Homeಮುಖಪುಟನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

- Advertisement -
- Advertisement -

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಸಚಿವರು ಪ್ರತಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಕಲಾಪ ಸ್ಥಗಿತಗೊಳ್ಳಬಾರದು. ಅದು ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ ಎಂದು ಸರ್ವಪಕ್ಷ ಸಭೆಯ ಬಳಿಕ ಕಿರಣ್ ರಿಜಿಜು ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಅಂಗೀಕರಿಸಲಾಗಿದೆಯೇ? ಎಂದು ಕೇಳಿದಾಗ, ಇಂದು ಸಂಜೆ ಸಭೆ ಸೇರಲಿರುವ ಸಂಸತ್ತಿನ ಕಾರ್ಯ ಕಲಾಪಗಳ ಸಲಹಾ ಸಮಿತಿ (ಬಿಎಸಿ) ಅಧಿವೇಶನದ ಕಾರ್ಯಸೂಚಿಯನ್ನು ನಿರ್ಧರಿಸುತ್ತದೆ ಎಂದು ರಿಜಿಜು ಪ್ರತಿಕ್ರಿಯಿಸಿದ್ದಾರೆ.

ಆಡಳಿತ ತಮ್ಮ ಪಕ್ಷ ವಿರೋಧ ಪಕ್ಷಗಳೊಂದಿಗೆ ಸಹಕರಿಸಿದರೆ ಸುಗಮವಾಗಿ ಕಲಾಪ ನಡೆಸಲು ನಮ್ಮ ಪಕ್ಷ ಸಹಕರಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

“ಸರ್ಕಾರವು ಎಸ್‌ಐಆರ್‌ನಂತಹ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆ ವೇಳೆ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಕಲ್ಯಾಣ್ ಬ್ಯಾನರ್ಜಿ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಎಸ್‌ಐಆರ್ ಕುರಿತು ಚರ್ಚೆಗೆ ಒತ್ತಾಯಿಸುವ ವಿಷಯದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ಡಿಎಂಕೆಯ ತಿರುಚಿ ಶಿವ ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ ಸಂಸತ್ ಕಲಾಪ ನಡೆಯಲು ಅವಕಾಶ ಕೊಡುವುದಿಲ್ಲ ಎಂದು ಸಮಾಜವಾದಿ ಪಕ್ಷ ಹೇಳಿದೆ.

“ಸಮಾಜವಾದಿ ಪಕ್ಷವು ಎಸ್‌ಐಆರ್ ವಿಷಯವನ್ನು ಮುಂದಿಟ್ಟಿದೆ. ಏಕೆಂದರೆ, ಎಸ್‌ಐಆರ್‌ನಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಮೊದಲು, ನಾವು ಕೇಳುತ್ತಿದ್ದೆವು, ಆದರೆ ಈಗ ಜನರ ಹೆಸರು ತೆಗೆದು ಹಾಕುತ್ತಿರುವುದನ್ನು ನೋಡುತ್ತಿದ್ದೇವೆ. ಬಿಹಾರದಲ್ಲಿ, ದುಷ್ಕೃತ್ಯಗಳು ನಡೆದಿವೆ. ನಾವು ಅದರ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಚುನಾವಣಾ ಆಯೋಗ ಎಸ್‌ಐಆರ್ ಅಕ್ರಮಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

“ತಪ್ಪು ನಡೆಯುತ್ತಿರುವಾಗ ಚರ್ಚೆ ಏಕೆ ಮಾಡಬಾರದು? ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ತೆಗೆದು ಹಾಕಿದರೆ ಚರ್ಚೆ ನಡೆಯುವುದಿಲ್ಲವೇ?” ಎಂದು ಯಾದವ್ ಪ್ರಶ್ನಿಸಿದ್ದಾರೆ.

“ನಾನು ಅನೇಕ ಸ್ಥಳಗಳಿಗೆ ಹೋಗಿದ್ದೇನೆ, ಇನ್ನೂ ಹೋಗುತ್ತಿದ್ದೇನೆ. ನಾನು 1967ರಿಂದ ಮತದಾರನಾಗಿದ್ದೇನೆ. ಇಟಾವಾ ಜಿಲ್ಲೆಯಲ್ಲಿ ನಮ್ಮೆಲ್ಲರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ. ಇಡೀ ಜಿಲ್ಲೆಯ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ. ನಮ್ಮ ಜಿಲ್ಲೆಯಿಂದ ಸಂಸತ್ತಿನ ಎರಡೂ ಸದನಗಳಲ್ಲಿ ಏಳು ಸಂಸದರು ಮತ್ತು ಮೂವರು ಶಾಸಕರಿದ್ದಾರೆ ಮತ್ತು ಅವರಲ್ಲಿ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇದು ಕೇವಲ ಫಾರ್ಮಾಲಿಟಿಗೆ ನಡೆಸಿದ ಸಭೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಅಲ್ಪಾವಧಿಯ ಚರ್ಚೆಗೆ ವಿಷಯವನ್ನು ಪಟ್ಟಿ ಮಾಡುವ ಮೂಲಕ ತನ್ನ ಉದ್ದೇಶಗಳನ್ನು ಸ್ಪಷ್ಟಪಡಿಸಿದೆ ಎಂದಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಮೋದಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಕೇವಲ ಫಾರ್ಮಾಲಿಟಿ ಮಾತ್ರ ಎಂದು ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

15 ದಿನಗಳ ಈ ಅಧಿವೇಶನವು ಸಂಸತ್ತಿನ ಇತಿಹಾಸದಲ್ಲಿ ಅತ್ಯಂತ ಕಡಿಮೆ ಅವಧಿಯದ್ದಾಗಿರಲಿದೆ. ಮೋದಿ ಸರ್ಕಾರವು 13 ಮಸೂದೆಗಳನ್ನು ಅಂಗೀಕಾರಕ್ಕಾಗಿ ಪಟ್ಟಿ ಮಾಡಿದೆ. ಇವುಗಳಲ್ಲಿ ಒಂದು ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಮತ್ತು ಎರಡು ಲೋಕಸಭೆಯ ಸಮಿತಿಯ ಮೂಲಕ ಹೋಗಿವೆ. ಇನ್ನುಳಿದ ಹತ್ತು ಮಸೂದೆಗಳನ್ನು ಸಂಬಂಧಪಟ್ಟ ಸ್ಥಾಯಿ ಸಮಿತಿ ಪರಿಶೀಲಿಸಿಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಸಹಜವಾಗಿಯೇ, ಪ್ರಸ್ತುತ ಪಟ್ಟಿ ಮಾಡದ ಮಸೂದೆಯನ್ನು ಅಲ್ಪಾವಧಿಯ ಅಧಿವೇಶನದ ನಂತರದ ಭಾಗದಲ್ಲಿ ಇದ್ದಕ್ಕಿದ್ದಂತೆ ಮಂಡಿಸುವ ಸಾಧ್ಯತೆಯಿದೆ ಎಂದು ರಮೇಶ್ ಹೇಳಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಸಂಸತ್ತಿನ ಅಧಿವೇಶನಗಳು ಸಾಮಾನ್ಯವಾಗಿ 20 ಕಲಾಪಗಳನ್ನು ಹೊಂದಿರುತ್ತವೆ.

ರಾಷ್ಟ್ರೀಯ ಭದ್ರತೆ, ವಾಯು ಮಾಲಿನ್ಯ, ಮತದಾರರ ಪಟ್ಟಿಯ ಪರಿಷ್ಕರಣೆ, ರೈತರ ಸಮಸ್ಯೆಗಳು ಮತ್ತು ವಿದೇಶಾಂಗ ನೀತಿಯ ಕುರಿತು ಚರ್ಚೆ ನಡೆಸಬೇಕೆಂದು ತಮ್ಮ ಪಕ್ಷ ಒತ್ತಾಯಿಸಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರ ನೇತೃತ್ವದಲ್ಲಿ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕೊನೆಗೊಳಿಸಲು ನೋಡುತ್ತಿರುವಂತೆ ತೋರುತ್ತಿದೆ ಎಂದು ಸರ್ವಪಕ್ಷ ಸಭೆಯ ನಂತರ ಗೊಗೊಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೆಹಲಿ ಸ್ಫೋಟದ ನಂತರ ರಾಷ್ಟ್ರೀಯ ಭದ್ರತೆಯ ಬಗ್ಗೆ ಚರ್ಚೆ ನಡೆಯಬೇಕೆಂದು ನಮ್ಮ ಪಕ್ಷ ಒತ್ತಾಯಿಸಿದೆ. ರಾಷ್ಟ್ರೀಯ ಭದ್ರತೆಯ ಬಗ್ಗೆ ಅಲ್ಪಾವಧಿಯ ಚರ್ಚೆಯನ್ನೂ ಸರ್ಕಾರ ಬಯಸುವುದಿಲ್ಲ ಎಂದು ತೋರುತ್ತದೆ. ಎರಡನೆಯದ್ದು ಪ್ರಜಾಪ್ರಭುತ್ವದ ಭದ್ರತೆ. ಚುನಾವಣೆಯ ಮೊದಲು, ಚುನಾವಣೆಯ ಸಂದರ್ಭ ಮತ್ತು ನಂತರ ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಗೊಗೊಯ್ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ನ ಪ್ರಮೋದ್ ತಿವಾರಿ, ಡಿಎಂಕೆಯ ಟಿ.ಆರ್ ಬಾಲು, ಟಿಎಂಸಿಯ ಡೆರೆಕ್ ಒ’ಬ್ರಿಯಾನ್ ಮತ್ತು ಐಯುಎಂಎಲ್‌ನ ಇ.ಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದರು. ಸರ್ಕಾರ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...