Homeಅಂತರಾಷ್ಟ್ರೀಯಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

- Advertisement -
- Advertisement -

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಸುನಾಲಿ ಖಾತೂನ್ ಎಂಬ ಮಹಿಳೆ, ಪತಿ ಡ್ಯಾನಿಶ್ ಎಸ್‌ಕೆ, ಎಂಟು ವರ್ಷದ ಮಗ ಶಬೀರ್ ಜೊತೆ ಸೋಮವಾರ ಸಂಜೆ 7.30ರ ಸುಮಾರಿಗೆ ಬಾಂಗ್ಲಾದ ಚಾಪೈನವಾಬ್‌ಗಂಜ್ ಜೈಲಿನಿಂದ ಹೊರಬಂದಿದ್ದಾರೆ. ಇವರ ಜೊತೆ ಗಡಿಪಾರಾಗಿ ಜೈಲು ಸೇರಿದ್ದ ಸ್ವೀಟಿ ಬೀಬಿ ಎಂಬ ಮತ್ತೊಬ್ಬರು ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳು ಕೂಡ ಇದೇ ವೇಳೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಾಪೈನವಾಬ್‌ಗಂಜ್‌ನ ಸ್ಥಳೀಯ ನ್ಯಾಯಾಲಯ ಮಾನವೀಯ ಆಧಾರದಲ್ಲಿ ಆರು ಮಂದಿಗೂ ಜಾಮೀನು ನೀಡಿದೆ. ಬಾಂಗ್ಲಾದೇಶದ ನಾಗರಿಕರೊಬ್ಬರು ಇವರ ಪರ ಶ್ಯೂರಿಟಿ ನಿಂತು 5,000 ಟಾಕಾ ಜಾಮೀನು ಬಾಂಡ್ ಒದಗಿಸಿದ್ದಾರೆ.

‘ಮಾನವೀಯ ಆಧಾರದ ಮೇಲೆ’ ಸುನಾಲಿ ಖಾತೂನ್ ಮತ್ತು ಅವರ ಮಗನಿಗೆ ಭಾರತಕ್ಕೆ ಮರಳಲು ಅವಕಾಶ ನೀಡುವುದನ್ನು ಪರಿಗಣಿಸುವಂತೆ ಭಾರತೀಯ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ದಿನವೇ ಖಾತೂನ್ ಮತ್ತು ಅವರ ಕುಟುಂಬಸ್ಥರು ಬಾಂಗ್ಲಾದ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಖಾತೂನ್ ಅವರು ಗರ್ಭಿಣಿಯಾಗಿರುವುದನ್ನು ಗಮನಿಸಿ, ಪಶ್ಚಿಮ ಬಂಗಾಳದ ಮಾಲ್ಡಾ ಗಡಿಯ ಮೂಲಕ ಭಾರತಕ್ಕೆ ವಾಪಾಸಾಗಲು ಅನುಮತಿ ನೀಡಬಹುದೇ ಎಂಬುದರ ಕುರಿತು ಸೂಚನೆಗಳನ್ನು ಪಡೆಯಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್ ಖಾತೂನ್ ಅವರ ಪತಿಯ ವಾಪಸಾತಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಪ್ರಕರಣದ ಮುಂದಿನ ವಿಚಾರಣೆ ಬುಧವಾರ (ಡಿಸೆಂಬರ್ 3) ನಡೆಯಲಿದೆ.

ಚಾಪೈನವಾಬ್‌ಗಂಜ್ ನ್ಯಾಯಾಲಯ ಗಡಿಪಾರಾದವರ ಗುಂಪಿನಲ್ಲಿ ಗರ್ಭಿಣಿ ಮತ್ತು ಮಕ್ಕಳು ಇದ್ದಾರೆ ಎಂಬ ವಾದವನ್ನು ಅಂಗೀಕರಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ.

ಆದಾಗ್ಯೂ, ಅವರು ಬಾಂಗ್ಲಾದೇಶದಲ್ಲಿಯೇ ಇರಬೇಕು ಮತ್ತು ಅಗತ್ಯವಿದ್ದಾಗ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ಮ್ಯಾಜಿಸ್ಟ್ರೇಟ್ ವಿಧಿಸಿದ್ದಾರೆ. ಖಾತೂನ್‌ ಅವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡಬೇಕು ಮತ್ತು ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ಟೈಮ್ಸ್ ಆಫ್ ಇಂಡಿಯಾ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಖಾತೂನ್, ಭಾರತಕ್ಕೆ ಮರಳಲು ಬಯಸುವುದಾಗಿ ಹೇಳಿಕೊಂಡಿದ್ದು, ಇತ್ತೀಚೆಗೆ ತನ್ನ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಲವಾರು ತಿಂಗಳುಗಳಿಂದ ಈ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಎಸ್‌ಕೆ ಮೊಫೀಝುಲ್ ಅವರು, ಜಿಲ್ಲೆಯಲ್ಲಿ ಅವರಿಗೆ ಬಾಡಿಗೆ ವಸತಿ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಜಾಮೀನು ಆದೇಶದಲ್ಲಿ ಖಾತೂನ್ ಮತ್ತು ಉಳಿದವರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಯಾವುದೇ ನಿರ್ದೇಶನವಿಲ್ಲ ಎಂಬುವುದಾಗಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಖಾತೂನ್, ಸ್ವೀಟಿ ಬೀಬಿ ಮತ್ತು ಅವರ ಕುಟುಂಬಗಳು ಪಶ್ಚಿಮ ಬಂಗಾಳದ ಬಿರ್ಬಮ್ ಜಿಲ್ಲೆಯವರು ಎಂದು ಹೇಳಿಕೊಂಡಿದ್ದಾರೆ. ಖಾತೂನ್, ಅವರ ಪತಿ ಮತ್ತು ಮಗನನ್ನು ಜೂನ್ 20ರಂದು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆರು ದಿನಗಳ ನಂತರ ಮೂವರನ್ನೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು.

