Homeಅಂತರಾಷ್ಟ್ರೀಯಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

- Advertisement -
- Advertisement -

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಸುನಾಲಿ ಖಾತೂನ್ ಎಂಬ ಮಹಿಳೆ, ಪತಿ ಡ್ಯಾನಿಶ್ ಎಸ್‌ಕೆ, ಎಂಟು ವರ್ಷದ ಮಗ ಶಬೀರ್ ಜೊತೆ ಸೋಮವಾರ ಸಂಜೆ 7.30ರ ಸುಮಾರಿಗೆ ಬಾಂಗ್ಲಾದ ಚಾಪೈನವಾಬ್‌ಗಂಜ್ ಜೈಲಿನಿಂದ ಹೊರಬಂದಿದ್ದಾರೆ. ಇವರ ಜೊತೆ ಗಡಿಪಾರಾಗಿ ಜೈಲು ಸೇರಿದ್ದ ಸ್ವೀಟಿ ಬೀಬಿ ಎಂಬ ಮತ್ತೊಬ್ಬರು ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳು ಕೂಡ ಇದೇ ವೇಳೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಾಪೈನವಾಬ್‌ಗಂಜ್‌ನ ಸ್ಥಳೀಯ ನ್ಯಾಯಾಲಯ ಮಾನವೀಯ ಆಧಾರದಲ್ಲಿ ಆರು ಮಂದಿಗೂ ಜಾಮೀನು ನೀಡಿದೆ. ಬಾಂಗ್ಲಾದೇಶದ ನಾಗರಿಕರೊಬ್ಬರು ಇವರ ಪರ ಶ್ಯೂರಿಟಿ ನಿಂತು 5,000 ಟಾಕಾ ಜಾಮೀನು ಬಾಂಡ್ ಒದಗಿಸಿದ್ದಾರೆ.

‘ಮಾನವೀಯ ಆಧಾರದ ಮೇಲೆ’ ಸುನಾಲಿ ಖಾತೂನ್ ಮತ್ತು ಅವರ ಮಗನಿಗೆ ಭಾರತಕ್ಕೆ ಮರಳಲು ಅವಕಾಶ ನೀಡುವುದನ್ನು ಪರಿಗಣಿಸುವಂತೆ ಭಾರತೀಯ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ದಿನವೇ ಖಾತೂನ್ ಮತ್ತು ಅವರ ಕುಟುಂಬಸ್ಥರು ಬಾಂಗ್ಲಾದ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಖಾತೂನ್ ಅವರು ಗರ್ಭಿಣಿಯಾಗಿರುವುದನ್ನು ಗಮನಿಸಿ, ಪಶ್ಚಿಮ ಬಂಗಾಳದ ಮಾಲ್ಡಾ ಗಡಿಯ ಮೂಲಕ ಭಾರತಕ್ಕೆ ವಾಪಾಸಾಗಲು ಅನುಮತಿ ನೀಡಬಹುದೇ ಎಂಬುದರ ಕುರಿತು ಸೂಚನೆಗಳನ್ನು ಪಡೆಯಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್ ಖಾತೂನ್ ಅವರ ಪತಿಯ ವಾಪಸಾತಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಪ್ರಕರಣದ ಮುಂದಿನ ವಿಚಾರಣೆ ಬುಧವಾರ (ಡಿಸೆಂಬರ್ 3) ನಡೆಯಲಿದೆ.

ಚಾಪೈನವಾಬ್‌ಗಂಜ್ ನ್ಯಾಯಾಲಯ ಗಡಿಪಾರಾದವರ ಗುಂಪಿನಲ್ಲಿ ಗರ್ಭಿಣಿ ಮತ್ತು ಮಕ್ಕಳು ಇದ್ದಾರೆ ಎಂಬ ವಾದವನ್ನು ಅಂಗೀಕರಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ.

ಆದಾಗ್ಯೂ, ಅವರು ಬಾಂಗ್ಲಾದೇಶದಲ್ಲಿಯೇ ಇರಬೇಕು ಮತ್ತು ಅಗತ್ಯವಿದ್ದಾಗ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ಮ್ಯಾಜಿಸ್ಟ್ರೇಟ್ ವಿಧಿಸಿದ್ದಾರೆ. ಖಾತೂನ್‌ ಅವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡಬೇಕು ಮತ್ತು ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ಟೈಮ್ಸ್ ಆಫ್ ಇಂಡಿಯಾ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಖಾತೂನ್, ಭಾರತಕ್ಕೆ ಮರಳಲು ಬಯಸುವುದಾಗಿ ಹೇಳಿಕೊಂಡಿದ್ದು, ಇತ್ತೀಚೆಗೆ ತನ್ನ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಲವಾರು ತಿಂಗಳುಗಳಿಂದ ಈ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಎಸ್‌ಕೆ ಮೊಫೀಝುಲ್ ಅವರು, ಜಿಲ್ಲೆಯಲ್ಲಿ ಅವರಿಗೆ ಬಾಡಿಗೆ ವಸತಿ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಜಾಮೀನು ಆದೇಶದಲ್ಲಿ ಖಾತೂನ್ ಮತ್ತು ಉಳಿದವರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಯಾವುದೇ ನಿರ್ದೇಶನವಿಲ್ಲ ಎಂಬುವುದಾಗಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಖಾತೂನ್, ಸ್ವೀಟಿ ಬೀಬಿ ಮತ್ತು ಅವರ ಕುಟುಂಬಗಳು ಪಶ್ಚಿಮ ಬಂಗಾಳದ ಬಿರ್ಬಮ್ ಜಿಲ್ಲೆಯವರು ಎಂದು ಹೇಳಿಕೊಂಡಿದ್ದಾರೆ. ಖಾತೂನ್, ಅವರ ಪತಿ ಮತ್ತು ಮಗನನ್ನು ಜೂನ್ 20ರಂದು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆರು ದಿನಗಳ ನಂತರ ಮೂವರನ್ನೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು.

ಸೆಪ್ಟೆಂಬರ್ 26ರಂದು ಕಲ್ಕತ್ತಾ ಹೈಕೋರ್ಟ್ ಖಾತೂನ್ ಸೇರಿದಂತೆ ಆರು ಜನರ ವಿರುದ್ಧದ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ನಾಲ್ಕು ವಾರಗಳಲ್ಲಿ ಅವರನ್ನು ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರುವಂತೆ ನಿರ್ದೇಶಿಸಿತ್ತು.

ನಾಲ್ಕು ವಾರಗಳ ಅವಧಿ ಅಕ್ಟೋಬರ್ 24ರಂದು ಕೊನೆಗೊಂಡಿದೆ. ಅದಕ್ಕೂ ಎರಡು ದಿನಗಳ ಮೊದಲು ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮುಂದುವರಿದಿದೆ.

ಮೇ ತಿಂಗಳಿನಿಂದ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರೋ ಅಥವಾ ದಾಖಲೆರಹಿತ ವಲಸಿಗರೋ ಎಂಬುವುದನ್ನು ಸಾಬೀತುಪಡಿಸುವಂತೆ ಒತ್ತಾಯಿಸಲಾಗುತ್ತಿದೆ.

ಭಾರತೀಯ ಪ್ರಜೆಗಳಾದ ಹಲವಾರು ಕಾರ್ಮಿಕರನ್ನು ಅಕ್ರಮ ವಲಸಿಗರು ಎಂದು ಆರೋಪಿಸಿ ಈಗಾಗಲೇ ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂಬ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ....

‘ಅಮೆರಿಕಾ ಅಧ್ಯಕ್ಷನ ಹತ್ಯೆಯ ಸಂಚು ರೂಪಿಸಿದರೆ ಇರಾನ್ ‘ಭೂಮಿಯಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್ 

ವಾಷಿಂಗ್ಟನ್: ಟೆಹ್ರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ಅನ್ನು "ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು’ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ. ಬೆದರಿಕೆಗಳ ಬಿಸಿ ವಿನಿಮಯದಲ್ಲಿ,...

ಆಲ್ಗಾರಿದಂ ಪಕ್ಷಪಾತ, ಎಐನಲ್ಲೂ ಜಾತಿವಾದ-ತಾರತಮ್ಯ : ಹೊಸ ಚರ್ಚೆ ಹುಟ್ಟು ಹಾಕಿದ ಡಾ. ವಿಜೇಂದರ್ ಹೇಳಿಕೆ

ಆಲ್ಗಾರಿದಂ ಪಕ್ಷಪಾತ (Algorithm bias) ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಪ್ರಮುಖ ಸಾಮಾಜಿಕ ನ್ಯಾಯ ಹೋರಾಟಗಾರ ಮತ್ತು ವಿದ್ವಾಂಸ ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು, ಚಾಟ್‌ಜಿಪಿಟಿ (ChatGPT)ಯಂತಹ ಎಐ...

‘ಸನಾತನ ಧರ್ಮ ವಿವಾದ’: ಉದಯನಿಧಿ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದು ಬಿಜೆಪಿ ನಾಯಕನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಮಧುರೈ: ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಕುರಿತ ಹೇಳಿಕೆಗಳನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಬಿಜೆಪಿ ಐಟಿ ವಿಭಾಗದ ನಾಯಕ ಅಮಿತ್ ಮಾಳವೀಯ ಅವರ ವಿರುದ್ಧ ದಾಖಲಾಗಿದ್ದ...

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...