Homeಮುಖಪುಟಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದ ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ವಕ್ತಾರರಾಗಿದ್ದರು. ಕೆಲವು ದಿನಗಳ ಹಿಂದೆ, ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ದಂಗೆ ವಿರೋಧಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪತ್ರಿಕಾ ಪ್ರಕಟಣೆ ನೀಡಿದ್ದರು. ಜನವರಿ 1ರಂದು ಮಾವೋವಾದಿಗಳು ಶರಣಾಗುವ ಗಡುವನ್ನು ನಿಗದಿಪಡಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅನಂತ್ ಶರಣಾಗತಿಗೆ ಹಲವು ಅಂಶಗಳು ಕಾರಣವಾಗಿವೆ ಎಂದು ಕ್ಯಾಂಪ್ ನಾಗ್ಪುರದ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಗಡ್ಚಿರೋಲಿ ರೇಂಜ್) ಅಂಕಿತ್ ಗೋಯಲ್ ಪತ್ರಿಕೆಗೆ ತಿಳಿಸಿದ್ದಾರೆ.

“ನಾವು ಅವರನ್ನು ಮನವೊಲಿಸಲು ಪ್ರಯತ್ನಿಸಿದೆವು, ಮತ್ತು ಕಾರ್ಯಾಚರಣೆಗಳು ಸಹ ನಡೆಯುತ್ತಿದ್ದವು. ಬಹುಶಃ ಶರಣಾಗಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿರಬಹುದು” ಎಂದು ಗೋಯಲ್ ಹೇಳಿದ್ದಾರೆ.

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದ ಪ್ರಮುಖ ಮಾವೋವಾದಿ ನಾಯಕರಲ್ಲಿ ಅನಂತ್ ಒಬ್ಬರಾಗಿದ್ದರು. ಸಿಪಿಐ (ಮಾವೋವಾದಿ) ಶ್ರೇಣಿಯಲ್ಲಿ ಅವರಿಗಿಂತ ಒಬ್ಬ ಕೇಂದ್ರ ಸಮಿತಿ ಸದಸ್ಯ ರಾಮಧೇರ್ ಮಾತ್ರ ಮೇಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರಾಮ್‌ಧೇರ್‌ನ ಗುಂಪು ಇನ್ನೂ ಈ ಪ್ರದೇಶದ ಉತ್ತರ ಭಾಗದಲ್ಲಿದೆ, ಆದರೆ, ಅವರೂ ಶೀಘ್ರದಲ್ಲೇ ಶರಣಾಗುತ್ತಾರೆ ಎಂಬುವುದು ನಮಗೆ ಖಚಿತವಾಗಿದೆ” ಎಂದು ಗೋಯಲ್ ಹೇಳಿದ್ದಾರೆ.

ವಿಭಾಗೀಯ ಸಮಿತಿಯ ಕಮಾಂಡರ್ ನಾಗಸು ಗೋಳು ವಡ್ಡೆ, ರಾಣೋ ಪೊರೆಟಿ, ಸಂತು ಪೊರೆಟಿ, ಸಂಗೀತಾ ಪಂಢರೆ, ಪ್ರತಾಪ್ ಬಂತುಲ, ಅನುಜಾ ಕಾರ, ಪೂಜಾ ಮುದಿಯಂ, ದಿನೇಶ್ ಸೊಟ್ಟಿ, ಶೀಲಾ ಮಾದವಿ ಮತ್ತು ಅರ್ಜುನ್ ದೊಡಿ ಶುಕ್ರವಾರ ಶರಣಾದ ಇತರರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಶರಣಾದ ಮಾವೋವಾದಿಗಳ ತಲೆಗೆ 89 ಲಕ್ಷ ರೂಪಾಯಿಗಳ ಸಾಮೂಹಿಕ ಬಹುಮಾನ ಘೋಷಣೆಯಾಗಿತ್ತು ಎಂದು ಗೊಂಡಿಯಾ ಪೊಲೀಸ್ ವರಿಷ್ಠಾಧಿಕಾರಿ ಗೋರಖ್ ಸುರೇಶ್ ಭಮಾರೆ ಪತ್ರಿಕೆಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮಾರ್ಚ್ 31, 2026ರೊಳಗೆ ಮಾವೋವಾದವನ್ನು ಕೊನೆಗೊಳಿಸುವುದಾಗಿ ಪದೇ ಪದೇ ಪ್ರತಿಜ್ಞೆ ಮಾಡುತ್ತಿದೆ.

ಜನವರಿಯಿಂದ 114 ಮಾವೋವಾದಿಗಳು ಮಹಾರಾಷ್ಟ್ರ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅಕ್ಟೋಬರ್ 15 ರಂದು, ಸಿಪಿಐ (ಮಾವೋವಾದಿ) ಪೊಲಿಟ್‌ಬ್ಯೂರೋ ಸದಸ್ಯ ಮಲ್ಲುಜೋಳ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೇರಿದಂತೆ 61 ಮಾವೋವಾದಿಗಳು ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಶರಣಾಗಿದ್ದರು.

ನೆರೆಯ ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿ ಸುಮಾರು 2,400 ಮಾವೋವಾದಿಗಳು ಶರಣಾಗಿದ್ದಾರೆ. ಇದೇ ವೇಳೆ 1,792 ಜನರನ್ನು ಬಂಧಿಸಲಾಗಿದೆ ಮತ್ತು 485 ಜನರನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ವಿವರಿಸಿದೆ.

2024ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಕೊಲ್ಲಲ್ಪಟ್ಟವರಲ್ಲಿ ಅನೇಕರು ಬಹುಮಾನ ಘೋಷಣೆಯಾಗಿದ್ದ ಮಾವೋವಾದಿಗಳು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ಅವರ ಕುಟುಂಬಗಳು ಈ ಹೇಳಿಕೆಯನ್ನು ವಿರೋಧಿಸಿವೆ. ಕೊಲ್ಲಲ್ಪಟ್ಟ ವ್ಯಕ್ತಿಗಳು ನಾಗರಿಕರು ಎಂದು ಕುಟುಂಬಗಳು ಹೇಳಿಕೊಂಡಿವೆ ಎಂದು ಮಾಲಿನಿ ಸುಬ್ರಮಣಿಯಂ ಸುದ್ದಿ ಸಂಸ್ಥೆ ಸ್ಕ್ರೋಲ್‌ಗಾಗಿ ಮಾಡಿದ ವರದಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...