Homeಅಂತರಾಷ್ಟ್ರೀಯಆರ್‌ಎಸ್‌ಎಫ್‌ 'ಪತ್ರಿಕಾ ಸ್ವಾತಂತ್ರ್ಯ ಹರಣಗಾರರ' ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

ಆರ್‌ಎಸ್‌ಎಫ್‌ ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರ’ ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

- Advertisement -
- Advertisement -

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತ 151ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು (ನೆವಂಬರ್ 2) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಭಾರತದ ಎರಡು ಸಂಸ್ಥೆಗಳ ಹೆಸರಿದೆ.

ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ ಪತ್ರಕರ್ತರನ್ನು ಕೊಲ್ಲುವ, ಸೆನ್ಸಾರ್ ಮಾಡುವ, ಜೈಲಿಗೆ ಹಾಕುವ, ಹಲ್ಲೆ ಮಾಡುವ, ಸುದ್ದಿ ಮಾಧ್ಯಮವನ್ನು ಹತ್ತಿಕ್ಕುವ, ಪತ್ರಿಕೋದ್ಯಮವನ್ನು ಅವಹೇಳನ ಮಾಡುವ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಮಾಹಿತಿಯನ್ನು ತಿರುಚಲು ಅದರ ಸಂಕೇತಗಳನ್ನು ಬಳಸುವ ಜನರು, ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರಗಳು ಸೇರಿವೆ.

ಗೌತಮ್ ಅದಾನಿ ಮಾಲಿಕತ್ವದ ಅದಾನಿ ಗ್ರೂಪ್ ಮತ್ತು ಬಲಪಂಥೀಯ ಸುದ್ದಿ ವೆಬ್‌ಸೈಟ್ ಒಪ್ ಇಂಡಿಯಾವನ್ನು ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರು’ ಎಂದು ಆರ್‌ಎಸ್‌ಎಫ್ ಗುರುತಿಸಿದೆ.

ಜಾಗತಿಕವಾಗಿ ಪ್ರಬಲವಾಗಿರುವ ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನೀ ಕಮ್ಯುನಿಸ್ಟ್ ಪಕ್ಷ, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಹಾಗೂ ಗೂಗಲ್ ಮಾತೃಸಂಸ್ಥೆ ಆಲ್ಪಾಬೆಟ್ ಮತ್ತು ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ಹೆಸರುಗಳೂ ಪಟ್ಟಿಯಲ್ಲಿ ಇದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದಲ್ಲಿ ಸುಮಾರು 220 ಪತ್ರಕರ್ತರ ಸಾವಿಗೆ ಕಾರಣರಾದ ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್‌), ಮ್ಯಾನ್ಮಾರ್‌ ಸ್ಟೇಟ್ ಪೀಸ್ ಅಂಡ್ ಸೆಕ್ಯೂರಿಟಿ ಕಮಿಷನ್, ಕ್ಯಾಪ್ಟನ್ ಇಬ್ರಾಹಿಂ ಟ್ರೊರೆ ನೇತೃತ್ವದ ಬುರ್ಕಿನಾ ಫಾಸೊದ ಮಿಲಿಟರಿ ಜುಂಟಾ ಮತ್ತು ಪತ್ರಕರ್ತರಿಗೆ ಕಿರುಕುಳ ನೀಡಲು ತನ್ನ ಸಾಮಾಜಿಕ ಮಾಧ್ಯಮ ಎಕ್ಸ್ ಅನ್ನು ಬಳಸುವ ಬಿಲಿಯನೇರ್ ಎಲೋನ್ ಮಸ್ಕ್ ಕೂಡ ಪಟ್ಟಿಯಲ್ಲಿದ್ದಾರೆ.

ಅದಾನಿ

ಗೌತಮ್ ಅದಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರ ಎಂದು ಆರ್‌ಎಸ್‌ಎಫ್ ಉಲ್ಲೇಖಿಸಿದೆ. ಗ್ಯಾಗ್ ಸೂಟ್ (ಬಾಯಿ ಮುಚ್ಚಿಸುವ ಪ್ರಕರಣಗಳು) ಎಂಬ ಯೋಜಿತ ತಂತ್ರದ ಭಾಗವಾಗಿ ಆದಾನಿ ಗ್ರೂಪ್ ಮತ್ತು ಅದರ ಅಂಗ ಸಂಸ್ಥೆಗಳು 2017ರಿಂದ ಇಲ್ಲಿಯವರೆಗೆ 15ಕ್ಕೂ ಹೆಚ್ಚು ವಿಮರ್ಶಾತ್ಮಕ ಪತ್ರಕರ್ತರ ಮತ್ತು ಸುದ್ದಿ ಮಾಧ್ಯಮಗಳ ವಿರುದ್ಧ ಸುಮಾರು 10 ಕಾನೂನು ಮೊಕದ್ದಮೆಗಳನ್ನು ಹೂಡಿವೆ. ಇವುಗಳಲ್ಲಿ ಹಣದ ಪರಿಹಾರ ಕೇಳುವ ಮೊಕದ್ದೆಮೆಗಳು (ಸಿವಿಲ್ ಡಿಫಾಮೇಷನ್ ಕೇಸ್) ಮತ್ತು ಜೈಲು ಶಿಕ್ಷೆಯ ಬೆದರಿಕೆ ಇರುವ ಮೊಕದ್ದೆಮೆಗಳು (ಕ್ರಿಮಿನಲ್ ಡಿಫಾಮೇಷನ್ ಕೇಸ್) ಸೇರಿವೆ. ಈ ಮೂಲಕ ಸ್ವತಂತ್ರ ಪತ್ರಿಕೆಗಳ ಧ್ವನಿಯನ್ನು ಅಡಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದೆ.

ಆದಾನಿ ಗ್ರೂಪ್‌ನ 2025ರ ‘ಹಿಟ್ ಲಿಸ್ಟ್‌ನಲ್ಲಿ (ಟಾರ್ಗೆಟ್ ಪಟ್ಟಿ) 8 ಪತ್ರಕರ್ತರ ಮತ್ತು 3 ಸುದ್ದಿ ಮಾಧ್ಯಮಗಳ ವಿರುದ್ಧ ಆದಾನಿ ಹೂಡಿರುವ ಒಂದು ಸಿವಿಲ್ ಡಿಫಾಮೇಷನ್ (ಹಣದ ಪರಿಹಾರ) ಮತ್ತು ಒಂದು ಕ್ರಿಮಿನಲ್ ಡಿಫಾಮೇಷನ್ (ಜೈಲು ಶಿಕ್ಷೆಯ ಬೆದರಿಕೆ) ಪ್ರಕರಣ ಸೇರಿ ಎರಡು ಮೊಕದ್ದೆಮೆಗಳು ಸೇರಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ‘ಎಕ್ಸ್‌ಪಾರ್ಟೆ ಇಂಜಂಕ್ಷನ್’ (ಒಂದು ಪಕ್ಷದ ವಾದ ಆಲಿಸಿ ತಾತ್ಕಾಲಿಕ ತಡೆಯಾಜ್ಞೆ) ನೀಡಿದೆ. ಆದಾನಿ ಗ್ರೂಪ್‌ಗೆ ತಾವೇ ಯಾವ ಸುದ್ದಿ/ಲೇಖನ ತನಗೆ ‘ಅಪಖ್ಯಾತಿ’ ತರುವಂತದ್ದು ಎಂದು ನಿರ್ಧರಿಸುವ ಅಧಿಕಾರ ಸಿಕ್ಕಿದೆ. ಪತ್ರಕರ್ತರಿಗೆ ಅಥವಾ ಮಾಧ್ಯಮಕ್ಕೆ ಅವರ ವಾದ ಆಲಿಸದೇ ಆ ವಿಷಯಗಳನ್ನು ತೆಗೆದುಹಾಕುವಂತೆ ಆದೇಶವಾಗಿದೆ. ಪ್ರಕರಣವನ್ನು ಗುರುತಿಸಲಾಗದ ಮೂರನೇ ವ್ಯಕ್ತಿಗಳಿಗೆ ವಿಸ್ತರಿಸಲಾಗಿದೆ ಮತ್ತು ಅನಿಯಮಿತ ಸೆನ್ಸಾರ್‌ಶಿಪ್‌ಗೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

ದಿ ವೈರ್, ನ್ಯೂಸ್‌ಲಾಂಡ್ರಿ, ಹೆಚ್‌ಡಬ್ಲ್ಯೂ ನ್ಯೂಸ್ ಮತ್ತು ಸ್ವತಂತ್ರ ಪತ್ರಕರ್ತ ರವೀಶ್ ಕುಮಾರ್‌ನಂತಹ ಮಾಧ್ಯಮಗಳಿಗೆ ವಿಷಯಗಳನ್ನು ತೆಗೆದುಹಾಕುವ ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ವರದಿಯು ಗ್ಯಾಗ್ ಸೂಟ್‌ಗಳ ಬಳಕೆಯನ್ನು ಅದಾನಿಯ ಮಾರಕ ಆಯುಧವಾಗಿ ಗುರುತಿಸಿದೆ.

ಒಪ್‌ಇಂಡಿಯಾ

ಬಲಪಂಥೀಯಾ ಸುದ್ದಿ ವೆಬ್‌ಸೈಟ್ ಒಪ್‌ಇಂಡಿಯಾವನ್ನು ಪಿತೂರಿ ಸಿದ್ಧಾಂತಗಳ ಮಾರಕ ಆಯುಧ ಎಂದು ವರದಿ ಹೇಳಿದೆ. 2025ರಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಲಾಗಿದೆ. ಇದಕ್ಕೆ ಉದಾಹರಣೆಯಾಗಿ ಒಪ್‌ಇಂಡಿಯಾವನ್ನು ಹೆಸರಿಸಿದೆ.

