಿಜ. ಆದರೂ ಪರವಾಗಿಲ್ಲ. ನೀವೆಲ್ಲರೂ ಇದ್ದೀರಿ, ಇಷ್ಟೊಂದು ಜನ ನನ್ನ ವಿಶ್ವಾಸಿಗಳು, ಸ್ನೇಹಿತರೂ, ಹಿತೈಷಿಗಳಾಗಿದ್ದಿರಿ. ನಿಮ್ಮೆಲ್ಲರ ಬೆಂಬಲದೊಂದಿಗೆ ಇನ್ನುಳಿದ ಜೀವನವನ್ನು ಕಳೆಯಬಲ್ಲೆ ಎಂಬುದಾಗಿ ದೊರೆಸ್ವಾಮಿಯವರು ಅಮ್ಮನನ್ನು ನೆನಪಿಸಿಕೊಳ್ಳುತ್ತಾರೆ.

ಸಾವಿನಲ್ಲೂ ಮಾದರಿ

ಶ್ರೀಮತಿ ಲಲಿತಮ್ಮನವರಿಗೆ ದೊರೆಸ್ವಾಮಿಯವರು ಮತ್ತವರ ಕುಟುಂಬವರ್ಗದವರು ಯಾವುದೇ ಸಾಂಪ್ರದಾಯಿಕ ಅಂತ್ಯಸಂಸ್ಕಾರ ಮಾಡದೆ ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿಗೆ ವೈದ್ಯಕೀಯ ವಿದ್ಯಾರ್ಥಿಗಳ ಸಂಶೋಧನೆಗೋಸ್ಕರ ದೇಹದಾನ ಮಾಡಿದ್ದಾರೆ. ಸಮಾಜಕ್ಕೆ ಮಾದರಿ ಮತ್ತು ಆದರ್ಶವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...