Homeಮುಖಪುಟಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

- Advertisement -
- Advertisement -

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿದೆ.  

ಹುಮಾಯೂನ್‌ಪುರ ಗ್ರಾಮದ ನಿವಾಸಿ ರೋಹಿತ್ ಧಂಖರ್ ದುಷ್ಕರ್ಮಿಗಳ ಹಲ್ಲೆಯಿಂದ ಸಾವನ್ನಪ್ಪಿದ್ದಾರೆ. ರೋಹ್ಟಕ್‌ನ ಜಿಮ್ಖಾನಾ ಕ್ಲಬ್‌ನಲ್ಲಿ ಸದಸ್ಯರಿಗೆ ತರಬೇತಿ ನೀಡಿದ ವೃತ್ತಿಪರ ಬಾಡಿಬಿಲ್ಡರ್ ಆಗಿದ್ದ, ರೋಹಿತ್ 2018 ರಲ್ಲಿ, ಭಾರತದ ಪ್ಯಾರಾ ಒಲಿಂಪಿಕ್ ಸಮಿತಿ ಆಯೋಜಿಸಿದ್ದ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು.

ಬಲಗಾಲಿನಲ್ಲಿ ಅಂಗವೈಕಲ್ಯದಿಂದ ಬಳಲುತ್ತಿದ್ದ ರೋಹಿತ್ 2018 ರಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಅಂತರರಾಷ್ಟ್ರೀಯ ಪದಕ ವಿಜೇತರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಗಿನ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೋಹಿತ್ ಅವರನ್ನು ಸನ್ಮಾನಿಸಿದ್ದರು. 

ಶುಕ್ರವಾರ, ರೋಹಿತ್ ತನ್ನ ಸ್ನೇಹಿತ ಜತಿನ್ ಜೊತೆ ಜತಿನ್ ಅವರ ಸಂಬಂಧಿಕರ ಮದುವೆಗೆ ‘ಉಡುಗೊರೆ’ ಅರ್ಪಿಸಲು ಭಿವಾನಿಗೆ ಪ್ರಯಾಣ ಬೆಳೆಸಿದ್ದರು. ಅವರ ಸಂಬಂಧಿಕರ ಪ್ರಕಾರ, ಗ್ರಾಮದ ಹುಡುಗನ ಕಡೆಯವರು ತಡರಾತ್ರಿ ಮದುವೆ ಸ್ಥಳಕ್ಕೆ ಬಂದರು, ಆ ಗುಂಪಿನಲ್ಲಿದ್ದ ಕೆಲವು ಪುರುಷರು ಮಹಿಳೆಯರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. ರೋಹಿತ್ ಅವರನ್ನು ಎಚ್ಚರಿಸಿದರು, ಇದು ಸ್ವಲ್ಪ ಸಮಯದ ವಾಗ್ವಾದಕ್ಕೆ ಕಾರಣವಾಯಿತು. ಕಿರುಕುಳ ನೀಡಿದವರು ಅಲ್ಲಿಂದ ಹೊರಟುಹೋದರು, ಆದರೆ ನಂತರ ಪರಿಸ್ಥಿತಿ ಉಲ್ಬಣಗೊಂಡಿತು. ಸಮಾರಂಭದ ನಂತರ, ರೋಹಿತ್ ಮತ್ತು ಜತಿನ್ ಮನೆಗೆ ಮರಳಲು ತಮ್ಮ ವಾಹನದಲ್ಲಿ ಹೊರಟಾಗ, ಗೇಟ್ ಮುಚ್ಚಿದ್ದರಿಂದ ಅವರ ಕಾರು ರೈಲ್ವೆ ಕ್ರಾಸಿಂಗ್‌ನಲ್ಲಿ ನಿಲ್ಲಬೇಕಾಯಿತು.

ಈ ವೇಳೆ ಹೊಂಚು ಹಾಕಿದ್ದ ಸುಮಾರು 20 ದುಷ್ಕರ್ಮಿಗಳ ತಂಡ ದೊಣ್ಣೆ, ರಾಡ್ ಮತ್ತು ಇತರ ಆಯುಧಗಳಿಂದ ರೋಹಿತ್ ಮತ್ತು ಜನಿನ್ ಅವರನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. 

ರೋಹಿತ್ ಜೊತೆಯಲ್ಲಿದ್ದ ಜತಿನ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ರೋಹಿತ್ ಅವರನ್ನು ಹಿಡಿದು ತೀವ್ರವಾಗಿ ಥಳಿಸಲಾಗಿದೆ. “ಗಾಯದ ಗುರುತುಗಳಿಲ್ಲದ ಅವನ ದೇಹದ ಒಂದು ಭಾಗವೂ ಇರಲಿಲ್ಲ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ದಾಳಿಕೋರರು ಓಡಿಹೋದ ನಂತರ, ಜತಿನ್ ಸಹಾಯದಿಂದ ಹಿಂತಿರುಗಿ ರೋಹಿತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್‌ಗೆ ಕಳುಹಿಸಲಾಯಿತು. ವೈದ್ಯರ ರಾತ್ರಿಯಿಡೀ ಪ್ರಯತ್ನದ ಹೊರತಾಗಿಯೂ, ರೋಹಿತ್ ಶನಿವಾರ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಭಿವಾನಿ ಪೊಲೀಸರು ಪಿಜಿಐಎಂಎಸ್‌ಗೆ ತೆರಳಿದರು. ಕುಟುಂಬದ ದೂರಿನ ಆಧಾರದ ಮೇಲೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ. ರೋಹಿತ್ ಅವರ ಸೋದರ ಮಾವ ರವಿ ಖಾಸ್ಸಾ ಮತ್ತು ಚಿಕ್ಕಪ್ಪ ಸತೀಶ್ ಧನಖರ್, ಹಲ್ಲೆಕೋರರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. “ಇದು ಯೋಜಿತ ಕೊಲೆ. ರೋಹಿತ್ ಮಹಿಳೆಯರ ಘನತೆಯ ಪರವಾಗಿ ನಿಂತಿದ್ದಕ್ಕಾಗಿ ತಮ್ಮ ಜೀವವನ್ನು ತೆತ್ತರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...