Homeಮುಖಪುಟಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ (ಡಿ.2) ವರದಿ ಮಾಡಿದೆ.

ಈ ನಾಲ್ವರು ಪುರುಷರು ಹಲವಾರು ವರ್ಷಗಳಿಂದ ನಯಾಗಢದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸೊಳ್ಳೆ ಪರದೆ, ಹೊದಿಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದರು. ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಡೊಮ್ಕಲ್ ಉಪವಿಭಾಗದ ಜಲಂಗಿ ಬ್ಲಾಕ್‌ನಲ್ಲಿರುವ ಸಾಗರ್‌ಪಾರ ಗ್ರಾಮ ಪಂಚಾಯತ್‌ಗೆ ಸೇರಿದವರು.

ನವೆಂಬರ್ 27ರಂದು, ನಾಲ್ವರಲ್ಲಿ ಒಬ್ಬರಾದ ಸಾಹೇಬ್ ಶೇಖ್ ಎಂಬವರ ಬಾಡಿಗೆ ಮನೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, “ನೀವು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ರೋಹಿಂಗ್ಯಾಗಳು” ಎಂದು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅಧಿಕಾರಿಗಳು ತನ್ನ ಗುರುತಿನ ಚೀಟಿಗಳನ್ನು ಕೇಳಿದ್ದಾರೆ ಎಂದು ಶೇಖ್ ಹೇಳಿರುವುದಾಗಿ ವರದಿ ತಿಳಿಸಿದೆ.

“ಅಧಿಕಾರಿಗೆ ನಾನು ನನ್ನ ಆಧಾರ್ ಕಾರ್ಡ್‌ ಮತ್ತು ವೋಟರ್ ಐಡಿ ತೋರಿಸಿದೆ. ಅದಕ್ಕೆ ಅವರು ತೃಪ್ತರಾಗಲಿಲ್ಲ. ನನ್ನ ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ಸಂಜೆ 5 ಗಂಟೆಯೊಳಗೆ ಎಲ್ಲರೂ ಠಾಣೆಗೆ ಬರುವಂತೆ ಸೂಚಿಸಿದರು” ಎಂದು ಸಾಹೇಬ್ ಶೇಖ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸ್ ಅಧಿಕಾರಿ ಹೇಳಿದಂತೆ ನಾಲ್ವರೂ ಓಡಗಾಂವ್ ಪೊಲೀಸ್ ಠಾಣೆಗ ಹೋಗಿದ್ದರು. ಅಲ್ಲಿ ಒಬ್ಬ ಅಧಿಕಾರಿ ನಾಲ್ವರೂ ಮೂರು ದಿನಗಳಲ್ಲಿ ಪಟ್ಟಣ ತೊರೆಯುವಂತೆ ಸೂಚಿಸಿದ್ದಾರೆ. ಬಂಗಾಳಿ ಭಾಷೆಯಲ್ಲಿ ಮಾತನಾಡಿದ ಕಾರಣ ಅವರನ್ನು ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗಳು ಎಂಬುವುದಾಗಿ ಆರೋಪಿಸಲಾಗಿದೆ ಎಂದು ವರದಿ ಹೇಳಿದೆ.

ಪೊಲೀಸರು ನಾಲ್ವರಿಂದಲೂ ಸಹಿ ಮಾಡಿದ ದಾಖಲೆಗಳ ಪ್ರತಿಗಳನ್ನು ತೆಗೆದುಕೊಂಡಿದ್ದಾರೆ.

“ನಾವು ಠಾಣೆಗೆ ಹೋದಾಗ ನಮಗೆ ಕಿರುಕುಳ ನೀಡುತ್ತಿದ್ದ ಹಿಂದುತ್ವ ಗುಂಪು ಕೂಡ ಠಾಣೆಯಲ್ಲಿ ಇತ್ತು. ಅವರನ್ನು ನಾವು ಮಾರುಕಟ್ಟೆ ಸೇರಿದಂತೆ ವಿವಿದೆಡೆಗಳಲ್ಲಿ ನೋಡಿದ್ದೇವೆ. ಅವರ ಮುಖ ನಮಗೆ ಪರಿಚಯವಿದೆ” ಎಂದು ನಾಲ್ವರಲ್ಲಿ ಒಬ್ಬರಾದ ಅಬ್ದುಸ್ಸಲಾಂ ಎಂಬವರು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವಿವರಿಸಿದೆ.

ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಮರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ, ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಕೇಳುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾದೇಶಕ್ಕೆ ಕಳುಹಿಸಲ್ಪಟ್ಟ ವ್ಯಕ್ತಿಗಳು ಭಾರತದಲ್ಲಿನ ರಾಜ್ಯ ಅಧಿಕಾರಿಗಳು ಅವರು ಭಾರತೀಯರು ಎಂದು ಸಾಬೀತುಪಡಿಸಿದ ನಂತರ ದೇಶಕ್ಕೆ ಮರಳಿದ್ದಾರೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೂಡ ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ.

