Homeಕರ್ನಾಟಕಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

- Advertisement -
- Advertisement -

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ‘ಈ ಹಿಂದೆ’ ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆದು ಈಗ ತಣ್ಣಗಾಗಿದೆ.

ಸಚಿವ ಸಂಪುಟ ಪುನರ್‌ರಚನೆ ಆಗುತ್ತದೆ ಎಂಬ ಸುದ್ದಿ ಬೆನ್ನಲ್ಲೇ ಹಲವು ಶಾಸಕರು ಮಂತ್ರಿ ಸ್ಥಾನಕ್ಕಾಗಿ ಮತ್ತು ತಮ್ಮ ಸ್ಥಾನ ಉಳಿಸಿಕೊಳ್ಳಲು ಹತ್ತಾರು ಮಂತ್ರಿಗಳು ದೆಹಲಿಗೆ ಮ್ಯಾರಥನ್ ಕೂಡ ನಡೆಸಿದ್ದಾರೆ. ಆದರೆ, ಇದೇ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಿಗೆ ‘ಉಪಹಾರ’ ಸೇವಿಸುವ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತು ಸಂಪುಟ ಪುನರ್‌ರಚನೆ ಚರ್ಚೆಗೆ ಅಲ್ಪ ವಿರಾಮ ಬಿದ್ದಿದೆ. “ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಮುಂದುವರಿಯುತ್ತೇವೆ” ಎಂದು ಉಭಯ ನಾಯಕರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂದರೆ, ಮುಖ್ಯಮಂತ್ರಿ ಬದಲಾವಣೆ ಸಂಘರ್ಷಕ್ಕೀಗ ‘ಕದನ ವಿರಾಮ’ ಸಿಕ್ಕಿದೆ. ಸಿಎಂ ಬದಲಾವಣೆ ವಿಚಾರವಂತೂ ‘ಬೂದಿ ಮುಚ್ಚಿದ ಕೆಂಡ’ದಂತಿದೆ.

ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ಉಪಹಾರದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿವಾದ ಇನ್ನೇನು ಮುಗಿದೇ ಹೋಯಿತು ಎನ್ನುವ ಹೊತ್ತಿಗೆ, ಮತ್ತೊಂದು ಅಚ್ಚರಿ ಹೆಸರು ಮುನ್ನೆಲೆಗೆ ಬಂದಿದೆ. ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿಯಾಗಿರುವ ‘ಹಿರಿಯ ಕಾಂಗ್ರೆಸ್‌ ನಾಯಕ’ರೊಬ್ಬರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯ ಈಗ ಚರ್ಚೆಯಾಗುತ್ತಿದೆ.

ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ?

ರಾಜ್ಯ ರಾಜಕೀಯ ಇತಿಹಾಸದಲ್ಲಿ ಈವರೆಗೆ ದಲಿತ (ಪರಿಶಿಷ್ಟ ಜಾತಿ ಮತ್ತು ಪಂಗಡ) ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗಿಲ್ಲ. ಸಿಎಂ ಹುದ್ದೆಯ ಚರ್ಚೆ ಆದಾಗಲೆಲ್ಲಾ ಈ ರಾಜ್ಯದ ಪ್ರಭಾವಿ ಜಾತಿಗಳೇ ಮುಂಚೂಣಿಯಲ್ಲಿರುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಬದಲಾವಣೆ ಚರ್ಚೆಯಲ್ಲಿ ‘ದಲಿತ ಮುಖ್ಯಮಂತ್ರಿ’ ಕೂಗು ಜೋರಾಗೇ ಕೇಳಿಬರುತ್ತಿದೆ. ಪರಿಶಿಷ್ಠ ಸಮುದಾಯದ ಶಾಸಕರು ಸಹ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಡಾ. ಜಿ.ಪರಮೇಶ್ವರ್ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸತೀಶ್‌ ಜಾರಕಿಹೊಳಿ ಹೆಸರುಗಳು ದಲಿತ ಮುಖ್ಯಮಂತ್ರಿ ಚರ್ಚೆಯ ಮುಂಚೂಣಿಯಲ್ಲಿವೆ. ಉಳಿದ ದಲಿತ ನಾಯಕರಿಗೆ ಹೋಲಿಸಿದರೆ ಹಾಗೂ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಪರಮೇಶ್ವರ್ ಮತ್ತು ಸತೀಶ್‌ ಹೆಸರನ್ನು ಹೈಕಮಾಂಡ್‌ ಒಪ್ಪಲ್ಲ ಎನ್ನಲಾಗುತ್ತಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್‌ ಹೈಕಕಮಾಂಡ್ ನಾಯಕರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಮುಖ್ಯಮಂತ್ರಿ ಪಟ್ಟಕ್ಕೇರಿಸುವ ಇಂಗಿತ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

ಖರ್ಗೆ ಆಯ್ಕೆಗೆ ಕಾರಣಗಳೇನು?

ಕಳೆದ ಐದು ದಶಕಗಳಿಂದ ರಾಜಕಾರಣದಲ್ಲಿರುವ ಖರ್ಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿ ಎನಿಸಿದ್ದಾರೆ. ‘ಕ್ಲೀನ್‌ ಇಮೇಜ್‌’ ಜೊತೆಗೆ ರಾಜಕೀಯ ಚಾಕಚಕ್ಯತೆಯೂ ಇದೆ. ಬಿಜೆಪಿ ಮತ್ತು ಸಂಘಪರಿವಾರವನ್ನು ರಾಜಕೀಯವಾಗಿ ಎದುರಿಸುವ ಎದೆಗಾರಿಕೆ ಜೊತೆಗೆ, ಕಳೆದ 12 ವರ್ಷಗಳಿಂದ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಸಾಕಷ್ಟು ಇಕ್ಕಟ್ಟಿಗೂ ಸಿಲುಕಿಸಿದ್ದಾರೆ. ಇದೇ ಕಾರಣಕ್ಕೆ ಬಹಳ ವರ್ಷಗಳ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ರಾಜ್ಯ ರಾಜಕಾರಣದಲ್ಲಿದ್ದಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಲವು ಭಾರಿ ಉನ್ನತ ಸ್ಥಾನ ಸ್ವಲ್ಪದರಲ್ಲೇ ಕೈತಪ್ಪಿದೆ. ಇದೀಗ, ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಖರ್ಗೆ ಅವರು ರಾಜ್ಯದಲ್ಲಿ ಮುಖ್ಯಮಂತ್ರಿಯಾದರೆ ದಲಿತರ ಮತಗಳ ಕ್ರೋಢೀಕರಣದ ಜೊತೆಗೆ, ಕಾಂಗ್ರೆಸ್‌ ಪಕ್ಷದಲ್ಲಿ ಭುಗಿಲೆದ್ದಿರುವ ಬಣ ಬಡಿದಾಟವೂ ಶಮನಾಗಲಿದೆ ಎಂಬ ಲೆಕ್ಕಾಚಾರ ಹೈಕಮಾಂಡ್‌ನದ್ದು ಎಂಬ ಚರ್ಚೆಯಿದೆ.

ಒಂದು ವೇಳೆ, ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ದಲಿತ ಸಮುದಾಯದವರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದೇ ಆದರೆ, ಕಾಂಗ್ರೆಸ್‌ ಹೈಕಮಾಂಡ್‌ನ ಮೊದಲ ಆಯ್ಕೆ ಖರ್ಗೆ ಎನ್ನಲಾಗುತ್ತಿದೆ. ಆದರೆ, ಹೈಕಮಾಂಡ್‌ ನಾಯಕರ ಬೇಡಿಕೆಯನ್ನು ಖರ್ಗೆ ಸುಲಭಕ್ಕೆ ಒಪ್ಪಿಲ್ಲ ಎಂಬ ಮಾತುಗಳಿದ್ದು, ಅವರನ್ನು ಮನವೊಲಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಆಗಬೇಕೆಂಬ ಹಠದಿಂದ ಹಿನ್ನಡೆಯಾಯಿತೇ?

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದುಕೊಂಡಿತು. ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯ ಜೊತೆಗೆ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಅವರ ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರವೂ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ನೆರವಾಗಿತ್ತು. ಫಲಿತಾಂಶ ಬಂದ ಹಲವಾರು ದಿನಗಳ ಹಗ್ಗಜಗ್ಗಾಟದ ಬಳಿಕ ಕೊನೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ತಲಾ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಎಂಬ ಒಪ್ಪಂದವಾಗಿದೆ ಎಂಬ ಸುದ್ದಿಯೂ ಇತ್ತು. ಆದರೆ, ಇಬ್ಬರೂ ನಾಯಕರು ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದರೆ, ಉಭಯ ನಾಯಕರ ಆಪ್ತರು ಮಾತ್ರ ಈ ಬಗ್ಗೆ ಆಗಾಗ್ಗೆ ವೇದಿಕೆಗಳ ಮೇಲೆ ಅಧಿಕಾರ ಹಂಚಿಕೆ ಸೂತ್ರದ ಕುರಿತು ಮಾತನಾಡಿದ್ದುಂಟು.

ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿದ್ದಂತೆಯೇ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಹ ದೆಹಲಿಯಲ್ಲಿ ಕುಳಿತು ಅಷ್ಟೇ ಪ್ರಮಾಣದಲ್ಲಿ ಕಾರ್ಯತಂತ್ರ ಮಾಡಿದ್ದಾರೆ. ಈ ಒಟ್ಟಾರೆ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿಯಾಗಬೇಕೆಂಬ ಡಿ.ಕೆ. ಶಿವಕುಮಾರ್ ಒತ್ತಡವೇ ಅವರಿಗೆ ನಕಾರಾತ್ಮಕವಾಗಿ ತಿರುಗಿದೆ ಎನ್ನಲಾಗುತ್ತದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ಖರ್ಗೆ ಅವರನ್ನೇ ಆಯ್ಕೆ ಮಾಡುವ ಮೂಲಕ ಉಭಯ ನಾಯಕರ ಬಾಯಿ ಮುಚ್ಚಿಸಲು ಹೈಕಮಾಂಡ್ ಉಪಾಯ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ....

‘ಅಮೆರಿಕಾ ಅಧ್ಯಕ್ಷನ ಹತ್ಯೆಯ ಸಂಚು ರೂಪಿಸಿದರೆ ಇರಾನ್ ‘ಭೂಮಿಯಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್ 

ವಾಷಿಂಗ್ಟನ್: ಟೆಹ್ರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ಅನ್ನು "ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು’ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ. ಬೆದರಿಕೆಗಳ ಬಿಸಿ ವಿನಿಮಯದಲ್ಲಿ,...

ಆಲ್ಗಾರಿದಂ ಪಕ್ಷಪಾತ, ಎಐನಲ್ಲೂ ಜಾತಿವಾದ-ತಾರತಮ್ಯ : ಹೊಸ ಚರ್ಚೆ ಹುಟ್ಟು ಹಾಕಿದ ಡಾ. ವಿಜೇಂದರ್ ಹೇಳಿಕೆ

ಆಲ್ಗಾರಿದಂ ಪಕ್ಷಪಾತ (Algorithm bias) ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಪ್ರಮುಖ ಸಾಮಾಜಿಕ ನ್ಯಾಯ ಹೋರಾಟಗಾರ ಮತ್ತು ವಿದ್ವಾಂಸ ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು, ಚಾಟ್‌ಜಿಪಿಟಿ (ChatGPT)ಯಂತಹ ಎಐ...

‘ಸನಾತನ ಧರ್ಮ ವಿವಾದ’: ಉದಯನಿಧಿ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದು ಬಿಜೆಪಿ ನಾಯಕನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಮಧುರೈ: ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಕುರಿತ ಹೇಳಿಕೆಗಳನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಬಿಜೆಪಿ ಐಟಿ ವಿಭಾಗದ ನಾಯಕ ಅಮಿತ್ ಮಾಳವೀಯ ಅವರ ವಿರುದ್ಧ ದಾಖಲಾಗಿದ್ದ...

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...