Homeಮುಖಪುಟ'ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..'; ಪ್ರೇಮಿಯ ಶವವನ್ನು 'ಮದುವೆ'ಯಾದ ಯುವತಿಯ ಗಂಭೀರ ಆರೋಪ

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು ‘ಮದುವೆ’ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮವಾರ ನೀಡಿದ ಹೇಳಿಕೆಯಲ್ಲಿ, “ನನ್ನ ಸಹೋದರ ಹಿಮೇಶ್ ಮಾಮಿದ್ವರ್ ತನ್ನ ಗೆಳೆಯನ ವಿರುದ್ಧ ‘ಸುಳ್ಳು ಪ್ರಕರಣ’ ದಾಖಲಿಸಲು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾನೆ” ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಕೇಳಿದ ನಂತರ, ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಎಂಬ ಇಬ್ಬರು ಪೊಲೀಸರು ಹಿಮೇಶ್‌ನನ್ನು ಕೆರಳಿಸಿ ತನ್ನ ಗೆಳೆಯನೊಂದಿಗೆ ‘ಸೆಟಲ್‌’ ಮಾಡಿಕೊಳ್ಳುವಂತೆ ಸೂಚಿಸಿದರು ಎಂದು ಅವರು ಆರೋಪಿಸಿದ್ದಾರೆ. “ಆದ್ದರಿಂದ ಆ ದಿನ, ಸಕ್ಷಮ್ ಕೊಲ್ಲಲ್ಪಡುವ ಮೊದಲು, ಬೆಳಿಗ್ಗೆ 11 ರಿಂದ 12 ರ ಸುಮಾರಿಗೆ ನನ್ನ ಕಿರಿಯ ಸಹೋದರ ಹಿಮೇಶ್ ಮಾಮಿದ್ವರ್ ನನ್ನನ್ನು ಇತ್ವಾರಾ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು 21 ವರ್ಷದ ಆಂಚಲ್ ಮಾಮಿದ್ವರ್ ತಿಳಿಸಿದರು.

“ಅಲ್ಲಿ, ಅವನು ಸಕ್ಷಮ್ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದನು. ನಾನು ಎಲ್ಲರ ಮುಂದೆ ನಿರಾಕರಿಸಿದೆ. ಆಗ ಅಲ್ಲಿದ್ದ ಇಬ್ಬರು ಪೊಲೀಸರಾದ ಧೀರಜ್ ಕೊಮುಲ್ವಾರ್ ಮತ್ತು ಮಹಿ ದಾಸರ್ವರ್ ಅವರರು ಸಹೋದರನನ್ನು ಕೆರಳಿಸಿದರು. ಅವರು, ‘ನೀನು ಅವನನ್ನು ಹೊಡೆದ ನಂತರ ಇಲ್ಲಿಗೆ ಬಂದಿದ್ದೀಯಾ? ಹೀಗೆ ಮಾಡುವ ಬದಲು, ನಿನ್ನ ಸಹೋದರಿ ಯಾರೊಂದಿಗೆ ಸಂಬಂಧ ಹೊಂದಿದ್ದಾಳೆಯೋ ಅವರೊಂದಿಗೆ ಮಾತನಾಡುವುಸು ಉತ್ತಮ’ ಎಂದು ಹೇಳಿದರು” ಎಂದು ಅವರು ಹೇಳಿದರು.

ಆಂಚಲ್ ಮತ್ತು ಸಕ್ಷಮ್ (20) ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ, ಯುವತಿಯ ಕುಟುಂಬ ಸದಸ್ಯರು ಅವರ ಜಾತಿಗಳು ಬೇರೆ ಬೇರೆಯಾಗಿರುವುದರಿಂದ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ವರದಿಯ ಪ್ರಕಾರ, ಸಕ್ಷಮ್ ಮತ್ತು ಆಂಚಲ್ ಅವರ ಸಹೋದರರು ಈ ಬಗ್ಗೆ ಪರಸ್ಪರ ತಿಳಿದಿದ್ದರು, ಪ್ರೇಮಿಗಳಿಬ್ಬರೂ ಮೊದಲ ಭಾರಿಗೆ ಸಹೋದರ ಮೂಲಕವೇ ಭೇಟಿಯಾಗಿದ್ದರು.

ನವೆಂಬರ್ 27 ರ ಸಂಜೆ, ಸಕ್ಷಮ್ ಮತ್ತು ಹಿಮೇಶ್ ನಡುವೆ ಜಗಳ ನಡೆದ ನಂತರ, ಮಹಾರಾಷ್ಟ್ರದ ನಾಂದೇಡ್‌ನ ಓಲ್ಡ್ ಗಂಜ್ ಪ್ರದೇಶದಲ್ಲಿ ಸಕ್ಷಮ್ ಮೇಲೆ ಹಿಮೇಶ್ ನಡುವೆ ಗುಂಡು ಹಾರಿಸಿದನು. ನಂತರ, ಹಿಮೇಶ್ ಸಕ್ಷಮ್‌ನ ತಲೆಗೆ ಟೈಲ್‌ನಿಂದ ಹೊಡೆದ ಬಳಿಕ ಅವನು ಸ್ಥಳದಲ್ಲೇ ಸಾವನ್ನಪ್ಪಿದನು.

ಆಂಚಲ್ ಈಗ ತನ್ನ ಸಹೋದರ ಮತ್ತು ಇತರ ಕುಟುಂಬ ಸದಸ್ಯರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾಳೆ. “ನಾನು ಸಕ್ಷಾಮ್ (ಮೃತ) ಜೊತೆ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆ. ಅವನು ‘ಜೈ ಭೀಮ್’ ಅನುಯಾಯಿಯಾಗಿರುವುದರಿಂದ ನನ್ನ ಕುಟುಂಬ ಅದನ್ನು ಸ್ವೀಕರಿಸಲಿಲ್ಲ, ಅಷ್ಟೇ. ನನ್ನ ಕುಟುಂಬವು ಅವನಿಗೆ ನಮ್ಮ ಮದುವೆ ಮಾಡುವುದಾಗಿ ಭರವಸೆ ನೀಡಿತ್ತು. ಅವರು ನನಗೂ ಅದೇ ಭರವಸೆ ನೀಡಿದ್ದರು” ಎಂದು ಅವರು ತಿಳಿಸಿದರು.

ಪೊಲೀಸರು ಈಗ ಹಿಮೇಶ್ ಮತ್ತು ಆಂಚಲ್ ಅವರ ಇನ್ನೊಬ್ಬ ಸಹೋದರ ಸಾಹಿಲ್ (25) ಮತ್ತು ಅವರ ತಂದೆ ಗಜಾನನ್ ಮಾಮಿದ್ವಾರ್ (45) ಅವರನ್ನು ಬಂಧಿಸಿದ್ದಾರೆ. ಅವರೆಲ್ಲರನ್ನೂ ಮೂರು ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...