Homeಮುಖಪುಟಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

- Advertisement -
- Advertisement -

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ.

ಶಾಹದರಾದ ಮಾನಸರೋವರ್ ಪಾರ್ಕ್‌ನ ಡಿಡಿಎ ಮಾರುಕಟ್ಟೆಯಲ್ಲಿರುವ ಸಮುದಾಯ ಕೇಂದ್ರದ ಬಳಿ ಹೆಡ್‌ ಕಾನ್‌ಸ್ಟೆಬಲ್ ಮದನ್ ಗೋಪಾಲ್ ತಿವಾರಿ ಎಂಬಾತ ಬಾಲಕನ ಮೇಲೆ ಗುಂಡು ಹಾರಿಸಿದ್ದಾನೆ. ಈತ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜಿತನಾಗಿದ್ದ. ಮದುವೆಗೆ ಆಗಮಿಸಿದ್ದ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪ್ರಸ್ತುತ ಮದನ್ ತಿವಾರಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಮದುವೆ ಕಾರ್ಯಕ್ರಮದಲ್ಲಿ ವರನನ್ನು ಕುದುರೆ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ ಬಾಲಕರ ಗುಂಪೊಂದು ಊಟ ಮಾಡುವ ಆಸೆಯಿಂದ ಮದುವೆಯತ್ತ ಹೋಗಿದೆ. ಇದನ್ನು ಗಮನಿಸಿದ ಹೆಡ್‌ ಕಾನ್‌ಸ್ಟೆಬಲ್ ಬಾಲಕರನ್ನು ಸ್ಥಳದಿಂದ ಹೋಗುವಂತೆ ಹೇಳಿದ್ದಾನೆ. ಈ ವೇಳೆ ಬಾಲಕರ ಗುಂಪು ಮತ್ತು ಮದನ್ ತಿವಾರಿ ನಡುವೆ ಮಾತಿನ ಚಕಮಕಿ ನಡೆದು, ಮದನ್ ತಿವಾರಿ ಬಾಲಕನಿಗೆ ಗುಂಡಿಕ್ಕಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಾವಿಗೀಡಾದ ಬಾಲಕ ನ್ಯೂ ಮಾಡ್ರನ್ ಪ್ರದೇಶದಲ್ಲಿ ವಾಸಿಸುತ್ತಿದ್ದ. ಗುಂಡಿನ ದಾಳಿಗೆ ಒಳಗಾದ ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಶಾಹದಾರ ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.

ಪ್ರಸ್ತುತ ಆರೋಪಿ ಹೆಡ್‌ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ. ಗುಂಡು ಹಾರಿಸಲು ಬಳಸಲಾಗಿದೆ ಎಂದು ಶಂಕಿಸಲಾದ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆತ ಗುಂಡು ಹಾರಿಸಲು ಬಳಸಿದ ಪಿಸ್ತೂಲು ವೈಯಕ್ತಿವೇ? ಸೇವಾ ಬಂದೂಕಾ? ಎಂಬ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಪ್ರತಿಕೃಯಿಸಿರುವ ಮೃತ ಬಾಲಕನ ತಂದೆ, ನನ್ನ ಮಗ ಮದುವೆ ಕಾರ್ಯಕ್ರಮದತ್ತ ಹೋಗಿದ್ದ ಎಂದು ಗೊತ್ತಿರಲಿಲ್ಲ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನನ್ನ ಮಗ ಮತ್ತು ಇತರ ಮೂವರು ಮದುವೆ ಮೆರವಣಿಗೆ ನಡೆಯುತ್ತಿದ್ದ ಜಾಗಕ್ಕೆ ಹೋಗಿದ್ದರು ಎಂಬುವುದು ನನಗೆ ನಂತರ ತಿಳಿಸಿದರು. ಅವರು ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಹೋಗಿರಲಿಲ್ಲ. ಬಹುಶಃ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲೋ, ಇಲ್ಲ ಸ್ವಲ್ಪ ಆಹಾರ ಸಿಕ್ಕಿದರೆ ತಿನ್ನಲೋ ಹೋಗಿರಬಹುದು. ಅಷ್ಟಕ್ಕೆ ಕೊಲ್ಲುವ ಅಗತ್ಯ ಏನಿತ್ತು?” ಬಾಲಕನ ತಂದೆ ಪ್ರಶ್ನಿಸಿರುವುದಾಗಿ ವರದಿ ತಿಳಿಸಿದೆ.

“ಇಬ್ಬರು ವ್ಯಕ್ತಿಗಳು ಅವನಿಗೆ (ಮಗನಿಗೆ) ಹೊಡೆಯಲು ಪ್ರಾರಂಭಿಸಿದಾಗ ಮತ್ತು ಕಳ್ಳತನದ ಆರೋಪ ಹೊರಿಸಿದಾಗ ಆತ ಕುದುರೆಯ ಬಳಿ ಇದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ” ಎಂದು ಬಾಲಕನ ತಂದೆ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...