ಒಡಿಶಾದಲ್ಲಿ, ಇತ್ತೀಚಿನ ದಿನಗಳಲ್ಲಿ ಬಂಗಾಳಿ ಮುಸ್ಲಿಮರು ಹಿಂಸಾಚಾರ ಮತ್ತು ಬೆದರಿಕೆಗಳನ್ನು ಎದುರಿಸುತ್ತಿರುವ ಬಗ್ಗೆ ಹಲವಾರು ವರದಿಯಾಗಿದೆ.

ನವೆಂಬರ್ 24ರಂದು, ಮುರ್ಷಿದಾಬಾದ್‌ನ ಚಳಿಗಾಲದ ಉಡುಪುಗಳ ಮಾರಾಟಗಾರ 24 ವರ್ಷದ ರಾಹುಲ್ ಇಸ್ಲಾಂ ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಲಾಗಿತ್ತು. ಗಂಜಾಂನಲ್ಲಿ ‘ಜೈ ಶ್ರೀ ರಾಮ್’ ಎಂದು ಹೇಳಲು ಅವರಿಗೆ ಒತ್ತಾಯಿಸಲಾಗಿತ್ತು. ನಿರಾಕರಿಸಿದ್ದಕ್ಕೆ ಗುಂಪೊಂದು ಅವರನ್ನು ಥಳಿಸಿತ್ತು ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮುರ್ಷಿದಾಬಾದ್‌ನಲ್ಲಿರುವ ತನ್ನ ಮನೆಗೆ ಹಿಂದಿರುಗಿದ ಇಸ್ಲಾಂನ ಉದ್ಯೋಗದಾತ ಮೈನುಲ್ ಸರ್ಕಾರ್, ಸಹಾಯಕ್ಕಾಗಿ ಒಡಿಶಾದ ಪೊಲೀಸರ ಬಳಿ ಹೋಗಿದ್ದೆ ಆದರೆ ಯಾವುದೇ ಮಾಹಿತಿ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.

ಜುಲೈನಲ್ಲಿ, ಒಡಿಶಾದ ಜಾರ್ಸುಗುಡದಲ್ಲಿ ನೂರಾರು ಬಂಗಾಳಿ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ಬಂಧಿಸಲಾಗಿತ್ತು. ಅಧಿಕಾರಿಗಳು ಅವರು ಭಾರತೀಯರು ಎಂದು ಖಚಿತಪಡಿಸಿಕೊಂಡ ನಂತರ ಅವರಲ್ಲಿ ಹಲವರನ್ನು ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ....

‘ಅಮೆರಿಕಾ ಅಧ್ಯಕ್ಷನ ಹತ್ಯೆಯ ಸಂಚು ರೂಪಿಸಿದರೆ ಇರಾನ್ ‘ಭೂಮಿಯಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್ 

ವಾಷಿಂಗ್ಟನ್: ಟೆಹ್ರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ಅನ್ನು "ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು’ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ. ಬೆದರಿಕೆಗಳ ಬಿಸಿ ವಿನಿಮಯದಲ್ಲಿ,...

ಆಲ್ಗಾರಿದಂ ಪಕ್ಷಪಾತ, ಎಐನಲ್ಲೂ ಜಾತಿವಾದ-ತಾರತಮ್ಯ : ಹೊಸ ಚರ್ಚೆ ಹುಟ್ಟು ಹಾಕಿದ ಡಾ. ವಿಜೇಂದರ್ ಹೇಳಿಕೆ

ಆಲ್ಗಾರಿದಂ ಪಕ್ಷಪಾತ (Algorithm bias) ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಪ್ರಮುಖ ಸಾಮಾಜಿಕ ನ್ಯಾಯ ಹೋರಾಟಗಾರ ಮತ್ತು ವಿದ್ವಾಂಸ ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು, ಚಾಟ್‌ಜಿಪಿಟಿ (ChatGPT)ಯಂತಹ ಎಐ...

‘ಸನಾತನ ಧರ್ಮ ವಿವಾದ’: ಉದಯನಿಧಿ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದು ಬಿಜೆಪಿ ನಾಯಕನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಮಧುರೈ: ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಕುರಿತ ಹೇಳಿಕೆಗಳನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಬಿಜೆಪಿ ಐಟಿ ವಿಭಾಗದ ನಾಯಕ ಅಮಿತ್ ಮಾಳವೀಯ ಅವರ ವಿರುದ್ಧ ದಾಖಲಾಗಿದ್ದ...

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...