ಸೆಪ್ಟೆಂಬರ್ 26ರಂದು ಕಲ್ಕತ್ತಾ ಹೈಕೋರ್ಟ್ ಖಾತೂನ್ ಸೇರಿದಂತೆ ಆರು ಜನರ ವಿರುದ್ಧದ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ನಾಲ್ಕು ವಾರಗಳಲ್ಲಿ ಅವರನ್ನು ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರುವಂತೆ ನಿರ್ದೇಶಿಸಿತ್ತು.

ನಾಲ್ಕು ವಾರಗಳ ಅವಧಿ ಅಕ್ಟೋಬರ್ 24ರಂದು ಕೊನೆಗೊಂಡಿದೆ. ಅದಕ್ಕೂ ಎರಡು ದಿನಗಳ ಮೊದಲು ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮುಂದುವರಿದಿದೆ.

ಮೇ ತಿಂಗಳಿನಿಂದ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಾವಿರಾರು ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರೋ ಅಥವಾ ದಾಖಲೆರಹಿತ ವಲಸಿಗರೋ ಎಂಬುವುದನ್ನು ಸಾಬೀತುಪಡಿಸುವಂತೆ ಒತ್ತಾಯಿಸಲಾಗುತ್ತಿದೆ.

ಭಾರತೀಯ ಪ್ರಜೆಗಳಾದ ಹಲವಾರು ಕಾರ್ಮಿಕರನ್ನು ಅಕ್ರಮ ವಲಸಿಗರು ಎಂದು ಆರೋಪಿಸಿ ಈಗಾಗಲೇ ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂಬ ಆರೋಪವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಚರ್ಚೆಗೆ ಬಿಗಿಪಟ್ಟು ಹಿಡಿದ ಪ್ರತಿಪಕ್ಷಗಳು, ಉಭಯ ಸದನಗಳಲ್ಲಿ ಕೋಲಾಹಲ ; ಕಲಾಪ ಮುಂದೂಡಿಕೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದೂ (ಡಿ.2) ಕೂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ....

ಆಂಧ್ರಪ್ರದೇಶ| ‘ನೀವು ಕೊಳಕು ಜಾತಿಗೆ ಸೇರಿದವರು..’ ಎಂದು ದಲಿತ ವಿದ್ಯಾರ್ಥಿಗಳನ್ನು ನಿಂದಿಸಿದ ಇಂಗ್ಲಿಷ್ ಶಿಕ್ಷಕ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಿಂದ ಆಘಾತಕಾರಿ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಯಂಡಪಲ್ಲಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕರು ದಲಿತ ಸಮುದಾಯದ ವಿದ್ಯಾರ್ಥಿಗಳ ವಿರುದ್ಧ ಜಾತಿ ನಿಂದನೆ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು...

ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿದ ಕೇಂದ್ರ : ಗೌಪ್ಯತೆ ಕಳೆದುಕೊಳ್ಳುವ ಆತಂಕ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ಸೈಬರ್ ಭದ್ರತಾ ಅಪ್ಲಿಕೇಶನ್ 'ಸಂಚಾರ್ ಸಾಥಿ'ಯನ್ನು ಮೊದಲೇ ಇನ್‌ಸ್ಟಾಲ್‌ (Pre-install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂದು...

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು 'ಮದುವೆ'ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ...

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ...

ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ಶಿಕ್ಷಕ ಸರ್ವೇಶ್...

ಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟಿಸಿದ ಹಿನ್ನೆಲೆ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಾಳೆಗೆ (ಡಿಸೆಂಬರ್ 2) ಮುಂದೂಡಿಕೆಯಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ...

‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಕೆಲವು ಸಂಸದರು ಬೀದಿನಾಯಿಯನ್ನು ಕರೆತಂದಿದ್ದಾರೆ ಎಂದು ಆಕ್ಷೇಪಿಸಿದ್ದಾರೆ, ಮಾಧ್ಯಮಗಳ ಎದಿರು ಈ ಆಕ್ಷೇಪಣೆಗಳನ್ನು ತಳ್ಳಿಹಾಕಿರುವ ರೇಣುಕಾ ಚೌಧರಿ...

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ. ಶಾಹದರಾದ...

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 'ಈ ಹಿಂದೆ' ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ...