Homeಮುಖಪುಟಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

- Advertisement -
- Advertisement -

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ.

ಶಾಹದರಾದ ಮಾನಸರೋವರ್ ಪಾರ್ಕ್‌ನ ಡಿಡಿಎ ಮಾರುಕಟ್ಟೆಯಲ್ಲಿರುವ ಸಮುದಾಯ ಕೇಂದ್ರದ ಬಳಿ ಹೆಡ್‌ ಕಾನ್‌ಸ್ಟೆಬಲ್ ಮದನ್ ಗೋಪಾಲ್ ತಿವಾರಿ ಎಂಬಾತ ಬಾಲಕನ ಮೇಲೆ ಗುಂಡು ಹಾರಿಸಿದ್ದಾನೆ. ಈತ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜಿತನಾಗಿದ್ದ. ಮದುವೆಗೆ ಆಗಮಿಸಿದ್ದ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪ್ರಸ್ತುತ ಮದನ್ ತಿವಾರಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಮದುವೆ ಕಾರ್ಯಕ್ರಮದಲ್ಲಿ ವರನನ್ನು ಕುದುರೆ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ ಬಾಲಕರ ಗುಂಪೊಂದು ಊಟ ಮಾಡುವ ಆಸೆಯಿಂದ ಮದುವೆಯತ್ತ ಹೋಗಿದೆ. ಇದನ್ನು ಗಮನಿಸಿದ ಹೆಡ್‌ ಕಾನ್‌ಸ್ಟೆಬಲ್ ಬಾಲಕರನ್ನು ಸ್ಥಳದಿಂದ ಹೋಗುವಂತೆ ಹೇಳಿದ್ದಾನೆ. ಈ ವೇಳೆ ಬಾಲಕರ ಗುಂಪು ಮತ್ತು ಮದನ್ ತಿವಾರಿ ನಡುವೆ ಮಾತಿನ ಚಕಮಕಿ ನಡೆದು, ಮದನ್ ತಿವಾರಿ ಬಾಲಕನಿಗೆ ಗುಂಡಿಕ್ಕಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಾವಿಗೀಡಾದ ಬಾಲಕ ನ್ಯೂ ಮಾಡ್ರನ್ ಪ್ರದೇಶದಲ್ಲಿ ವಾಸಿಸುತ್ತಿದ್ದ. ಗುಂಡಿನ ದಾಳಿಗೆ ಒಳಗಾದ ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಶಾಹದಾರ ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.

ಪ್ರಸ್ತುತ ಆರೋಪಿ ಹೆಡ್‌ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ. ಗುಂಡು ಹಾರಿಸಲು ಬಳಸಲಾಗಿದೆ ಎಂದು ಶಂಕಿಸಲಾದ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆತ ಗುಂಡು ಹಾರಿಸಲು ಬಳಸಿದ ಪಿಸ್ತೂಲು ವೈಯಕ್ತಿವೇ? ಸೇವಾ ಬಂದೂಕಾ? ಎಂಬ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಪ್ರತಿಕೃಯಿಸಿರುವ ಮೃತ ಬಾಲಕನ ತಂದೆ, ನನ್ನ ಮಗ ಮದುವೆ ಕಾರ್ಯಕ್ರಮದತ್ತ ಹೋಗಿದ್ದ ಎಂದು ಗೊತ್ತಿರಲಿಲ್ಲ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನನ್ನ ಮಗ ಮತ್ತು ಇತರ ಮೂವರು ಮದುವೆ ಮೆರವಣಿಗೆ ನಡೆಯುತ್ತಿದ್ದ ಜಾಗಕ್ಕೆ ಹೋಗಿದ್ದರು ಎಂಬುವುದು ನನಗೆ ನಂತರ ತಿಳಿಸಿದರು. ಅವರು ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಹೋಗಿರಲಿಲ್ಲ. ಬಹುಶಃ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲೋ, ಇಲ್ಲ ಸ್ವಲ್ಪ ಆಹಾರ ಸಿಕ್ಕಿದರೆ ತಿನ್ನಲೋ ಹೋಗಿರಬಹುದು. ಅಷ್ಟಕ್ಕೆ ಕೊಲ್ಲುವ ಅಗತ್ಯ ಏನಿತ್ತು?” ಬಾಲಕನ ತಂದೆ ಪ್ರಶ್ನಿಸಿರುವುದಾಗಿ ವರದಿ ತಿಳಿಸಿದೆ.

“ಇಬ್ಬರು ವ್ಯಕ್ತಿಗಳು ಅವನಿಗೆ (ಮಗನಿಗೆ) ಹೊಡೆಯಲು ಪ್ರಾರಂಭಿಸಿದಾಗ ಮತ್ತು ಕಳ್ಳತನದ ಆರೋಪ ಹೊರಿಸಿದಾಗ ಆತ ಕುದುರೆಯ ಬಳಿ ಇದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ” ಎಂದು ಬಾಲಕನ ತಂದೆ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...