Homeಮುಖಪುಟಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

- Advertisement -
- Advertisement -

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ.

ಶಾಹದರಾದ ಮಾನಸರೋವರ್ ಪಾರ್ಕ್‌ನ ಡಿಡಿಎ ಮಾರುಕಟ್ಟೆಯಲ್ಲಿರುವ ಸಮುದಾಯ ಕೇಂದ್ರದ ಬಳಿ ಹೆಡ್‌ ಕಾನ್‌ಸ್ಟೆಬಲ್ ಮದನ್ ಗೋಪಾಲ್ ತಿವಾರಿ ಎಂಬಾತ ಬಾಲಕನ ಮೇಲೆ ಗುಂಡು ಹಾರಿಸಿದ್ದಾನೆ. ಈತ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜಿತನಾಗಿದ್ದ. ಮದುವೆಗೆ ಆಗಮಿಸಿದ್ದ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪ್ರಸ್ತುತ ಮದನ್ ತಿವಾರಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಮದುವೆ ಕಾರ್ಯಕ್ರಮದಲ್ಲಿ ವರನನ್ನು ಕುದುರೆ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ ಬಾಲಕರ ಗುಂಪೊಂದು ಊಟ ಮಾಡುವ ಆಸೆಯಿಂದ ಮದುವೆಯತ್ತ ಹೋಗಿದೆ. ಇದನ್ನು ಗಮನಿಸಿದ ಹೆಡ್‌ ಕಾನ್‌ಸ್ಟೆಬಲ್ ಬಾಲಕರನ್ನು ಸ್ಥಳದಿಂದ ಹೋಗುವಂತೆ ಹೇಳಿದ್ದಾನೆ. ಈ ವೇಳೆ ಬಾಲಕರ ಗುಂಪು ಮತ್ತು ಮದನ್ ತಿವಾರಿ ನಡುವೆ ಮಾತಿನ ಚಕಮಕಿ ನಡೆದು, ಮದನ್ ತಿವಾರಿ ಬಾಲಕನಿಗೆ ಗುಂಡಿಕ್ಕಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಾವಿಗೀಡಾದ ಬಾಲಕ ನ್ಯೂ ಮಾಡ್ರನ್ ಪ್ರದೇಶದಲ್ಲಿ ವಾಸಿಸುತ್ತಿದ್ದ. ಗುಂಡಿನ ದಾಳಿಗೆ ಒಳಗಾದ ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಶಾಹದಾರ ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.

ಪ್ರಸ್ತುತ ಆರೋಪಿ ಹೆಡ್‌ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ. ಗುಂಡು ಹಾರಿಸಲು ಬಳಸಲಾಗಿದೆ ಎಂದು ಶಂಕಿಸಲಾದ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆತ ಗುಂಡು ಹಾರಿಸಲು ಬಳಸಿದ ಪಿಸ್ತೂಲು ವೈಯಕ್ತಿವೇ? ಸೇವಾ ಬಂದೂಕಾ? ಎಂಬ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಪ್ರತಿಕೃಯಿಸಿರುವ ಮೃತ ಬಾಲಕನ ತಂದೆ, ನನ್ನ ಮಗ ಮದುವೆ ಕಾರ್ಯಕ್ರಮದತ್ತ ಹೋಗಿದ್ದ ಎಂದು ಗೊತ್ತಿರಲಿಲ್ಲ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನನ್ನ ಮಗ ಮತ್ತು ಇತರ ಮೂವರು ಮದುವೆ ಮೆರವಣಿಗೆ ನಡೆಯುತ್ತಿದ್ದ ಜಾಗಕ್ಕೆ ಹೋಗಿದ್ದರು ಎಂಬುವುದು ನನಗೆ ನಂತರ ತಿಳಿಸಿದರು. ಅವರು ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಹೋಗಿರಲಿಲ್ಲ. ಬಹುಶಃ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲೋ, ಇಲ್ಲ ಸ್ವಲ್ಪ ಆಹಾರ ಸಿಕ್ಕಿದರೆ ತಿನ್ನಲೋ ಹೋಗಿರಬಹುದು. ಅಷ್ಟಕ್ಕೆ ಕೊಲ್ಲುವ ಅಗತ್ಯ ಏನಿತ್ತು?” ಬಾಲಕನ ತಂದೆ ಪ್ರಶ್ನಿಸಿರುವುದಾಗಿ ವರದಿ ತಿಳಿಸಿದೆ.

“ಇಬ್ಬರು ವ್ಯಕ್ತಿಗಳು ಅವನಿಗೆ (ಮಗನಿಗೆ) ಹೊಡೆಯಲು ಪ್ರಾರಂಭಿಸಿದಾಗ ಮತ್ತು ಕಳ್ಳತನದ ಆರೋಪ ಹೊರಿಸಿದಾಗ ಆತ ಕುದುರೆಯ ಬಳಿ ಇದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ” ಎಂದು ಬಾಲಕನ ತಂದೆ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...