Homeಅಂತರಾಷ್ಟ್ರೀಯಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

- Advertisement -
- Advertisement -

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಸುನಾಲಿ ಖಾತೂನ್ ಎಂಬ ಮಹಿಳೆ, ಪತಿ ಡ್ಯಾನಿಶ್ ಎಸ್‌ಕೆ, ಎಂಟು ವರ್ಷದ ಮಗ ಶಬೀರ್ ಜೊತೆ ಸೋಮವಾರ ಸಂಜೆ 7.30ರ ಸುಮಾರಿಗೆ ಬಾಂಗ್ಲಾದ ಚಾಪೈನವಾಬ್‌ಗಂಜ್ ಜೈಲಿನಿಂದ ಹೊರಬಂದಿದ್ದಾರೆ. ಇವರ ಜೊತೆ ಗಡಿಪಾರಾಗಿ ಜೈಲು ಸೇರಿದ್ದ ಸ್ವೀಟಿ ಬೀಬಿ ಎಂಬ ಮತ್ತೊಬ್ಬರು ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳು ಕೂಡ ಇದೇ ವೇಳೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಾಪೈನವಾಬ್‌ಗಂಜ್‌ನ ಸ್ಥಳೀಯ ನ್ಯಾಯಾಲಯ ಮಾನವೀಯ ಆಧಾರದಲ್ಲಿ ಆರು ಮಂದಿಗೂ ಜಾಮೀನು ನೀಡಿದೆ. ಬಾಂಗ್ಲಾದೇಶದ ನಾಗರಿಕರೊಬ್ಬರು ಇವರ ಪರ ಶ್ಯೂರಿಟಿ ನಿಂತು 5,000 ಟಾಕಾ ಜಾಮೀನು ಬಾಂಡ್ ಒದಗಿಸಿದ್ದಾರೆ.

‘ಮಾನವೀಯ ಆಧಾರದ ಮೇಲೆ’ ಸುನಾಲಿ ಖಾತೂನ್ ಮತ್ತು ಅವರ ಮಗನಿಗೆ ಭಾರತಕ್ಕೆ ಮರಳಲು ಅವಕಾಶ ನೀಡುವುದನ್ನು ಪರಿಗಣಿಸುವಂತೆ ಭಾರತೀಯ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ದಿನವೇ ಖಾತೂನ್ ಮತ್ತು ಅವರ ಕುಟುಂಬಸ್ಥರು ಬಾಂಗ್ಲಾದ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಖಾತೂನ್ ಅವರು ಗರ್ಭಿಣಿಯಾಗಿರುವುದನ್ನು ಗಮನಿಸಿ, ಪಶ್ಚಿಮ ಬಂಗಾಳದ ಮಾಲ್ಡಾ ಗಡಿಯ ಮೂಲಕ ಭಾರತಕ್ಕೆ ವಾಪಾಸಾಗಲು ಅನುಮತಿ ನೀಡಬಹುದೇ ಎಂಬುದರ ಕುರಿತು ಸೂಚನೆಗಳನ್ನು ಪಡೆಯಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್ ಖಾತೂನ್ ಅವರ ಪತಿಯ ವಾಪಸಾತಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಪ್ರಕರಣದ ಮುಂದಿನ ವಿಚಾರಣೆ ಬುಧವಾರ (ಡಿಸೆಂಬರ್ 3) ನಡೆಯಲಿದೆ.

ಚಾಪೈನವಾಬ್‌ಗಂಜ್ ನ್ಯಾಯಾಲಯ ಗಡಿಪಾರಾದವರ ಗುಂಪಿನಲ್ಲಿ ಗರ್ಭಿಣಿ ಮತ್ತು ಮಕ್ಕಳು ಇದ್ದಾರೆ ಎಂಬ ವಾದವನ್ನು ಅಂಗೀಕರಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ.

ಆದಾಗ್ಯೂ, ಅವರು ಬಾಂಗ್ಲಾದೇಶದಲ್ಲಿಯೇ ಇರಬೇಕು ಮತ್ತು ಅಗತ್ಯವಿದ್ದಾಗ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ಮ್ಯಾಜಿಸ್ಟ್ರೇಟ್ ವಿಧಿಸಿದ್ದಾರೆ. ಖಾತೂನ್‌ ಅವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡಬೇಕು ಮತ್ತು ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ಟೈಮ್ಸ್ ಆಫ್ ಇಂಡಿಯಾ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಖಾತೂನ್, ಭಾರತಕ್ಕೆ ಮರಳಲು ಬಯಸುವುದಾಗಿ ಹೇಳಿಕೊಂಡಿದ್ದು, ಇತ್ತೀಚೆಗೆ ತನ್ನ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಲವಾರು ತಿಂಗಳುಗಳಿಂದ ಈ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಎಸ್‌ಕೆ ಮೊಫೀಝುಲ್ ಅವರು, ಜಿಲ್ಲೆಯಲ್ಲಿ ಅವರಿಗೆ ಬಾಡಿಗೆ ವಸತಿ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಜಾಮೀನು ಆದೇಶದಲ್ಲಿ ಖಾತೂನ್ ಮತ್ತು ಉಳಿದವರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಯಾವುದೇ ನಿರ್ದೇಶನವಿಲ್ಲ ಎಂಬುವುದಾಗಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಖಾತೂನ್, ಸ್ವೀಟಿ ಬೀಬಿ ಮತ್ತು ಅವರ ಕುಟುಂಬಗಳು ಪಶ್ಚಿಮ ಬಂಗಾಳದ ಬಿರ್ಬಮ್ ಜಿಲ್ಲೆಯವರು ಎಂದು ಹೇಳಿಕೊಂಡಿದ್ದಾರೆ. ಖಾತೂನ್, ಅವರ ಪತಿ ಮತ್ತು ಮಗನನ್ನು ಜೂನ್ 20ರಂದು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆರು ದಿನಗಳ ನಂತರ ಮೂವರನ್ನೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು.

ಸೆಪ್ಟೆಂಬರ್ 26ರಂದು ಕಲ್ಕತ್ತಾ ಹೈಕೋರ್ಟ್ ಖಾತೂನ್ ಸೇರಿದಂತೆ ಆರು ಜನರ ವಿರುದ್ಧದ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ನಾಲ್ಕು ವಾರಗಳಲ್ಲಿ ಅವರನ್ನು ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರುವಂತೆ ನಿರ್ದೇಶಿಸಿತ್ತು.

ನಾಲ್ಕು ವಾರಗಳ ಅವಧಿ ಅಕ್ಟೋಬರ್ 24ರಂದು ಕೊನೆಗೊಂಡಿದೆ. ಅದಕ್ಕೂ ಎರಡು ದಿನಗಳ ಮೊದಲು ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮುಂದುವರಿದಿದೆ.

ಮೇ ತಿಂಗಳಿನಿಂದ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರೋ ಅಥವಾ ದಾಖಲೆರಹಿತ ವಲಸಿಗರೋ ಎಂಬುವುದನ್ನು ಸಾಬೀತುಪಡಿಸುವಂತೆ ಒತ್ತಾಯಿಸಲಾಗುತ್ತಿದೆ.

ಭಾರತೀಯ ಪ್ರಜೆಗಳಾದ ಹಲವಾರು ಕಾರ್ಮಿಕರನ್ನು ಅಕ್ರಮ ವಲಸಿಗರು ಎಂದು ಆರೋಪಿಸಿ ಈಗಾಗಲೇ ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂಬ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...