Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ...

ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ಶಿಕ್ಷಕ ಸರ್ವೇಶ್...

ಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟಿಸಿದ ಹಿನ್ನೆಲೆ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಾಳೆಗೆ (ಡಿಸೆಂಬರ್ 2) ಮುಂದೂಡಿಕೆಯಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ...

‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಕೆಲವು ಸಂಸದರು ಬೀದಿನಾಯಿಯನ್ನು ಕರೆತಂದಿದ್ದಾರೆ ಎಂದು ಆಕ್ಷೇಪಿಸಿದ್ದಾರೆ, ಮಾಧ್ಯಮಗಳ ಎದಿರು ಈ ಆಕ್ಷೇಪಣೆಗಳನ್ನು ತಳ್ಳಿಹಾಕಿರುವ ರೇಣುಕಾ ಚೌಧರಿ...

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ. ಶಾಹದರಾದ...

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 'ಈ ಹಿಂದೆ' ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ...

ಪಶ್ಚಿಮ ಬಂಗಾಳ| ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಬಾಂಗ್ಲಾದೇಶದಿಂದ ಬಂದ 12 ಹಿಂದೂ ನಿರಾಶ್ರಿತ ಕುಟುಂಬಗಳು

ಧಾರ್ಮಿಕ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಹಲವು ವರ್ಷಗಳ ಹಿಂದೆ ಭಾರತಕ್ಕೆ ಪಲಾಯನ ಮಾಡಿದ ಬಾಂಗ್ಲಾದೇಶದ 12 ಹಿಂದೂ ನಿರಾಶ್ರಿತರಿಗೆ ಕೇಂದ್ರ ಸರ್ಕಾರ ಭಾರತೀಯ ಪೌರತ್ವ ನೀಡಿದೆ ಎಂದು 'ದಿ ಅಬ್ಸರ್ವರ್‌ ಪೋಸ್ಟ್‌' ವರದಿ ಮಾಡಿದೆ. ...

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ...

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ: ಸಿಬಿಐ ತನಿಖೆಗೆ ಆಗ್ರಹಿಸಿ, ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ರಾಜೀವ್ ಚಂದ್ರಶೇಖರ್

ಕೊಚ್ಚಿ: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಚಂದ್ರಶೇಖರ್ ತಮ್ಮ ಅರ್ಜಿಯಲ್ಲಿ...

ಶಾಸಕನ ವಿರುದ್ಧದ ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದಾತನ ಬಂಧನ

ಕೇರಳದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ದ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಯ ಗುರುತು ಬಹಿರಂಗಪಡಿಸಿ, ಅಪಮಾನ ಮಾಡಿದ ಆರೋಪದ ಮೇಲೆ ಪುರುಷ ಹಕ್ಕುಗಳ ಕಾರ್ಯಕರ್ತ ಮತ್ತು ಟಿವಿ ನಿರೂಪಕ ರಾಹುಲ್ ಈಶ್ವರ್...