“ಹಿಂದೂ ರಾಷ್ಟ್ರೀಯತಾವಾದಿ ವೆಬ್‌ಸೈಟ್ ಒಪ್‌ಇಂಡಿಯಾ ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಪದೇ ಪದೇ ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿದೆ. ಒಪ್‌ಇಂಡಿಯಾದ ವಿಷಯವು ‘ಲಿಬರಲ್ ಮೀಡಿಯಾ ಕಾರ್ಟೆಲ್’ ವಿರುದ್ಧದ ಹೋರಾಟದ ಭಾಗವಾಗಿ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಟ್ರೋಲ್ ನೆಟ್‌ವರ್ಕ್‌ಗಳ ಸಹಾಯದಿಂದ, ಇದು ನಿರ್ಣಾಯಕ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ನಿರೂಪಣೆಗಳನ್ನು ಪ್ರಸಾರ ಮಾಡುತ್ತದೆ, ಆಗಾಗ್ಗೆ ಅವರು ಯುಎಸ್ ಬಿಲಿಯನೇರ್ ಲೋಕೋಪಕಾರಿ ಅಥವಾ ಭಾರತ ವಿರೋಧಿ ಲಾಬಿ ಯ ಭಾಗವಾಗಿದ್ದಾರೆ ಎಂದು ಆರೋಪಿಸುತ್ತದೆ” ಎಂದು ವರದಿ ಹೇಳಿದೆ.

ಈ ವರ್ಷ ಒಪ್ಇಂಡಿಯಾ ಒಟ್ಟು 96 ಲೇಖನಗಳ ಮೂಲಕ ಪತ್ರಕರ್ತರು ಹಾಗೂ ಸ್ವತಂತ್ರ ಮಾಧ್ಯಮಗಳ ಮೇಲೆ ನೇರ ದಾಳಿ ನಡೆಸಿದೆ. 200 ಪುಟಗಳ ಒಂದು ವರದಿ ಪ್ರಕಟಿಸಿ, ಕೆಲವು ಪತ್ರಕರ್ತರು ಮತ್ತು ಮಾಧ್ಯಮಗಳು ಒಂದು ಗುಪ್ತ ಜಾಲ ರಚಿಸಿ ಮೋದಿ ಸರ್ಕಾರದ ವಿರುದ್ಧ ‘ನರೇಟಿವ್ ವಾರ್’ ನಡೆಸುತ್ತಿದ್ದಾರೆ ಮತ್ತು ಭಾರತದಲ್ಲಿ ‘ರೆಜೀಮ್ ಚೇಂಜ್’ (ಸರ್ಕಾರ ಉರುಳಿಸುವ ಯೋಜನೆ) ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಪೂರ್ತಿ ಕುಮ್ಮಕ್ಕು ಸಿದ್ಧಾಂತಗಳನ್ನು ಹರಡಿದೆ. ಈ ಲೇಖನಗಳು ಪ್ರಕಟವಾದ ತಕ್ಷಣ ಯೋಜಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ, ಬೆದರಿಕೆ ಮತ್ತು ಆನ್‌ಲೈನ್ ದೌರ್ಜನ್ಯದ ಬೃಹತ್ ಅಲೆಗಳು ಆ ಪತ್ರಕರ್ತರ ಮೇಲೆ ಬೀಳುವಂತೆ ಮಾಡಿದೆ. ಈ ಎಲ್ಲಾ ಕೃತ್ಯಗಳ ಮೂಲಕ ಸ್ವತಂತ್ರ ಪತ್ರಿಕೋದ್ಯಮವನ್ನು ಭಯಭೀತಿಗೊಳಿಸುವ ಮತ್ತು ಮೌನಗೊಳಿಸುವ ಉದ್ದೇಶ ಹೊಂದಿವೆ ಎಂಬುದು ಆರ್‌ಎಸ್‌ಎಫ್‌ ವರದಿಯ ಮುಖ್ಯ ಆತಂಕವಾಗಿದೆ.

ಸ್ವತಂತ್ರ ಮಾಧ್ಯಮ ಸಂಸ್ಥೆ ದಿ ನ್ಯೂಸ್ ಮಿನಿಟ್‌ನ ಸಹ-ಸಂಸ್ಥಾಪಕಿ ಮತ್ತು ಸಂಪಾದಕಿ ಧನ್ಯಾ ರಾಜೇಂದ್ರನ್ ಅವರನ್ನು ಪ್ರೈಝ್ ಫಾರ್ ಇಂಪ್ಯಾಕ್ಟ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಾನು ಘೋಷಿಸಿದ ನಂತರ, ಅಕ್ಟೋಬರ್ 23ರಂದು ಒಪ್‌ಇಂಡಿಯಾದಲ್ಲಿ ಅವರು ಮಾನಹಾನಿಕರ ವಿಷಯಕ್ಕೆ ಗುರಿಯಾಗಿದ್ದರು ಎಂದು ಆರ್‌ಎಸ್‌ಎಫ್‌ ತಿಳಿಸಿದೆ.

ಆರ್‌ಎಸ್‌ಎಫ್‌ ವರದಿಯನ್ನು ಇಲ್ಲಿ ನೋಡಬಹುದು

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...