Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...